“ತಿಥಿ’ ಪೂಜಾ ಹೊಸ ಚಿತ್ರ


Team Udayavani, Aug 30, 2017, 10:32 AM IST

POOJA.jpg

ಕನ್ನಡದಲ್ಲಿ ಈಗ ಒಂದಷ್ಟು ವಿಭಿನ್ನ ಹಾಗೂ ಹೊಸ ಶೈಲಿಯ ಶೀರ್ಷಿಕೆಗಳು ಬರುತ್ತಿವೆ. ಈ ಮೂಲಕ ಆರಂಭದಲ್ಲೇ ಆ ಚಿತ್ರಗಳು ಗಮನ ಸೆಳೆಯುತ್ತಿರುವುದಂತೂ ಸುಳ್ಳಲ್ಲ. “ದಯವಿಟ್ಟು ಗಮನಿಸಿ’, “ಕನ್ನಡಕ್ಕಾಗಿ ಒಂದನ್ನು ಒತ್ತಿ’ ಎಂಬ ಹೊಸ ಬಗೆಯ ಟೈಟಲ್‌ ಸಾಲಿಗೆ ಈಗ ಮತ್ತೂಂದು ಸೇರ್ಪಡೆಯಾಗಿದೆ. ಅದು “ನೀವು ಕರೆ ಮಾಡಿದ ಚಂದಾದಾರರು ಬಿಜಿಯಾಗಿದ್ದಾರೆ’. ಹೌದು, ಹೀಗೊಂದು ಶೀರ್ಷಿಕೆಯ ಸಿನಿಮಾ ಈಗ ಸೆಟ್ಟೇರಲು ರೆಡಿಯಾಗಿದೆ.

ಸಾಮ್ಯುವೆಲ್‌ ಟೋನಿ ಈ ಚಿತ್ರದ ನಿರ್ದೇಶಕರು. ಯಾರು ಈ ಸಾಮ್ಯುವೆಲ್‌ ಟೋನಿ ಎಂದರೆ ನಿಮಗೆ “ದೂದ್‌ ಸಾಗರ್‌’ ಚಿತ್ರ ತೋರಿಸಬೇಕು. ಮೂರು ವರ್ಷಗಳ ಹಿಂದೆ “ದೂದ್‌ ಸಾಗರ್‌’ ಎಂಬ ಚಿತ್ರವೊಂದು ಬಂದಿರೋದು ನಿಮಗೆ ನೆನಪಿರಬಹುದು. ಆ ಚಿತ್ರವನ್ನು ನಿರ್ದೇಶಿಸಿದ್ದು, ಇದೇ ಸಾಮ್ಯುವೆಲ್‌. ಈಗ ಎರಡನೇ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಚಿತ್ರದ ಟೈಟಲ್‌ಗ‌ೂ ಕಥೆಗೂ ಏನು ಸಂಬಂಧ ಎಂದು ನೀವು ಕೇಳಬಹುದು.

ಚಿತ್ರದ ಟೈಟಲ್‌ನಲ್ಲೇ ಕಥೆ ಅಡಗಿದೆ ಎನ್ನುತ್ತಾರೆ ಸಾಮ್ಯುವೆಲ್‌. “ಸದ್ಯ ಎಲ್ಲರೂ ಬಿಜಿ ಎನ್ನುತ್ತಾರೆ. ಈ ನಡುವೆ ಸಂಬಂಧಗಳು ಕಳೆದುಹೋಗುತ್ತಿವೆ. ಆದರೆ, ಯಾಕಾಗಿ ಬಿಜಿಯಾಗಿರುತ್ತೇವೆ, ಬಿಜಿ ಬಿಜಿ ಎನ್ನುತ್ತಾ ನಾವು ಏನು ಸಾಧಿಸುತ್ತಿದ್ದೇವೆ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆ. ಇಂದಿನ ಟ್ರೆಂಡ್‌ಗೆ ತಕ್ಕುದಾದ ಹೊಸ ವಿಷಯವನ್ನು ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ’ ಎನ್ನುವುದು ನಿರ್ದೇಶಕ ಸಾಮ್ಯುವೆಲ್‌ ಮಾತು.  

ಈ ಚಿತ್ರದಲ್ಲಿ ಪೂಜಾ ನಾಯಕಿಯಾಗಿ ನಟಿಸುತ್ತಿದ್ದಾರೆ. “ತಿಥಿ’ ಚಿತ್ರದಲ್ಲಿ ಕಾವೇರಿ ಪಾತ್ರದ ಮೂಲಕ ಗಮನ ಸೆಳೆದ ಪೂಜಾ ಈಗ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಅವರ ಪಾತ್ರ ಪ್ರಮುಖವಾಗಿದೆಯಂತೆ. “ಚಿತ್ರದಲ್ಲಿ ನಾಯಕಿಯ ಪಾತ್ರ ಕೂಡಾ ಪ್ರಮುಖವಾಗಿದ್ದು, ಪರ್‌ಫಾರ್ಮೆನ್ಸ್‌ಗೆ ಹೆಚ್ಚಿನ ಅವಕಾಶವಿದೆ. ಆ ಪಾತ್ರದಲ್ಲಿ ಪೂಜಾ ನಟಿಸುತ್ತಿದ್ದು, ಅವರು ಕಥೆ ಕೇಳಿ ತುಂಬಾ ಇಷ್ಟಪಟ್ಟರು’ ಎನ್ನುತ್ತಾರೆ ಸಾಮ್ಯುವೆಲ್‌.

ಚಿತ್ರದ ನಾಯಕ ಸೇರಿದಂತೆ ಇತರ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ. ಚಿತ್ರದ ಪ್ರಮುಖ ಪಾತ್ರವೊಂದಕ್ಕಾಗಿ ನಾನಾ ಪಾಟೇಕರ್‌ ಅವರನ್ನು ಕರೆತರುವ ಪ್ರಯತ್ನ ಕೂಡಾ ನಡೆಯುತ್ತಿದೆಯಂತೆ. ಚಿತ್ರ ಪ್ಲಸ್‌ ಸರ್ವೇಸ್‌ ಮೂವೀಸ್‌ ಬ್ಯಾನರ್‌ನಡಿ ನಿರ್ಮಾಣವಾಗುತ್ತಿದೆ. ಸದ್ಯದಲ್ಲೇ ಚಿತ್ರದ ಮೋಶನ್‌ ಪೋಸ್ಟರ್‌ ಬಿಡುಗಡೆ ಮಾಡುವ ಉದ್ದೇಶ ಕೂಡಾ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.