ಸದ್ದಿಲ್ಲದೆ ಸಾಗಿದೆ ಅಗ್ರಾಣಿ ನದಿ ಪುನರುಜ್ಜೀವನ


Team Udayavani, Sep 4, 2017, 10:17 AM IST

04-STATE-2.jpg

ಹುಬ್ಬಳ್ಳಿ: ನದಿಗಳ ಸಂರಕ್ಷಣೆ, ಪುನರುಜ್ಜೀವನ ಕೂಗು ದೇಶಾದ್ಯಂತ ಕೇಳಿಬರುತ್ತಿದೆ. ಅಭಿಯಾನಗಳೂ ನಡೆಯುತ್ತಿವೆ. ಹಾಗೆಯೇ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿಯ ಉಪನದಿಯಾದ ಅಗ್ರಾಣಿ(ಅಗ್ರಣಿ)ನದಿ ಪುನರುಜ್ಜೀವನ ಕಾರ್ಯ ಕಳೆದ ನಾಲ್ಕೈದು ವರ್ಷಗಳಿಂದ ಸದ್ದಿಲ್ಲದೆ ಸಾಗಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಸುಮಾರು 137 ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಇನ್ನಿತರ ಕಾರ್ಯಗಳಿಗೆ ಈ ನದಿ ಆಸರೆಯಾಗಿದೆ. ಉಭಯ ರಾಜ್ಯ ಸರಕಾರಗಳು “ಜಲ ಬಿರಾದಾರಿ’ ಸರಕಾರೇತರ ಸಂಸ್ಥೆ ಹಾಗೂ ನದಿ ಪಾತ್ರದ ಗ್ರಾಮಸ್ಥರ ಸಹಕಾರದಿಂದ ನದಿ
ಪುನರುಜ್ಜೀವನ ಕಾರ್ಯ ಕೈಗೊಂಡಿದ್ದು, ಅನೇಕ ಚೆಕ್‌ಡ್ಯಾಂಗಳನ್ನು ನಿರ್ಮಿಸಲಾಗಿದೆ. 

105ಕಿ.ಮೀ. ಉದ್ದದ ನದಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪೇs… ಖಾನಾಪುರದ ಐನವಾಡಿ-ಬಲವಡಿಯಲ್ಲಿ ಅರಳಿ ಮರವೊಂದರ ಬಳಿ ಅಗ್ರಾಣಿ ನದಿ ಉಗಮವಾಗುತ್ತದೆ. ಮಹಾರಾಷ್ಟ್ರದವರ ಪ್ರಕಾರ ಅಗ್ರಾಣಿ ನದಿ ಮಹಾರಾಷ್ಟ್ರದಲ್ಲಿ 60 ಕಿ.ಮೀ. ಹಾಗೂ ಕರ್ನಾಟಕದಲ್ಲಿ ಸುಮಾರು 45 ಕಿ.ಮೀ.
ವ್ಯಾಪ್ತಿಯಲ್ಲಿ ಹರಿಯುತ್ತದೆ. ಈ ನದಿ ಸಾಂಗ್ಲಿ ಜಿಲ್ಲೆಯ ಐದು ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಹರಿಯುತ್ತಿದ್ದು, ಅಥಣಿ ತಾಲೂಕಿನ ಖೇಳೆಗಾಂವಿ ಎಂಬಲ್ಲಿ ಕೃಷ್ಣ ನದಿಯನ್ನು ಸೇರುತ್ತದೆ. ಮಹಾರಾಷ್ಟ್ರದ 107 ಗ್ರಾಮಗಳ ಸುಮಾರು 1,38,800 ಹೆಕ್ಟೇರ್‌ ಭೂಮಿಗೆ ನೀರು
ಒದಗಿಸುತ್ತಿದ್ದು, ಅಂದಾಜು 3.25 ಲಕ್ಷ ಜನರಿಗೆ ನೀರಿನ ಆಸರೆಯಾಗಿದೆ.

ಪುನರುಜ್ಜೀವನ ಯಜ್ಞ: ಮಹಾರಾಷ್ಟ್ರದಲ್ಲಿ ಅಗ್ರಾಣಿ ನದಿ ಪುನರುಜ್ಜೀವನ ಯತ್ನ 2013ರಿಂದ ನಡೆಯುತ್ತಿದೆ. ಜಲತಜ್ಞ ಡಾ|ರಾಜೇಂದ್ರ ಸಿಂಗ್‌ ಅವರ “ಜಲ ಬಿರಾದರಿ’ ಸಂಘಟನೆ ಈ ಕಾರ್ಯಕ್ಕೆ ಮುಂದಾದಾಗ ಸಾಂಗ್ಲಿ ಜಿಲ್ಲಾಡಳಿತ ಅಗತ್ಯ ಪ್ರೋತ್ಸಾಹ ನೀಡಿತ್ತು. ಅಗ್ರಾಣಿ ನದಿ ಪುನರುಜ್ಜೀವನ ಕುರಿತು ದೇಶದಲ್ಲಿ ಐಎಎಸ್‌ ಅಧಿಕಾರಿಗಳಾಗಿ ನೇಮಕಗೊಳ್ಳುವವರಿಗೆ ತರಬೇತಿ ನೀಡುವ ಮಸೂರಿನ ಲಾಲ್‌ ಬಹದ್ದೂರ ಶಾಸ್ತ್ರಿ ಅಕಾಡೆಮಿಯಿಂದ ಅಧ್ಯಯನಕ್ಕೆ “ಜಲ ಬಿರಾದಾರಿ’ ಆಹ್ವಾನಿಸಿತ್ತು. ಐಎಎಸ್‌ ತರಬೇತಿ ಪಡೆದ ಅನೇಕರು ಈ ಅಧ್ಯಯನದಲ್ಲಿ ಭಾಗಿಯಾಗಿದ್ದರು. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸುಮಾರು 107 ಗ್ರಾಮಗಳಲ್ಲಿ “ಜಲ ಬಿರಾದಾರಿ’ಯ ನರೇಂದ್ರ ಚುಘ ನೇತೃತ್ವದಲ್ಲಿ 2013ರ ಸೆಪ್ಟೆಂಬರ್‌ನಲ್ಲಿ ಜಾಗೃತಿ ಅಭಿಯಾನ
ಹಾಗೂ ಚೆಕ್‌ ಡ್ಯಾಂ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು. 

ಕರ್ನಾಟಕದಲ್ಲಿಯೂ ಅಗ್ರಾಣಿ ನದಿ ಪುನರುಜ್ಜೀವನ ಜಾಗೃತಿ 2016ರಿಂದ ನಡೆಯುತ್ತಿದೆ. ಅಥಣಿ ತಾಲೂಕಿನ ಅಣ್ಣಾ ಸಾಹೇಬ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಡಾ| ರಾಜೇಂದ್ರ ಪೊದ್ದಾರ ಇನ್ನಿತರರ ಮಾರ್ಗದರ್ಶನದಲ್ಲಿ ನದಿ ತಟದ 22 ಹಾಗೂ ನದಿಗೆ ಹೊಂದಿಕೊಂಡು ಕೃಷಿ ಭೂಮಿ
ಇರುವ 10 ಗ್ರಾಮಗಳಲ್ಲಿ ಜನ ಜಾಗೃತಿ ನಡೆದಿದೆ.

ಬೆಳಗಾವಿ ಜಿಲ್ಲಾಡಳಿತ, ಜಿಪಂ ಸಹಕಾರ ನೀಡಿವೆ. ಬೆಳಗಾವಿ ಜಿಪಂ ಸಿಇಒ ಡಾ|ರಾಮಚಂದ್ರನ್‌ ನದಿ ಪುನರುಜ್ಜೀವನಕ್ಕೆ ಉತ್ಸುಕತೆ ತೋರಿದ್ದರಿಂದ ಸಣ್ಣ ನೀರಾವರಿ ಇಲಾಖೆ 20 ಬ್ಯಾರೇಜ್‌, ಬೃಹತ್‌ -ಮಧ್ಯಮ ಜಲಸಂಪನ್ಮೂಲ ಇಲಾಖೆ ಹಾಗೂ ಬೆಳಗಾವಿ ಜಿಪಂನಿಂದ ತಲಾ ಎರಡು ಬ್ಯಾರೇಜ್‌
ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಅಗ್ರಾಣಿ ನದಿ ಪುನರುಜ್ಜೀವನ ಕಾರ್ಯಪಡೆ ರಚಿಸಲಾಗಿದೆ.

ಅಗ್ರಾಣಿ ನದಿ ಬಗ್ಗೆ ಸುಮಾರು 32 ಗ್ರಾಮಗಳಲ್ಲಿ ಜಾಗೃತಿ ಕೈಗೊಳ್ಳಲಾಗಿದೆ. ನದಿಯಲ್ಲಿನ ಬಳ್ಳಾರಿ ಜಾಲಿ (ಪೀಕಜಾಲಿ) ಬೆಳೆದಿದ್ದು, ಅದನ್ನು ತೆಗೆದ ನಂತರ ನದಿಯ ಎರಡೂ ಬದಿ ಸೀತಾಫ‌ಲ ಹಾಗೂ ಪೇರಲ ಗಿಡಗಳನ್ನು ನಾಟಿ ಮಾಡಲಾಗುವುದು. 
ಅಣ್ಣಾ ಸಾಹೇಬ, ಅಗ್ರಾಣಿ ನದಿ ಪುನರುಜ್ಜೀವನ ಕಾರ್ಯಪಡೆ ಸದಸ್ಯ

ಅಗ್ರಣಿ ನದಿಯ ದಡದಲ್ಲಿ ಅರಣ್ಯ ಬೆಳೆಸುವ ಕಾರ್ಯ ಸಾಗಿದ್ದು, ಮುಂದಿನ 4-5 ವರ್ಷಗಳಲ್ಲಿ ಇದು ಮಹತ್ವದ ಫ‌ಲ ನೀಡಲಿದೆ. ಕರ್ನಾಟಕದಲ್ಲಿಯೂ ಅಗ್ರಾಣಿ ಪುನರುಜ್ಜೀವನ ಜಾಗೃತಿ ಕಾರ್ಯ ನಡೆದಿರುವುದು ಸ್ವಾಗತಾರ್ಹ.
ನರೇಂದ್ರ ಚುಘ, ಜಲ ಬಿರಾದಾರಿ ಸಂಘಟನೆ ಮುಖಂಡ

ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.