ಸಕಾರಣದಿಂದಲೇ ಕಾರ್ತಿಗೆ ಲುಕ್ಔಟ್ ನೋಟಿಸ್
Team Udayavani, Sep 2, 2017, 7:45 AM IST
ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡುವುದಕ್ಕೆ ಉತ್ತಮ ಮತ್ತು ಸಮರ್ಪಕ ಕಾರಣಗಳಿವೆ ಎಂದು ಸುಪ್ರೀಂ ಕೋರ್ಟ್ಗೆ ಶುಕ್ರವಾರ ಸಿಬಿಐ ಅರಿಕೆ ಮಾಡಿದೆ.
ಪ್ರಕರಣ ಸಂಬಂಧದ ಎಲ್ಲ ದಾಖಲೆಗಳನ್ನು ಸಿಬಿಐ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಗೆ ಸಲ್ಲಿಸಿದ್ದು, ಬಳಿಕ ಲುಕ್ಔಟ್ಗೆ ಸಂಬಂಧಿಸಿ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠವು ಸಿಬಿಐ ಅಭಿಪ್ರಾಯ ಕೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ, “ಇದು ಸರಳ ಅಥವಾ ಒಂದೇ ಕಂಪನಿಗೆ ಸಂಬಂಧಿಸಿದ ಪ್ರಕರಣವಲ್ಲ. ಇಲ್ಲಿ ಹಲವು ಕಂಪನಿಗಳು ಭಾಗಿಯಾಗಿದ್ದು, ವಿದೇಶಗಳಲ್ಲಿನ ಆಸ್ತಿಪಾಸ್ತಿ, ಖಾತೆಗಳೂ ಸೇರಿವೆ. ಲುಕ್ಔಟ್ ನೋಟಿಸ್ ಜಾರಿ ಮಾಡಲು ಸಮರ್ಥ ಕಾರಣಗಳಿವೆ,’ ಎಂದಿದೆ. ಸೆ.11ರಂದು ಮುಂದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ