ಸಾಂಬಾರ್‌ ಸೊಪ್ಪಿನ ಸೂಪರ್‌ ರುಚಿ


Team Udayavani, Aug 30, 2017, 1:01 PM IST

30-AVALU-6.jpg

ಮಳೆಗಾಲದಲ್ಲಿ ಮಲೆನಾಡಿನ ಹಳ್ಳಿಗಳ ಮನೆಗಳಿಗೆ ಹೋದರೆ, ಸಾಂಬಾರ್‌ ಸೊಪ್ಪಿನ ವೈವಿಧ್ಯಗಳ ಸವಿಯನ್ನು ಉಣ್ಣಬಹುದು. ಜ್ವರ, ನೆಗಡಿಯಂಥ ಸಮಸ್ಯೆಗಳಿದ್ದಾಗ ಔಷಧದ ರೂಪದಲ್ಲೂ ಇದು ಬಳಕೆಯಾಗುತ್ತದೆ. ಈ ಸೊಪ್ಪಿನಿಂದ ತಯಾರಿಸುವ ಆರೋಗ್ಯಕರ ಮತ್ತು ರುಚಿಕರ ಪದಾರ್ಥಗಳ ಬಗೆಗಳು ಇಲ್ಲಿವೆ…

1. ಸಾಂಬಾರ್‌ ಸೊಪ್ಪಿನ ಅನ್ನ
 ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿರುವ ಸಾಂಬಾರ್‌ ಸೊಪ್ಪು, ಕತ್ತರಿಸಿದ ಈರುಳ್ಳಿ ಕಾಲು ಕಪ್‌, ಒಗ್ಗರಣೆಗೆ- ಸ್ವಲ್ಪ ಎಣ್ಣೆ, ಸಾಸಿವೆ, ಉದ್ದಿನಬೇಳೆ, ಅರಿಶಿನ ಪುಡಿ, ರುಚಿಗೆ ಉಪ್ಪು ಮತ್ತು ಹುಳಿ, ಅನ್ನ ಮೂರು ಕಪ್‌, ಹಸಿಮೆಣಸು ಸಣ್ಣಗೆ ಕೊಚ್ಚಿದ್ದು ಒಂದು.

 ಮಾಡುವ ವಿಧಾನ: ಒಗ್ಗರಣೆ ತಯಾರಿಸಿಕೊಂಡು ಸಾಂಬಾರ್‌ ಸೊಪ್ಪು, ಈರುಳ್ಳಿ, ಹಸಿಮೆಣಸು ಹಾಕಿ ಒಂದೆರಡು ಸುತ್ತು ಹುರಿಯಿರಿ. ನಂತರ ಅನ್ನ, ಉಪ್ಪು, ಹುಳಿ ಸೇರಿಸಿ ಚೆನ್ನಾಗಿ ಬಿಸಿಯಾದ ಮೇಲೆ ಇಳಿಸಿರಿ.
 
2. ಸೊಪ್ಪಿನ ಬೋಂಡ
ಬೇಕಾಗುವ ಸಾಮಗ್ರಿ: ಸಣ್ಣಗೆ ಕತ್ತರಿಸಿದ ಸಾಂಬಾರ್‌ ಸೊಪ್ಪು- 1 ಕಪ್‌, ಸಣ್ಣಗೆ ಕೊಚ್ಚಿದ ಈರುಳ್ಳಿ- 1 ಕಪ್‌, ಕಡ್ಲೆ ಹಿಟ್ಟು- 1 ಕಪ್‌, ಅಕ್ಕಿ ಹಿಟ್ಟು- 2 ಚಮಚ, ಮೊಸರು- ಅರ್ಧ ಕಪ್‌, ಖಾರಕ್ಕೆ ಹಸಿಮೆಣಸು ಅಥವಾ ಕೆಂಪುಮೆಣಸಿನ ಪುಡಿ, ರುಚಿಗೆ ಉಪ್ಪು, ಕರಿಯಲು ಎಣ್ಣೆ.

ಮಾಡುವ ವಿಧಾನ: ಕೊಚ್ಚಿಕೊಂಡ ಪದಾರ್ಥವನ್ನು ಕಡ್ಲೆ ಹಿಟ್ಟಿನೊಂದಿಗೆ ಬೆರೆಸಿ, ಅಕ್ಕಿ ಹಿಟ್ಟನ್ನು ಸೇರಿಸಿ, ಉಪ್ಪು ಮೊಸರು ಹಾಕಿ ಬೇಕಾದಷ್ಟು ನೀರು ಸೇರಿಸಿ, ಎರಡು ಚಮಚ ಕಾದ ಎಣ್ಣೆಯನ್ನು ಈ ಹಿಟ್ಟಿಗೆ ಬೆರೆಸಿ ಕಾದ ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿದು, ಬಿಸಿ ಇರುವಾಗಲೇ ಟೊಮೇಟೊ ಸಾಸ್‌ನೊಂದಿಗೆ ಸವಿಯಿರಿ. 
 
3. ತಂಬುಳಿ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಸಾಂಬಾರ್‌ ಸೊಪ್ಪು- ಕಾಲು ಕಪ್‌, ಕೊಚ್ಚಿದ ಈರುಳ್ಳಿ- ಅರ್ಧ ಕಪ್‌, ಸಣ್ಣಗೆ ಕತ್ತರಿಸಿದ ಹಸಿಮೆಣಸು- 2, ಒಗ್ಗರಣೆಗೆ ಎಣ್ಣೆ, ಸಾಸಿವೆ, ಚಿಟಿಕೆ ಇಂಗು, ಕಡೆದ ಮಜ್ಜಿಗೆ ಅರ್ಧ ಲೀಟರ್‌, ರುಚಿಗೆ ಉಪ್ಪು, ಬೆಲ್ಲ- 1 ಚಮಚ. (ಸಿಹಿ ಜಾಸ್ತಿ ಬೇಕಿದ್ದರೆ ಬೆಲ್ಲ ಹಾಕಿ)

ಮಾಡುವ ವಿಧಾನ: ಒಗ್ಗರಣೆಗೆ ಎಣ್ಣೆ ಕಾಯಿಸಿಕೊಂಡು, ಸಾಸಿವೆ ಇಂಗು ಹಾಕಿ ನಂತರ ಕೊಚ್ಚಿಕೊಂಡ ಈರುಳ್ಳಿ, ಸಾಂಬಾರ್‌ ಸೊಪ್ಪು, ಹಸಿಮೆಣಸು ಹಾಕಿ ಎರಡು ಸುತ್ತು ಹುರಿದು ಅರ್ಧ ಕಪ್‌ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಕುದಿಸಿರಿ. ನಂತರ ಅದಕ್ಕೆ ಕಡೆದ ಮಜ್ಜಿಗೆ ಸೇರಿಸಿ. (ಮಜ್ಜಿಗೆ ಹಾಕಿದ ಮೇಲೆ ಮತ್ತೆ ಬಿಸಿ ಮಾಡಬಾರದು) 

4. ಸಾಂಬಾರ್‌ ಸೊಪ್ಪಿನ ಸಾಸಿವೆ
ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಸಾಂಬಾರ್‌ ಸೊಪ್ಪು- ಅರ್ಧ ಕಪ್‌, ತೆಂಗಿನ ತುರಿ- ಅರ್ಧ ಕಪ್‌, ಸಾಸಿವೆ- ಅರ್ಧ ಚಮಚ, ಅರಿಶಿನ ಪುಡಿ- ಅರ್ಧ ಚಮಚ, ಹಸಿಮೆಣಸಿನ ಕಾಯಿ- 2, ಅರ್ಧ ಲಿಂಬೆ ಹಣ್ಣು, ಬೆಲ್ಲ ಅಥವಾ ಸಕ್ಕರೆ- 2 ಚಮಚ, ರುಚಿಗೆ ಉಪ್ಪು, ಒಗ್ಗರಣೆಗೆ ಎಣ್ಣೆ, ಸಾಸಿವೆ, ಚಿಟಿಕೆ ಅರಿಶಿನ ಪುಡಿ, ಉದ್ದಿಬೇಳೆ ಸ್ವಲ್ಪ.

ಮಾಡುವ ಧಾನ: ಒಗ್ಗರಣೆಗೆ ಎಣ್ಣೆ ಬಿಸಿ ಮಾಡಿಕೊಂಡು, ಕೊಚ್ಚಿಕೊಂಡ ಸೊಪ್ಪು ಹಾಕಿ ಕಾಲು ಕಪ್‌ ನೀರು ಸೇರಿಸಿ ಉಪ್ಪು, ಹುಳಿ, ಬೆಲ್ಲ ಹಾಕಿ ಬೇಯಿಸಿರಿ. ನಂತರ ತೆಂಗಿನ ತುರಿ, ಅರಿಶಿನ ಪುಡಿ, ಹಸಿಮೆಣಸು, ಸಾಸಿವೆ ಹಾಕಿ ನುಣ್ಣಗೆ ರುಬ್ಬಿಕೊಂಡು ಬೇಯಿಸಿದ ಸೊಪ್ಪಿಗೆ ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಕುದಿಸಿ. (ತಣ್ಣಗಾದ ಮೇಲೆ ಬೇಕಿದ್ದರೆ ಮೊಸರು ಸೇರಿಸಬಹುದು)

ಚಿತ್ರ-ಬರಹ: ಅರ್ಚನಾ ಬೊಮ್ನಳ್ಳಿ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.