ಕಾಳನೂರು ಅಂಗನವಾಡಿಗೆ ಜಿಪಂ ಸದಸ್ಯ ಭೇಟಿ


Team Udayavani, Aug 31, 2017, 11:26 AM IST

gul-8.jpg

ಕಲಬುರಗಿ: ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಅರವಿಂದ ಚವ್ಹಾಣ ಬುಧವಾರ
ತಾಲೂಕಿನ ಕಾಳನೂರಿನ ಮೂರು ಅಂಗನವಾಡಿ ಕೇಂದ್ರಗಳಿಗೆ ಹಠಾತ್‌ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆ ಕಂಡು
ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿನ ಒಂದು ಅಂಗನವಾಡಿ ಕೇಂದ್ರಕ್ಕೆ ಕೀಲಿ ಜಡಿಯಲಾಗಿತ್ತು. ಇನ್ನೊಂದು ಅಂಗನವಾಡಿ ಕೇಂದ್ರಕ್ಕೆ
ಫಲಕವೇ ಇರಲಿಲ್ಲ. ಮತ್ತೂಂದು ಅಂಗನವಾಡಿ ಕೇಂದ್ರಕ್ಕೂ ನಾಮಫಲಕವೇ ಕಾಣಲಿಲ್ಲ. ಆದಾಗ್ಯೂ, ಎರಡೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ನೋಡಿ ದಂಗಾದರು.

ಅಂಗನವಾಡಿ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಊಟ ಮಾಡುತ್ತಿದ್ದ. ಆ ಊಟವನ್ನು ಚವ್ಹಾಣ ಅವರು ನೋಡಿದಾಗ ಅದರಲ್ಲಿ ಉಪ್ಪು, ಖಾರಾ ಇರಲಿಲ್ಲ. ಏನಾದರೂ ಕೊರತೆ ಇದೆಯೇ ಎಂದು ಪ್ರಶ್ನಿಸಿದಾಗ, ಕೊರತೆ ಕಾಣಲಿಲ್ಲ. ಬದಲಾಗಿ
ಅಂಗನವಾಡಿ ಕೇಂದ್ರದಲ್ಲಿ ಮುಂದಿನ ಎರಡು ತಿಂಗಳಿಗಾಗುವಷ್ಟು ಆಹಾರ ಧಾನ್ಯ ಇದ್ದದ್ದು ಗಮನಕ್ಕೆ ಬಂದು, ಇಷ್ಟೆಲ್ಲ ಇದ್ದರೂ ಕಳಪೆ ಊಟವನ್ನೇಕೆ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿದರು. 

ಅಂಗನವಾಡಿ ಶಿಕ್ಷಕಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ಸಾಕಷ್ಟು ಆಹಾರ ಧಾನ್ಯಗಳ ದಾಸ್ತಾನು ಇದೆ ಎಂದರೂ ಅದನ್ನು
ಮರಳಿ ಒಯ್ಯಲು ಆಗುವುದಿಲ್ಲ ಎಂದು ಇಲ್ಲಿಯೇ ಇಟ್ಟು ಹೋಗಿದ್ದಾರೆ. ಯಾವಾಗಲೂ ಹೀಗೆಯೇ ಮಾಡಲಾಗುತ್ತಿದೆ. ಹಲವಾರು ಬಾರಿ ಧವಸ, ಧಾನ್ಯ, ಬೆಲ್ಲ, ಹಾಲಿನ ಪ್ಯಾಕೆಟ್‌ ಗಳು ಹಾಳಾಗುತ್ತಿದ್ದು, ಅವುಗಳೆಲ್ಲ ತಿಪ್ಪೆಯ ಪಾಲಾಗುತ್ತಿವೆ ಎಂದು ಹೇಳಿದಳು. ಅಲ್ಲಿದ್ದ ಕೆಲ ಸ್ಥಳೀಯರು ಅಂಗನವಾಡಿ ಕೇಂದ್ರಗಳಿಗೆ ನಾಮಫಲಕ ಹಾಕದೇ ಮನೆಗಳಲ್ಲಿಯೇ
ನಡೆಸುತ್ತಾರೆ. ವಿದ್ಯಾರ್ಥಿಗಳಿಗಿಂತ ತಮ್ಮ ಸ್ವಂತ ಉಪಯೋಗಕ್ಕೆ ಮಾತ್ರ ಆಹಾರ ಧಾನ್ಯಗಳನ್ನು ಉಪಯೋಗಿಸುತ್ತಾರೆ ಎಂದು ದೂರಿದರು. ಇದರಿಂದ ಕೆರಳಿದ ಅರವಿಂದ ಚವ್ಹಾಣ ಅವರು, ಸಂಬಂಧಿಸಿದ ಅಧಿಕಾರಿಗಳನ್ನು ಮೊಬೈಲ್‌ ಮೂಲಕ ಸಂಪರ್ಕಿಸಲು ಯತ್ನಿಸಿದರು. ಆದಾಗ್ಯೂ, ಅಧಿಕಾರಿಗಳ ಸಂಪರ್ಕ ಸಿಗಲಿಲ್ಲ. ಈ ಕುರಿತು ತನಿಖೆಗೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಜನಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಎಂ.ಎಸ್‌. ಪಾಟೀಲ ನರಿಬೋಳ, ಜಗದೀಶ ಅವರಾದಕರ ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.