ಹೆಬ್ರಿ ಮೆಸ್ಕಾಂ ಜನಸಂಪರ್ಕ ಸಭೆ: ಸಮಸ್ಯೆಗಳಿಗೆ ಆಕ್ರೋಶ


Team Udayavani, Sep 2, 2017, 7:55 AM IST

300817hbre9.jpg

ಹೆಬ್ರಿ: ಹೆಬ್ರಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ಜನಸಂಪರ್ಕ ಸಭೆ ಆ. 30ರಂದು ಪಂಚಾಯತ್‌ ಸಭಾಂಗಣದಲ್ಲಿ ನಡೆಯಿತು. ಮಾಹಿತಿ ಇಲ್ಲದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಿರುವುದು, ಲೈನ್‌ಮ್ಯಾನ್‌ಗಳ ಸಮಸ್ಯೆ, ಅಧಿಕಾರಿಗಳ ಉಡಾಫೆ, ಗ್ರಾಮಸಭೆಗೆ ಮೆಸ್ಕಾಂ ಅಧಿಕಾರಿಗಳ ಗೈರು ಮೊದಲಾದ ಸಮಸ್ಯೆಗಳ ಬಗ್ಗೆ  ಸೇರಿದ ಕೆಲವೇ ಗ್ರಾಮಸ್ಥರು ಸೇರಿದಂತೆ ಪಂಚಾಯತ್‌ ಅಧ್ಯಕ್ಷರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುನಿಯಾಲಿಗೆ ಎಕ್ಸ್‌ಪ್ರೆಸ್‌ ಲೈನ್‌, ಅಜೆಕಾರಿಗೆ ಸಬ್‌ ಸ್ಟೇಷನ್‌, ಕಾಸನಮಕ್ಕಿಯಲ್ಲಿರುವ ಲೈನ್‌ಮ್ಯಾನ್‌ಗಳ ಸಮಸ್ಯೆ. ಲೋ ಓಲ್ಟೆàಜ್‌ ಸಮಸ್ಯೆ, ಅಜೆಕಾರಿನಲ್ಲಿ ಜನಸಂಪರ್ಕ ಸಭೆ ನಡೆಸುವ ಬಗ್ಗೆ  ಅಧಿಕಾರಿಗಳ ಗಮನಕ್ಕೆ ತಂದು ಚರ್ಚೆನಡೆಸಲಾಯಿತು. ಶಿವಪುರ ಗ್ರಾ.ಪಂ. ವ್ಯಾಪ್ತಿಯ ದೊರಿಯಾಲು ಪ್ರದೇಶದಲ್ಲಿ ವಿದ್ಯುತ್‌ ಸಮಸ್ಯೆ ಸರಿಪಡಿಸಲು ಟಿ.ಸಿ.ಯನ್ನು ಅಳವಡಿಸುವಂತೆ ಗ್ರಾಮಸ್ಥರಾದ ಪ್ರಸನ್ನ ಶೆಟ್ಟಿ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಅಜೆಕಾರು ಕಡ್ತಲ ಸುತ್ತಮುತ್ತಲ ಪ್ರದೇಶದಲ್ಲಿ  ಕರೆಂಟ್‌ ಇಲ್ಲದಿರುವ ಬಗ್ಗೆ ಸುಕೇಶ್‌ ಹೆಗ್ಡೆ ಅಧಿಕಾರಿಗಳ ಗಮನಕ್ಕೆ ತಂದರು. ರಸ್ತೆ ಬದಿಯಲ್ಲಿ ವಿದ್ಯುತ್‌ ಕಂಬಗಳಿಗೆ ತಾಗಿ ಇರುವ ಮರಗಳನ್ನು ಕಡಿಯಬೇಕು. ಅಪಾಯ ನಡೆದ ಅನಂತರ ಪರಿಹಾರ ನೀಡುವುದಕ್ಕಿಂತ ದುರಂತ ಸಂಭವಿಸುವ ಮೊದಲೇ ಇಲಾಖೆ ಎಚ್ಚೆತ್ತುಕೊಂಡು ಅಪಾಯಕಾರಿ ಮರಗಳನ್ನು ಕಡಿಯಬೇಕು ಎಂದು ಬಚ್ಚಪ್ಪು ನಾರಾಯಣ ಪೂಜಾರಿ ಹೇಳಿದರು.

ಜನರಿಲ್ಲದ ಜನಸಂಪರ್ಕ ಸಭೆ: ಮೆಸ್ಕಾಂ ಜನಸಂಪರ್ಕ ಸಭೆ ನಡೆಸುವುದಾದರೆ ಅದು ಜನಸಾಮಾನ್ಯರಿಗೆ ತಲುಪುವಷ್ಟು ಪ್ರಚಾರ ಮಾಡಬೇಕು, ಫ್ಲೆಕ್ಸ್‌ ಹಾಕಬೇಕು. ಆದರೆ ಹೆಬ್ರಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ಯಾರಿಗೂ ಗೊತ್ತಿಲ್ಲದೆ ಸುಮ್ಮನೆ ಕಾಟಾಚಾರಕ್ಕೆ ನಡೆದಂತಿದೆ ಎಂದು ಗ್ರಾಮಸ್ಥರಾದ ಪಾಂಡುರಂಗ ಪೂಜಾರಿ ಆಕ್ರೋಷ ವ್ಯಕ್ತಪಡಿಸಿದರು.

ಅಧಿಕಾರಿಯ ಉಡಾಫೆ ಉತ್ತರ: ಕಡ್ತಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್‌ ಸಮಸ್ಯೆ ಇದ್ದು ಈ ಬಗ್ಗೆ ಗ್ರಾಮಸ್ಥರು ಅಜೆಕಾರು ವಿಭಾಗದ ಮೆಸ್ಕಾಂ ಅಧಿಕಾರಿ ನಟರಾಜ್‌ ಅವರಿಗೆ ದೂರವಾಣಿ ಕರೆ ಮಾಡಿದಾಗಿ ಉಡಾಫೆ ಉತ್ತರ ನೀಡುತ್ತಾರೆ. ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದೇ ರೀತಿ ಮುಂದುವರಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಕಡ್ತಲ ಗ್ರಾ.ಪಂ. ಅಧ್ಯಕ್ಷ ಅರುಣ್‌ಕುಮಾರ್‌ ಹೆಗ್ಡೆ ಅಧಿಕಾರಿಗಳಿಗೆ ತಿಳಿಸಿದರು.

ಶೀಘ್ರ ಸಮಸ್ಯೆ ಬಗೆಹರಿಸುವೆ: ಜನರ ಸಮಸ್ಯೆಗಳನ್ನು ಆಲಿಸಿದ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತ ಶರತ್‌ ಚಂದ್ರಪಾಲ್‌ ಹಂತ ಹಂತವಾಗಿ ಸಮಸ್ಯೆಗಳಗನ್ನು ಬಗೆಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಅಭಿಯಂತ ರಘುನಾಥ, ಹೆಬ್ರಿ ವಿಭಾಗದ ಅಧಿಕಾರಿ ಸಂದೀಪ್‌, ಅಜೆಕಾರಿನ ನಟರಾಜ್‌, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ಹೆಗ್ಡೆ, ಪಿ.ಡಿ.ಒ. ವಿಜಯ, ಸುತ್ತಮುತ್ತಲಿನ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.