ಆರ್‌ಸೆಟಿ ಕಲ್ಪನೆಯಿಂದ ಕೋಟ್ಯಂತರ ಉದ್ಯೋಗಾವಕಾಶ: ಡಾ| ಹೆಗ್ಗಡೆ


Team Udayavani, Aug 31, 2017, 6:35 AM IST

3008bel1ph1.jpg

ಬೆಳ್ತಂಗಡಿ: ಸವಾಲುಗಳನ್ನು ತೆಗೆದುಕೊಳ್ಳಬೇಕು. ಅಂತಹ ಉತ್ಸಾಹದಿಂದಲೇ ಮೂವತ್ತು ದಶಕದ ಹಿಂದೆ ರುಡ್‌ಸೆಟ್‌ ಎಂಬ ಸ್ವ ಉದ್ಯೋಗ ತರಬೇತಿ ಕೇಂದ್ರ ಸ್ಥಾಪಿಸಲಾಯಿತು. ಇದರ ಪರಿಣಾಮವಾಗಿ ದೇಶದ ಪ್ರತಿ ಜಿಲ್ಲೆಯಲ್ಲಿ ಆರ್‌ಸೆಟಿಗಳ ಸ್ಥಾಪನೆಯಾಗಿ ಸ್ವ ಉದ್ಯೋಗ ತರಬೇತಿ ನೀಡಿ ಕೋಟ್ಯಂತರ ಮಂದಿಗೆ ಉದ್ಯೋಗಾವಕಾಶ ಸೃಷ್ಟಿಯಾಗಿದೆ ಎಂದು ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಧರ್ಮಸ್ಥಳದ ಸನ್ನಿಧಿ ಅತಿಥಿ ಗೃಹದ ಸಭಾಂಗಣ ದಲ್ಲಿ ದೇಶದ 27 ರುಡ್‌ಸೆಟ್‌ಗಳ ನಿರ್ದೇಶಕರ 3 ದಿನಗಳ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ರುಡ್‌ಸೆಟ್‌ ಸಂಸ್ಥೆಯಲ್ಲಿ ವಾರ್ಷಿಕ 750ರಷ್ಟು ತರಬೇತಿಗಳನ್ನು ನೀಡಲಾಗುತ್ತಿದೆ. ಇದಲ್ಲದೆ ಕೇಂದ್ರ ಸರಕಾರದ ಮೂಲಕ ಸ್ಥಾಪನೆಯಾದ ದೇಶದ 546 ಆರ್‌ಸೆಟಿಗಳ ಸಾಧನೆಗೆ ಸರಕಾರದ ನಿಗದಿಯ ಗಡುವಿಗಿಂತ ಅಧಿಕವೇ ಸಾಧಿಸಿ ತೋರಿಸಲಾಗಿದೆ. ಈವರೆಗೆ 24 ಲಕ್ಷ ಮಂದಿಗೆ ತರಬೇತಿ ನೀಡಲಾಗಿದೆ. ಪ್ರತಿಯೊಬ್ಬರೂ ಕನಿಷ್ಠ 4 ಮಂದಿಗೆ ಉದ್ಯೋಗದಾತರಾಗಿದ್ದರೂ ಅದು ಕೋಟಿಗೆ ಸನಿಹವಿದೆ ಎಂದರು.

ಸಿಂಡಿಕೇಟ್‌ ಬ್ಯಾಂಕ್‌ ವ್ಯವಸ್ಥಾಪನಾ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೆಲ್ವಿನ್‌ ರೇಗೋ ಮಾತನಾಡಿ, ಡಾ| ಹೆಗ್ಗಡೆಯವರು ದೂರದೃಷ್ಟಿಯಿಂದ ರುಡ್‌ಸೆಟ್‌, ಗ್ರಾಮಾಭಿವೃದ್ಧಿ ಮೊದಲಾದ ಅನೇಕ ಹೊಸ ಚಿಂತನೆಗಳನ್ನು ಇತರರಿಗಿಂತ ಮೊದಲೇ ಆರಂಭಿಸಿದ್ದಾರೆ. ಸಾಧನೆ ಮಾಡಬೇಕೆಂಬ ಹಂಬಲ ಉಳ್ಳವನು ಔದ್ಯೋಗಿಕ ಸಮಗ್ರತೆ, ಕಠಿನ ಶ್ರಮ ಹಾಗೂ ಶೋಧಕ ಮನಸ್ಸು ಹೊಂದಿರಬೇಕು. ಔದ್ಯಮಿಕವಾಗಿ ಮೌಲ್ಯಗಳನ್ನು ಹೊಂದಿದ್ದರೆ ಅದು ಸದಾ ಸ್ವೀಕಾರಾರ್ಹ ಎಂದರು.

ಕೆನರಾ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕಿ ಪಿ. ವಿ. ಭಾರತಿ ಮಾತನಾಡಿ, ಹಸಿದವನಿಗೆ ಮೀನು ಹಿಡಿದು ಕೊಟ್ಟರೆ ಒಂದು ದಿನ ಕೊಟ್ಟಂತೆ. ಮೀನು ಹಿಡಿಯಲು ಕಲಿಸಿ ಕೊಟ್ಟರೆ ಅವನಿಗೆ ಬದುಕು ಕೊಟ್ಟಂತೆ. ಸಣ್ಣ ಸಣ್ಣ ಕನಸುಗಳನ್ನು ಸಾಕಾರ ಮಾಡಲು ನೆರವಾಗುವ ರುಡ್‌ಸೆಟ್‌ನಲ್ಲಿ  ಡಾ| ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ಹೆಮ್ಮೆ ಪಡಬೇಕು. ಯುವಜನತೆಗೆ ಕೊಡುವ ತರಬೇತಿ ವಜ್ರಕ್ಕೆ ಹೊಳಪು ನೀಡಿದಂತೆ ಮೌಲ್ಯವರ್ಧನೆ ಎಂದರು.

ಆರ್‌ಸೆಟಿಯ ರಾಷ್ಟ್ರೀಯ ನಿರ್ದೇಶಕ ಕೆ.ಎನ್‌. ಜನಾರ್ದನ್‌, ಆರ್‌ಸೆಟಿಗಳ ಮೂಲಕ ಪ್ರತಿ ವರ್ಷ 2 ಲಕ್ಷ ಜನರಿಗೆ ಉದ್ಯೋಗ ತರಬೇತಿಯ ಗುರಿಯನ್ನು ಸರಕಾರ ನಿಗದಿ ಮಾಡಿತ್ತು. ಆದರೆ ವಾರ್ಷಿಕ 4.25 ಲಕ್ಷ ಮಂದಿಗೆ, ಒಟ್ಟು 24 ಲಕ್ಷ ಜನರಿಗೆ ತರಬೇತಿ ನೀಡಲಾಗಿದೆ. 3 ವರ್ಷ ಮತ್ತೆ ವಿಸ್ತರಣೆ ಮಾಡಲು ಕೇಂದ್ರ ಸರಕಾರ ಒಪ್ಪಂದ ನಡೆಸುತ್ತಿದೆ. ಮೂರು ದಶಕಗಳ ಹಿಂದೆಯೇ ಡಾ| ಹೆಗ್ಗಡೆಯವರಿಗೆ ಮೇಕ್‌ ಇನ್‌ ಇಂಡಿಯಾ, ಮೇಡ್‌ ಇನ್‌ ಇಂಡಿಯಾ ಕಲ್ಪನೆ ಬಂದಿತ್ತು ಎಂದರು.

ಸಿಂಡಿಕೇಟ್‌ ಬ್ಯಾಂಕ್‌ ಜನರಲ್‌ ಮೆನೇಜರ್‌ ಎಂ. ಮೋಹನ ರೆಡ್ಡಿ, ಕೆನರಾ ಬ್ಯಾಂಕ್‌ ಜನರಲ್‌ ಮೆನೇಜರ್‌ ಅನಿಲ್‌ ಕುಮಾರ್‌ ಪಿ., ಡೆಪ್ಯುಟಿ ಜನರಲ್‌ ಮೆನೇಜರ್‌ ವಿಜಯಲಕ್ಷ್ಮೀ, ರುಡ್‌ಸೆಟ್‌ ನ್ಯಾಷನಲ್‌ ಅಕಾಡೆಮಿಯ ಡೈರೆಕ್ಟರ್‌ ಜನರಲ್‌ ಆರ್‌. ಆರ್‌. ಸಿಂಗ್‌, ಸಿಪಿಸಿಆರ್‌ಡಿಯ ಡಿಜಿಎಂ ಜಗದೀಶ ಮೂರ್ತಿ ಉಪಸ್ಥಿತರಿದ್ದರು.
ರುಡ್‌ಸೆಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಎಂ. ಜನಾರ್ದನ್‌ ಸ್ವಾಗತಿಸಿದರು. ನಿರ್ದೇಶಕ ಅಜಿತ್‌ ಕೆ. ರಾಜಣ್ಣವರ್‌ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯಾ ನಿರ್ವಹಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.