ತಿರುಗೇಟು ನೀಡಲು ಮುಂಬಾ ಪ್ರಯತ್ನ


Team Udayavani, Aug 29, 2017, 1:08 PM IST

29-SPORTS-8.jpg

ಮುಂಬಯಿ: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾದ ಯು ಮುಂಬಾ ಸತತ ಸೋಲಿನಿಂದ ಕಂಗೆಟ್ಟಿದೆ. ತವರಿನಲ್ಲಿ ನಡೆಯುತ್ತಿರುವ ಪಂದ್ಯಗಳಲ್ಲಿ ಮುಂಬಾ ತಂಡ ತೀವ್ರ ಪೈಪೋಟಿ ನಡೆಸಿಯೂ ಸೋಲುತ್ತಿರುವುದು ಮುಂಬಾಗೆ ಆಘಾತ ನೀಡಿದೆ. 

ಮುಂಬಾ ತಂಡ ತವರಿನಲ್ಲಿ ಇನ್ನು ಮೂರು ಪಂದ್ಯ ಆಡಲಿದ್ದು ತಿರುಗೇಟು ನೀಡಲು ಪ್ರಯತ್ನಿಸಲಿದೆ. ಆದರೆ ಮುಂಬಾ ಗೆಲುವು ಸಾಧಿಸಲು ಬಹಳಷ್ಟು ಶ್ರಮ ವಹಿಸುವ ಅಗತ್ಯವಿದೆ. ಮುಂಬಾ ಮಂಗಳವಾರದ ಪಂದ್ಯದಲ್ಲಿ “ಎ’ ವಲಯದ ಅಗ್ರಸ್ಥಾನಿ ಗುಜರಾತ್‌ ತಂಡವನ್ನು ಎದುರಿಸಲಿದೆ. ಗುಜರಾತ್‌ ತಾನಾಡಿದ 10 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು 41 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಮುಂಬಾ ತಾನಾಡಿದ 9 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದು 19 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಹಾಗಾಗಿ ಮುಂಬಾ ಗೆಲುವು ಸಾಧಿಸಲು ಗುಜರಾತ್‌ ವಿರುದ್ಧ ಭರ್ಜರಿ ಆಟ ಪ್ರದರ್ಶಿಸಬೇಕಾಗಿದೆ. ಗುಜರಾತ್‌ ಇಷ್ಟರವರೆಗೆ ಸೋಲನ್ನು ಕಾಣದ ಏಕೈಕ ತಂಡವಾಗಿದೆ. 

ತವರಿನ ಮುಂದಿನೆರಡು ಪಂದ್ಯಗಳಲ್ಲಿ ಮುಂಬಾ ಅನುಕ್ರಮವಾಗಿ ಹರಿಯಾಣ ಮತ್ತು ಜೈಪುರ ತಂಡವನ್ನು ಎದುರಿಸಲಿದೆ. ಈ ಎರಡು ತಂಡಗಳು ಅಂಕಪಟ್ಟಿಯಲ್ಲಿ ಅನುಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನದಲ್ಲಿದೆ. ರಕ್ಷಣಾ ಆಟದಲ್ಲಿನ ವೈಫ‌ಲ್ಯದಿಂದ ರವಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ನಾವು ಸ್ವಲ್ಪದರಲ್ಲಿ ಸೋಲು ಕಾಣುವಂತಾಯಿತು ಎಂದು ಅನೂಪ್‌ ಹೇಳಿದ್ದಾರೆ. ನಮ್ಮ ರೈಡಿಂಗ್‌ ಪರವಾಗಿಲ್ಲ. ಆದರೆ ರಕ್ಷಣಾ ಆಟ ಬಿಗುವಾಗಿರಲಿಲ್ಲ. ಕೊನೆ ಕ್ಷಣದಲ್ಲಿ ಮಾಡಿದ ಕೆಲವೊಂದು ತಪ್ಪಿನಿಂದ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು ಎಂದು ಅವರು ತಿಳಿಸಿದರು.

ಇರಾನಿನ ಆಟಗಾರರಾದ ಮಿರಾಜ್‌ ಶೇಖ್‌ (11 ಅಂಕ) ಮತ್ತು ಅಬೋಲ್‌ಫಾಜಲ್‌ ಮಗ್ಸೋಡ್ಲು  (8 ಅಂಕ) ಅವರ ಅಮೋಘ ಆಟದಿಂದಾಗಿ ನಾವು ಮುಂಬಾ ತಂಡವನ್ನು 33-32 ಅಂಕಗಳಿಂದ ಸೋಲಿಸುವಂತಾಯಿತು ಎಂದು ಡೆಲ್ಲಿ ತಂಡದ ಕೋಚ್‌ ಡಾ| ರಮೇಶ್‌ ಭೆಂಡಿಗಿರಿ ಹೇಳಿದ್ದಾರೆ. ನಾವು ಅನೂಪ್‌ ಅವರನ್ನು ಕಟ್ಟಿಹಾಕಲು ಯೋಜನೆ ರೂಪಿಸಿದ್ದೆವು. ಅವರನ್ನು ಸಾಧ್ಯ ವಾದಷ್ಟು ಬೇಗ ಔಟ್‌ ಮಾಡಿಸಿದರೆ ಮುಂಬಾ ಮೇಲೆ ಒತ್ತಡ ಹೇರಲು ಸಾಧ್ಯವಾಗುತ್ತದೆ. ಮಿರಾಜ್‌ ಮತ್ತು ಅಬೋಲ್‌ಫಾಜಲ್‌ ಉತ್ತಮವಾಗಿ ರೈಡ್‌ ಮಾಡಿದರು. ನಮ್ಮ ರಕ್ಷಣಾ ಆಟ ಚೆನ್ನಾಗಿತ್ತು ಎಂದವರು ತಿಳಿಸಿದರು.

ಪ್ರೊ ಕಬಡ್ಡಿ  ಲೀಗ್‌: ಇಂದಿನ ಪಂದ್ಯಗಳು
ಬೆಂಗಳೂರು ಬುಲ್ಸ್‌- ಯುಪಿ ಯೋಧಾಸ್‌
ಆರಂಭ: ರಾತ್ರಿ 8.00

ಯು ಮುಂಬಾ- ಗುಜರಾತ್‌
ಆರಂಭ: ರಾತ್ರಿ 9.00

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.