ಬಿಜೆಪಿಯ ಮಂಗಳೂರು ಚಲೋಗೆ ಮೊದಲ ದಿನವೇ ಬ್ರೇಕ್?
Team Udayavani, Sep 2, 2017, 4:39 PM IST
ಬೆಂಗಳೂರು:ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎನ್ನುವ ಕಾರಣದಲ್ಲಿ ಬಿಜೆಪಿ ಯುವ ಮೋರ್ಚಾ ನಡೆಸುತ್ತಿರುವ ಮಂಗಳೂರು ಚಲೋ ರ್ಯಾಲಿಗೆ ಮೊದಲ ದಿನವೇ ಪೊಲೀಸರು ತಡೆ ಒಡ್ಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ರ್ಯಾಲಿಗೆ ಅವಕಾಶ ನೀಡಬಾರದು. ರ್ಯಾಲಿ ಮಂಗಳೂರು ತಲುಪಿದರೆ ಇದೀಗ ನೆಲೆಯಾಗಿರುವ ಶಾಂತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ರ್ಯಾಲಿ ಮಂಗಳೂರು ತಲುಪಬಾರದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಕರಾವಳಿ ಭಾಗದ ಸಚಿವರು ದೂರು ನೀಡಿದ್ದಾರೆ ಎನ್ನಲಾಗಿದೆ.
ಆರೆಸ್ಸೆಸ್ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ ಐ, ಕೆಎಫ್ ಡಿ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸ ಬೇಕು ಹಾಗೂ ಈ ಸಂಘಟನೆಗಳಿಗೆ ಬೆಂಬಲವಾಗಿ ನಿಂತಿರುವ ಅರಣ್ಯ ಸಚಿವ ಬಿ. ರಮಾನಾಥ ರೈ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ “ಮಂಗಳೂರು ಚಲೋ’ ಬೈಕ್ ರ್ಯಾಲಿ ಹಮ್ಮಿಕೊಂಡಿದೆ.
ಸೆ.5.6 ಮತ್ತು 7ರಂದು ಮಂಗಳೂರು ಚಲೋ ಹೆಸರಲ್ಲಿ ಬೃಹತ್ ಮಟ್ಟದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಹೊರಡುವ ಬೈಕ್ ರ್ಯಾಲಿ ಸೆ.7ರಂದು ಮಂಗಳೂರಿನಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖರು ಭಾಗವಹಿಸಿಲಿದ್ದಾರೆ.
ಸೆ.5ರಂದು ಬೆಂಗಳೂರು, ಹುಬ್ಬಳ್ಳಿಯಿಂದ ಬೈಕ್ ರ್ಯಾಲಿ ಹೊರಡಲಿದ್ದು, ಬೆಂಗಳೂರು ರ್ಯಾಲಿಗೆ ಆರ್.ಅಶೋಕ್, ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ಹೊರಡುವ ರ್ಯಾಲಿಯನ್ನು ಜಗದೀಶ್ ಶೆಟ್ಟರ್ ಮತ್ತು ಸಂಸದ ಪ್ರಹ್ಲಾದ್ ಜೋಶಿ ಉದ್ಘಾಟಿಸಲಿದ್ದಾರೆ. ಸೆ.6ರಂದು ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಿಂದ ರ್ಯಾಲಿ ಹೊರಡಲಿದೆ.
ಶಿವಮೊಗ್ಗದ ರ್ಯಾಲಿಗೆ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರೆ, ಮೈಸೂರಿನ ರ್ಯಾಲಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಲಿದ್ದಾರೆ. ಚಿಕ್ಕಮಗಳೂರು ರ್ಯಾಲಿಗೆ ಶಾಸಕ ಸಿ.ಟಿ.ರವಿ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ