ಸಾರಿಗೆ ಸೌಕರ್ಯಕ್ಕೂ ಜನರ ಪರದಾಟ
Team Udayavani, Sep 1, 2017, 4:20 PM IST
ಹಿರೇವಡಗೇರಾ: ಜಿಲ್ಲಾ ಕೇಂದ್ರದಿಂದ ಅರ್ಜುಣಗಿ, ಕುಮನೂರ, ಕಂದಳ್ಳಿ, ಶಿವನೂರ ಗ್ರಾಮಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಒಂದೇ ಒಂದು ಬಸ್: ಯಾದಗಿರಿ ಘಟಕದಿಂದ ಶಿವನೂರ ಗ್ರಾಮಕ್ಕೆ ರಾತ್ರಿ
ತಂಗುವ ಬಸ್ ವ್ಯವಸ್ಥೆ ಇದೆ. ಪ್ರತಿದಿನ ಈ ಬಸ್ ಸಂಜೆ 7:00 ಗಂಟೆಗೆ ಯಾದಗಿರಿ ಬಸ್ ನಿಲ್ದಾಣದಿಂದ ಬರುತ್ತಿದ್ದು, ಇದರಲ್ಲಿ ಸುಮಾರು 180ರಿಂದ 200 ಜನ ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರು ಪ್ರತಿನಿತ್ಯ ಪ್ರಯಾಣಿಸುತ್ತಾರೆ.
ನಗರ ಪ್ರದೇಶಗಳಿಗೆ ಶಾಲಾ ಕಾಲೇಜಿಗೆ ಬರುವ ಗ್ರಾಮೀಣ ವಿದ್ಯಾರ್ಥಿಗಳು ಸಕಾಲದಲ್ಲಿ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ, ಬಸ್ನ ಟಾಪ್ ಮೇಲೆ ಕುಳಿತು ತಮ್ಮ ಗ್ರಾಮಗಳಿಗೆ ಪ್ರಯಾಣಿಸುವುದು
ಅನಿವಾರ್ಯವಾಗಿದೆ.
ಬೆಳಗಿನಿಂದ ಸಂಜೆವರೆಗೆ ಬಸ್ ಇಲ್ಲ: ಅರ್ಜುಣಗಿ, ಕುಮನೂರ ಹಾಗೂ ಇನ್ನಿತರ ಗ್ರಾಮಸ್ಥಳಿಗೆ ಸಂಜೆ ಏಳು ಗಂಟೆಗೆ ಮಾತ್ರ ಬಸ್ ಇದ್ದು, ಬೆಳಿಗಿನಿಂದ ಸಂಜೆವರೆಗೆ ಈ ಗ್ರಾಮಗಳಿಗೆ ಬಸ್ ಸೌಕರ್ಯ
ಇಲ್ಲದಿರುವುದರಿಂದ ಇವರೆಲ್ಲರೂ ಖಾಸಗಿ ವಾಹನಗಳ ಮೊರೆ ಹೋಗುತ್ತಾರೆ. ಇನ್ನೂ ತುರ್ತು ಸಮಯದಲ್ಲಿ ಖಾಸಗಿ ವಾಹನ ಚಾಲಕರು ಹೆಚ್ಚಿನ ಬಾಡಿಗೆಯನ್ನು ಕೇಳುತ್ತಾರೆ. ಇದರಿಂದ ಬಡವರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದ್ದು, ಶೀಘ್ರ ಸಮಸ್ಯೆ ನಿವಾರಣೆಗೆ ಮುಂದಾಗಬೇಕು ಎಂದು ಈ ಭಾಗದ ಅನೇಕ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕುಮನೂರ ಗ್ರಾಮಕ್ಕೆ ಮುಕ್ಕಾಂ ಬಸ್ ಸೌಕರ್ಯವನ್ನು ಒದಗಿಸಿದರೆ ಗೋಡಿಹಾಳ, ಹಾಲಗೇರಾ, ಅರ್ಜುಣಗಿ ಮತ್ತು ಕುಮನೂರ ಗ್ರಾಮಸ್ಥರಿಗೆ ಅನುಕೂಲವಾಗುವುದರ ಜೊತೆಗೆ ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತದೆ. ಆದ್ದರಿಂದ ಇದರ ಬಗ್ಗೆ ಅನೇಕ ವೇಳೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳು ಗಮನಹರಿಸಿ ಕುಮನೂರ ಗ್ರಾಮಕ್ಕೆ ರಾತ್ರಿ ಮುಕ್ಕಾಂ ಬಸ್ನ ಸೌಕರ್ಯವನ್ನು ಒದಗಿಸಬೇಕು ಎಂದು ಗ್ರಾಮಸ್ಥರ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಬೇಡಿಕೆ ಆಗಿದೆ.
ನಾಮದೇವ ವಾಟ್ಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ