ಡ್ರ್ಯಾಗನ್‌ ನಡೆಯ ಹಿಂದಿನ ರಹಸ್ಯವೇನು? ಬಗೆಹರಿಯಿತು ಬಿಕ್ಕಟ್ಟು


Team Udayavani, Aug 29, 2017, 2:51 PM IST

29-ANKANA-4.jpg

ಅತ್ಯಂತ ಬಿಗುವಿನ ಪರಿಸ್ಥಿತಿಗೆ ಕಾರಣವಾಗಿದ್ದ ಬಿಕ್ಕಟ್ಟೊಂದು ರಕ್ತಪಾತವಿಲ್ಲದೆ ಅಂತ್ಯ ಆಗಿದೆ ಎನ್ನುವುದು ಸಮಾಧಾನದ ಸಂಗತಿ. ಅಪೂರ್ವ ಸಂಯಮ ಕಾಯ್ದುಕೊಂಡ ಭಾರತೀಯ ಸೇನೆಯೂ ಅಭಿನಂದನಾರ್ಹ

ಇಡೀ ಜಗತ್ತು ಕುತೂಹಲ ಮತ್ತು ಆತಂಕದಿಂದ ಗಮನಿಸುತ್ತಿದ್ದ ಡೋಕ್ಲಾಂ ಬಿಕ್ಕಟ್ಟು ಶುರುವಾದಷ್ಟೇ ದಿಢೀರ್‌ ಆಗಿ ಮುಕ್ತಾಯವಾಗಿದೆ. ಬರೋಬ್ಬರಿ 72 ದಿನಗಳ ಕಾಲ ಮೂರು ದೇಶಗಳು ಸೇರುವ ಗಡಿಯಲ್ಲಿ ಮುಖಾಮುಖೀಯಾಗಿ ಕುಳಿತಿದ್ದ ಭಾರತ ಮತ್ತು ಚೀನದ ಸೇನೆಗಳು ಹಿಂದೆಗೆಯುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಪ್ರಕಟನೆ ನೀಡಿದೆ. ರಾಜತಾಂತ್ರಿಕ ಸಂವಹನಗಳ ಫ‌ಲಶ್ರುತಿಯಾಗಿ ಡೋಕ್ಲಾಂ ಬಿಕ್ಕಟ್ಟು ಶಮನಗೊಂಡಿದೆ, ಸೇನೆ ಹಿಂದೆಗೆಯಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಬಿಕ್ಕಟ್ಟು ಶಮನವಾಗಿರುವ ಕುರಿತು ಚೀನ ನೇರವಾಗಿ ಹೇಳದಿದ್ದರೂ ಭಾರತವೇ ಮೊದಲು ಸೇನೆಯನ್ನು ಹಿಂದೆಗೆ‌ಯಲು ಒಪ್ಪಿದ ಕಾರಣ ನಾವು ಸಕಾರಾತ್ಮಕವಾಗಿ ಪ್ರತಿಸ್ಪಂದಿಸಿದ್ದೇವೆ ಎನ್ನುವ ಮೂಲಕ ಬಿಕ್ಕಟ್ಟು ಪರಿಹಾರಗೊಂಡಿರುವುದನ್ನು ಪರೋಕ್ಷವಾಗಿ ಒಪ್ಪಿದೆ. 

ಭೂತಾನ್‌, ಚೀನ ಮತ್ತು ಭಾರತ ಸಂಧಿಸುವ ಡೋಕ್ಲಾಂನಲ್ಲಿ ಚೀನ 2012ರ ತ್ರಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ರಸ್ತೆ ನಿರ್ಮಿಸಲು ಹೊರಟದ್ದೇ ವಿವಾದದ ಮೂಲ. ಡೋಕ್ಲಾಂ ತನಗೆ ಸೇರಿದ್ದು ಎಂದು ಏಕಪಕ್ಷೀಯವಾಗಿ ನಿರ್ಧರಿಸಿದ ಚೀನ ವ್ಯೂಹಾತ್ಮಕವಾಗಿ ಅತ್ಯಂತ ಮಹತ್ವದ್ದಾಗಿರುವ ಈ ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಿಸುವ ಮೂಲಕ ಭಾರತದ ಮೇಲೆ ಸವಾರಿ ಮಾಡಲು ಮುಂದಾಗಿತ್ತು. ಸಕಾಲದಲ್ಲಿ ಎಚ್ಚೆತ್ತ ಭಾರತ ಇಲ್ಲಿ ಸೇನೆ ನಿಯೋಜನೆ ಮಾಡಿದ ಬಳಿಕ ಎರಡೂ ದೇಶಗಳ ನಡುವೆ ಯುದ್ಧ ನಡೆದು ಬಿಡಬಹುದು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಚೀನ ಪದೇ ಪದೇ ಯುದ್ಧದ ಮಾತನ್ನಾಡಿದರೂ ಭಾರತ ಅದ್ಭುತವಾದ ಸಂಯಮ ಪ್ರದರ್ಶಿಸಿ ಪರಿಸ್ಥಿತಿ ಕೈಮೀರದಂತೆ ನೋಡಿಕೊಳ್ಳುವಲ್ಲಿ ಸಫ‌ಲವಾಗಿತ್ತು. ಆದರೂ ಯಾವ ಕಾರಣಕ್ಕೂ ಡೋಕ್ಲಾಂ ಬಿಟ್ಟುಕೊಡುವುದಿಲ್ಲ ಎಂದಿದ್ದ ಚೀನ ಮೆತ್ತಗಾಗಲು ಕಾರಣವೇನು?  ಮುಖ್ಯವಾಗಿ ಕಾಣಿಸುವುದು ಸೆ. 3ರಿಂದ 5ರ ತನಕ ಕ್ಸಿಯಾಮೆನ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌ ಸಮಾವೇಶ. ಕಳೆದ ವರ್ಷ ಭಾರತ ಬ್ರಿಕ್ಸ್‌ ಆತಿಥ್ಯ ವಹಿಸಿ ಗೋವಾದಲ್ಲಿ ಅದನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟಿದೆ. ಆದರೆ ಡೋಕ್ಲಾಂ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚೀನದ ಆತಿಥ್ಯದಲ್ಲಿ ನಡೆಯುವ ಸಮಾವೇಶ ಯಶಸ್ವಿಯಾಗುವ ಕುರಿತು ಅನುಮಾನಗಳಿದ್ದವು. ಮಾತ್ರವಲ್ಲ, ಪ್ರಧಾನಿ ಮೋದಿ ಸಮಾವೇಶದಲ್ಲಿ ಭಾಗವಹಿಸುವ ಕುರಿತು ಅನಿಶ್ಚಿತತೆಗಳಿದ್ದವು. ಚೀನಕ್ಕೆ ಡೋಕ್ಲಾಂಗಿಂತಲೂ ಬ್ರಿಕ್ಸ್‌ ಹೆಚ್ಚು ಮುಖ್ಯ. 2009ರಲ್ಲಿ ಸ್ಥಾಪನೆಯಾಗಿರುವ ಬ್ರಿಕ್ಸ್‌ನ್ನು ಚೀನ, ಅಮೆರಿಕ-  ಐರೋಪ್ಯ ರಾಷ್ಟ್ರಗಳ ಆರ್ಥಿಕ ಪ್ರಾಬಲ್ಯಕ್ಕೆ ಸಡ್ಡು ಹೊಡೆಯುವ ಪರ್ಯಾಯ ವ್ಯವಸ್ಥೆ ಎಂದು ಭಾವಿಸಿದೆ. ಡೋಕ್ಲಾಂ ಬಿಕ್ಕಟ್ಟಿನಿಂದ ಬ್ರಿಕ್ಸ್‌ ಗೆ ಹಿನ್ನಡೆಯಾಗುವುದೆಂದರೆ ಚೀನದ ಆರ್ಥಿಕ ಹಿತಾಸಕ್ತಿಗೆ ಆಗುವ ಹಿನ್ನಡೆಯೆಂದೇ ಅರ್ಥ. ಭಾರತವಿಲ್ಲದ ಬ್ರಿಕ್ಸ್‌ ಅಪೂರ್ಣ ಎಂಬುದು ಚೀನಕ್ಕೆ ಚೆನ್ನಾಗಿ ಗೊತ್ತಿದೆ!  

ಇನ್ನೊಂದು ಕಾರಣ- ಡೋಕ್ಲಾಂ ವಿಚಾರದಲ್ಲಿ ಚೀನ ಅಂತಾರಾಷ್ಟ್ರೀಯವಾಗಿ ಏಕಾಂಗಿಯಾದದ್ದು. ನೆರೆಯ ದೇಶಗಳು ಮಾತ್ರವಲ್ಲದೆ ಅಮೆರಿಕ, ಬ್ರಿಟನ್‌, ಜಪಾನ್‌ ಸೇರಿದಂತೆ ದೂರದ ದೇಶಗಳು ಕೂಡ ಚೀನ‌ ವಾದವನ್ನು ಒಪ್ಪಿಕೊಳ್ಳಲಿಲ್ಲ. ನೇಪಾಳವನ್ನು ಬುಟ್ಟಿಗೆ ಹಾಕಿಕೊಳ್ಳುವ ಪ್ರಯತ್ನವೂ ವಿಫ‌ಲವಾಯಿತು. ಅಮೆರಿಕ, ಬ್ರಿಟನ್‌ ಬಿಕ್ಕಟ್ಟನ್ನು ರಾಜತಾಂತ್ರಿಕ ಮಾತುಕತೆಗಳ ಮೂಲಕ ಬಗೆಹರಿಸಿ ಎಂದು ಚೀನಕ್ಕೆ ಸ್ಪಷ್ಟವಾಗಿ ಹೇಳಿದ್ದವು. ಜಪಾನ್‌ ಕೂಡ ಚೀನದ ಭೂದಾಹವನ್ನು ಖಂಡಿಸಿ ಬಿಕ್ಕಟ್ಟು ಬಗೆಹರಿಯದೆ ಯಥಾಸ್ಥಿತಿಯನ್ನು ಬದಲಾಯಿಸುವುದು ಸರಿಯಲ್ಲ ಎಂದಿತ್ತು. ಭೂತಾನ್‌ ಆರಂಭದಲ್ಲೇ ತಾನು ಭಾರತದ ಪರ ಎಂದ ಮೇಲೆ ಡೋಕ್ಲಂ ಮೇಲೆ ಹಕ್ಕು ಸಾಧಿಸುವುದು ಸುಲಭವಲ್ಲ ಎಂಬ ವಾಸ್ತವ ಅರಿವಾಗಿ ಚೀನ ಹಿಂದೆ ಸರಿಯಲು ಒಪ್ಪಿರುವ ಸಾಧ್ಯತೆಯಿದೆ. ಏನೇ ಆದರೂ ಅತ್ಯಂತ ಬಿಗುವಿನ ಪರಿಸ್ಥಿತಿಗೆ ಕಾರಣವಾಗಿದ್ದ ಬಿಕ್ಕಟ್ಟೊಂದು ರಕ್ತಪಾತವಿಲ್ಲದೆ ಅಂತ್ಯವಾಗಿದೆ ಎನ್ನುವುದು ಸಮಾಧಾನದ ಸಂಗತಿ. ಅಪೂರ್ವ ಸಂಯಮವನ್ನು ಕಾಯ್ದುಕೊಂಡು ಸನ್ನಿವೇಶಗಳನ್ನು ನಿಭಾಯಿಸಿದ ಭಾರತೀಯ ಸೇನೆ ಅಭಿನಂದನಾರ್ಹ. ಹಾಗೆಂದು ಗಡಿ ವಿವಾದ ಇಲ್ಲಿಗೆ ಮುಗಿಯಿತು ಎಂದು ಮೈಮರೆಯುವಂತಿಲ್ಲ. ಚೀನದ ಜತೆಗೆ ಭಾರತ ಸುದೀರ್ಘ‌ ಗಡಿ ಹಂಚಿಕೊಂಡಿದೆ. ಈ ಪೈಕಿ ಅರುಣಾಚಲ ಪ್ರದೇಶವೂ ಸೇರಿದಂತೆ ಹಲವು ಆಯಕಟ್ಟಿನ ಪ್ರದೇಶಗಳನ್ನು ಚೀನ ತನ್ನದೆಂದು ಹೇಳುತ್ತಿದೆ. ಹೀಗಾಗಿ ಯಾವ ಸಮಯದಲ್ಲೂ ಚೀನ ಮತ್ತೂಮ್ಮೆ ಮೇಲೇರಿ ಬರಬಹುದು. ಇನ್ನೊಂದು ಗಮನಾರ್ಹ ಅಂಶವೆಂದರೆ ಡೋಕ್ಲಾಂ ವಿವಾದ ಯಾವುದೇ ಒಪ್ಪಂದವಿಲ್ಲದೆ ಬಗೆಹರಿದಿದೆ. ಹೀಗಾಗಿ ಇನ್ನೊಮ್ಮೆ ಚೀನ ಡೋಕ್ಲಾಂ ಮೇಲೆ ಕಣ್ಣು ಹಾಕುವುದಿಲ್ಲ ಎಂದು ಖಾತರಿ ನೀಡಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.