ನಗರೀಕರಣದಿಂದ ಸಮಸ್ಯೆ ಹೆಚ್ಚಳ: ಖಂಡ್ರೆ
Team Udayavani, Aug 30, 2017, 9:20 AM IST
ಬೆಂಗಳೂರು: ನಗರೀಕರಣ ಹೆಚ್ಚಾದಂತೆ ಸರ್ಕಾರಕ್ಕೆ ಸಮಸ್ಯೆ ಹೆಚ್ಚಾಗುತ್ತದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದ್ಧಾರೆ.
ಸ್ವಚ್ಛ ಭಾರತ ಮಿಷನ್ ಪರಿಣಾಮಕಾರಿ ಅನುಷ್ಠಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಗ್ರಾಮೀಣ ಪ್ರದೇಶದಿಂದ ಜನರು ನಗರಕ್ಕೆ ವಲಸೆ ಬರುತ್ತಿರುವ ಪ್ರಮಾಣ ಹೆಚ್ಚಾಗಿದೆ. ಶೇ.40 ರಿಂದ 50ರಷ್ಟು ಜನರು ನಗರ ಪ್ರದೇಶ ದಲ್ಲಿ ವಾಸವಾಗಿದ್ದಾರೆ. 2026ರ ಹೊತ್ತಿಗೆ ನಗರ ಪ್ರದೇಶದಲ್ಲಿ ಶೇ.55ರಿಂದ 60ರಷ್ಟು ಜನ ವಾಸವಾಗು ತ್ತಾರೆ. ಗ್ರಾಮೀಣ ಜನರ ವಲಸೆ ತಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ನಗರ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿ ಸರ್ಕಾರ ಎಲ್ಲರಿಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗದೇ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ಮೂಲಕ ಜನರ ಆರೋಗ್ಯ ಸುಧಾರಣೆಗೂ ಗಮನ ಹರಿಸಬೇಕಾಗಿದೆ. ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಕಲಬುರಗಿ ಹಾಗೂ ಮೈಸೂರು ವಿಭಾಗೀಯ ಮಟ್ಟದ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನ ಪ್ರತಿನಿಧಿಗಳು, ಪೌರಾಡಳಿತ ಇಲಾಖೆ ಕಾರ್ಯದರ್ಶಿ ಅಂಜುಮ್ ಫರ್ವೆಜ್, ನಿರ್ದೇಶಕರಾದ ಡಾ. ವಿಶಾಲ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ