ಪುರಸಭಾ ವ್ಯಾಪ್ತಿಯ ಅನಧಿಕೃತ ಅಂಗಡಿಗಳ ತೆರವಿಗೆ ಸದಸ್ಯರ ಆಗ್ರಹ


Team Udayavani, Aug 31, 2017, 7:45 AM IST

3008kde26-1.jpg

ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಅನಧಿಕೃತ ಅಂಗಡಿಗಳ ತೆರವಿಗೆ  ನ್ಯಾಯಾಲಯದ ಆದೇಶ ನೀಡಿ ಹಲವು ದಿನಗಳೇ ಕಳೆದಿದ್ದ‌ರೂ ಇನ್ನೂ ಕೂಡಾ ತೆರವು ಗೊಳಿಸದ ಬಗ್ಗೆ  ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷದ ಸದಸ್ಯರ ನಡುವೆ ಚರ್ಚೆ ನಡೆಯಿತು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರು ಅನಧಿಕೃತ ಅಂಗಡಿಗಳ ತೆರವುಗೊಳಿಸಲು ಈಗಾಗಲೇ ನ್ಯಾಯಾಲಯ ಆದೇಶ  ನೀಡಿದ್ದರೂ ಈ ತನಕ  ತೆರವುಗೊಳಿಸದೇ ಇರುವ ಬಗ್ಗೆ  ಸದಸ್ಯ ಸತೀಶ್‌ ಶೆಟ್ಟಿ ಸಭೆಯ ಗಮನಕ್ಕೆ ತಂದರು. ನ್ಯಾಯಾಲಯದ ಆದೇಶದಂತೆ ತುರ್ತು ತೆರವುಗೊಳಿಸಲು ಆದೇಶ ನೀಡಿದ್ದರಿಂದ ಯಾವುದೇ ಮೀನಮೇಷ ಮಾಡದೇ ತೆರವುಗೊಳಿಸಿ, ಜತೆಗೆ  ನ್ಯಾಯಾಲಯದಿಂದ ಆದೇಶ ಬಂದಿರುವ ಇತರ ಅಂಗಡಿಗಳ  ತೆರವುಗೊಳಿಸುವ ಪ್ರಕ್ರಿಯೆ ನಡೆಯಲಿ ಎಂದರು.  ಇದಕ್ಕೆ ಪ್ರತಿಯಾಗಿ ಮಾತನಾಡಿದ ಸದಸ್ಯ ಶ್ರೀಧರ್‌ ಸೇರುಗಾರ್‌ ಈಗಾಗಲೇ ಪುರಸಭಾ ವ್ಯಾಪ್ತಿಯಲ್ಲಿ ಹಲವು ಹೊಸ ಕಟ್ಟಡಗಳು ಆಗಿವೆ. ಅವುಗಳಿಗೆ ಯಾವುದೇ ನೀತಿ ನಿಯಮವನ್ನು  ರೂಪಿಸಿದೇ ಆದೇಶ ನೀಡಲಾಗಿದೆ. ಅವುಗಳನ್ನು ಸಹ ತೆರವುಗೊಳಿಸಬೇಕಾಗಿದೆ. ಶಾಸ್ತ್ರೀ ವೃತ್ತದ  ಬಳಿಯಲ್ಲಿರುವ ಗೂಡಂಗಡಿಗಳನ್ನು  ತೆರವುಗೊಳಿಸಲು ತೆರವುಗೊಳಿಸುವಾಗ ಅವರಿಗೆ ಬೇರೆ ಪರ್ಯಾಯ ವ್ಯವಸ್ಥೆ ಮಾಡಿದ ಹಾಗೇ ಇತರ ಅಂಗಡಿಗಳಿಗೂ ಅವಕಾಶ ಮಾಡಿಕೊಡಬೇಕು ಎಂದು  ಅವರು ಆಗ್ರಹಿಸಿದರು. ಸದಸ್ಯ ಪ್ರಭಾಕರ್‌ ಕೋಡಿ  ಹಾಗೂ ಚಂದ್ರ ಅಮೀನ್‌  ಅವರಿಗೆ ಧ್ವನಿಯಾಗಿ ಮಾತನಾಡಿದರು. 

ನ್ಯಾಯಾಲಯ ಆದೇಶವಾಗಿರುವುದರಿಂದ ಕೂಡಲೇ ತೆರವು ಗೊಳಿಸಿ ಎಂದು ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಸದಸ್ಯ ರವಿರಾಜ್‌ ಖಾರ್ವಿ ಆಗ್ರಹಿಸಿದರು. ಈ ವಿಷಯದ ಬಗ್ಗೆ ಮಾತನಾಡಿದ ಅಧ್ಯಕ್ಷರು ಯಾವುದೇ ಪಕ್ಷ ಭೇದವಿಲ್ಲದೇ  ನ್ಯಾಯಾ ಲಯದ ಆದೇಶವನ್ನು ಪಾಲಿಸಲಾಗುವುದು ಮತ್ತು ಕಟ್ಟಡವನ್ನು ತೆರವುಗೊಳಿಸಲು ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಪಿಡಬ್ಲೂéಡಿ  ಜಾಗ ಪುರಸಭೆಗೆ ಹಸ್ತಾಂತರ ಕುಂದಾಪುರ ಶಾಸ್ತ್ರಿವೃತ್ತದ ಪರಿಸರದಲ್ಲಿ  ಇರುವ ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ  ಈಗಾಗಲೇ ಹಳೆಯ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿದ್ದು,  ಈ ಜಾಗವನ್ನು  ಪುರಸಭೆಗೆ ಹಸ್ತಾಂತರಿಸುವ ಕುರಿತು  ಸಭೆಯಲ್ಲಿ ಚರ್ಚೆ ನಡೆಯಿತು.  ಈಗಾಗಲೇ ಈ ಪ್ರದೇಶದಲ್ಲಿರುವ ಹಳೆಯ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿದ್ದು ಇವುಗಳನ್ನು ಕೆಡವಿ ರಂಗಮಂದಿರವನ್ನು ನಿರ್ಮಿಸುವ ಬಗ್ಗೆ  ಈಗಾಗಲೇ ಜಿಲ್ಲಾಧಿಕಾರಿ ಅವರಿಗೆ ಈಗಾಗಲೇ ಮನವರಿಕೆ ಮಾಡಲಾಗಿದ್ದು, ನಗರದ ಮಧ್ಯಭಾಗದಲ್ಲಿ ಪುರಸಭೆಗೆ ಜಾಗ ದೊರೆತಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗ ವಾಗುತ್ತದೆ ಎಂದು ಮುಖ್ಯಾಧಿಕಾರಿ ಅವರು ಸಭೆಯ ಗಮನಕ್ಕೆ ತಂದರು.

ಈಗಾಗಲೇ ಲೋಕೋಪಯೋಗಿ ಇಲಾಖೆಯ ಸುರ್ಪದಿಯಲ್ಲಿರುವ ಈ ಜಾಗವನ್ನು  ಪುರಸಭೆ ಕಸಿದುಕೊಂಡಂತೆ ಆಗುತ್ತದೆ. ಪುರಸಭೆಗೆ ಹಾಗೂ ಇಲಾಖೆಯ ನಡುವೆ ತಿಕ್ಕಾಟಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಸದಸ್ಯೆ ಪುಷ್ಪಾ ಶೇಟ್‌ ಹೇಳಿದರು. ಇಲ್ಲಿ ಖಾಲಿ ಜಾಗ ಇರುವ ಬಗ್ಗೆ ಈಗಾಗಲೇ  ಜಿಲ್ಲಾಧಿಕಾರಿ ಅವರಿಗೆ ಮನವರಿಕೆ ಆಗಿದೆ. ಜಾಗ ಪುರಸಭೆಗೆ ಸಿಕ್ಕಿದರೆ ಅದು ಲಾಭ ಎಂದು ಮುಖ್ಯಾಧಿಕಾರಿ ಹೇಳಿದರು.

ಸದ್ರಿ ಜಾಗದಲ್ಲಿ  ರಂಗಭೂಮಿ ನಿರ್ಮಾಣ ಮಾಡುವ  ಪ್ರಸ್ತಾವವನ್ನು ಕೈಬಿಟ್ಟು ಈ ಜಾಗದಲ್ಲಿ  ಕುಂದಾಪುರದಲ್ಲಿರದ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸುವ ಬಗ್ಗೆ  ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸುವುದು  ಉತ್ತಮ  ಎಂದು ಸದಸ್ಯ ರವಿರಾಜ್‌ ಖಾರ್ವಿ ಹೇಳಿದರೆ,  ಸದಸ್ಯ ಶಿವರಾಮ ಪುತ್ರನ್‌ ಪ್ರತಿಕ್ರಿಯಿಸಿ ಕುಂದಾಪುರದಲ್ಲಿ  ಪುರಭವನ ನಿರ್ಮಾಣಕ್ಕೆ ಈ ಜಾಗವನ್ನು ಮೀಸಲಾಗಿಡುವುದು ಸೂಕ್ತ ಎಂದರು. ಈ ನಡುವೆ ಮಾತನಾಡಿದ ಸದಸ್ಯ ವಿಜಯ ಎಸ್‌. ಪೂಜಾರಿ ಮೊದಲು ಈ ಜಾಗ ಕುಂದಾಪುರ ಪುರಸಭೆಗೆ ಹಸ್ತಾಂತರವಾಗಲಿ  ಉಳಿದದ್ದನ್ನು ನಂತರ ಚರ್ಚೆ ನಡೆಸೋಣ ಎಂದರು. ವಿಟuಲ ಕುಂದರ್‌ ಹಾಗೂ ಉದಯ ಮೆಂಡನ್‌ ಧ್ವನಿಗೂಡಿಸಿದರು.

ಅಂಗನವಾಡಿ ದುರಸ್ತಿಗೆ ಆಗ್ರಹ
ಪುರಸಭಾ ವ್ಯಾಪ್ತಿಯಲ್ಲಿರುವ ಕೋಡಿಯ ಅಂಗನವಾಡಿ ಕಟ್ಟಡ ನಾದುರಸ್ತಿಯಲ್ಲಿದ್ದು ಅದನ್ನು ತುರ್ತಾಗಿ ದುರಸ್ತಿ ಮಾಡಿಕೊಡುವಂತೆ ಮನವಿ ಮಾಡಿದ್ದರೂ ಈ ತನಕ ದುರಸ್ತಿ ನಡೆಸಿಲ್ಲ ಎಂದು ಸದಸ್ಯ ಸಂದೀಪ್‌ ಪೂಜಾರಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಈಗಾಗಲೇ ಅಂಗನ ವಾಡಿಯನ್ನು ಪರಿಶೀಲನೆ ಮಾಡಿದ್ದು ಕೂಡಲೇ ದುರಸ್ತಿ ಕಾರ್ಯವನ್ನು ಮಾಡಲಾಗುವುದು ಎಂದು ಮುಖ್ಯಾಧಿಕಾರಿ ಹೇಳಿದರು.

ಅಧ್ಯಕ್ಷೆ ವಸಂತಿ ಸಾರಂಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಸಿಸಿಲಿ ಕೋಟ್ಯಾನ್‌, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.