ಧರ್ಮ ಒಡೆಯುವವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ


Team Udayavani, Sep 4, 2017, 12:58 PM IST

VIJ-3.jpg

ಮುದ್ದೇಬಿಹಾಳ: ಲಿಂಗ ಹೊಂದಿದವರು ಲಿಂಗಾಯತರೇ ಹೊರತು ಲಿಂಗಾಯತವೇ ಸ್ವತಂತ್ರ ಧರ್ಮ ಅಲ್ಲ. ವೀರಶೈವ ಲಿಂಗಾಯತ ಒಂದೇ ಧರ್ಮ. ವೀರಶೈವ ಅನ್ನುವುದು ಧಾರ್ಮಿಕ ಭಾಷೆ. ಶರಣರ 148 ವಚನಗಳಲ್ಲಿ ವೀರಶೈವ ಲಿಂಗಾಯತ ಎಂದೇ ಉಲ್ಲೇಖವಿದೆ. ರಾಜಕೀಯ ಕುತಂತ್ರಿಗಳು ವೀರಶೈವ, ಲಿಂಗಾಯತರ ಮಧ್ಯೆ ಒಡಕು ಹುಟ್ಟು ಹಾಕುವ ಷಡ್ಯಂತ್ರ ನಡೆಸಿದ್ದಾರೆ ಎಂದು ಬಸವನಬಾಗೇವಾಡಿ ಒಡೆಯರ ಸಂಸ್ಥಾನ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯರು ಹೇಳಿದರು.

ಇಲ್ಲಿನ ವಿಜಯಮಹಾಂತೇಶ ಮಂಗಲ ಭವನದ ದಾಸೋಹ ಭವನದಲ್ಲಿ ಅಖೀಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘ ಮತ್ತು ಹಂಡೆವಜೀರ ಯುವ ಜಾಗೃತ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸಮಾಜದಲ್ಲಿ ಗಂಡಾದರೂ ಆಗಿ, ಹೆಣ್ಣಾದರೂ ಆಗಿ. ಆದರೆ ಚಕ್ಕಾ ಎಂದಿಗೂ ಆಗಬೇಡಿ. ಸ್ವಾಮೀಜಿಗಳೇ ಖಾವಿ ಬಟ್ಟೆ ಧರಿಸಿ ರಾಜಕೀಯ ಮಾಡಬೇಡಿ. ಸೆ. 4ರಂದು ಬಾದಾಮಿ ತಾಲೂಕು ಶಿವಯೋಗ ಮಂದಿರಕ್ಕೆ ವೀರಶೈವ ಲಿಂಗಾಯತರಾಗಿ ಬನ್ನಿ. ಧರ್ಮ ಒಡೆಯುವವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದರು.

ಶಿಕ್ಷಕ ಡಿ.ಎನ್‌. ಪಾಟೀಲ ಮಾತನಾಡಿ, ಹಂಡೆವಜೀರರು ಶಿವಭಕ್ತರು. ವಿಜಯನಗರ ಸಾಮ್ರಾಜ್ಯದ ಸಂರಕ್ಷಕರು. ದೇಶಕ್ಕಾಗಿ ಹೋರಾಟ ಮಾಡಿದ ಅಪ್ರತಿಮ ರಾಜಭಕ್ತರು. ಇವರನ್ನು ಹಂಡೆಪಾಳ್ಯಗಾರರು, ಚಂಡಿಮ ಅರಸರು ಎಂದೆಲ್ಲ ಕರೆಯುತ್ತಾರೆ ಎಂದರು. 

ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರ ಚಾಣಕ್ಯ ಕರಿಯರ್‌ ಅಕಾಡೆಮಿ ಮುಖ್ಯಸ್ಥ ಎನ್‌.ಎಂ. ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮಬೇಕು. ಪಾಲಕರು, ಸಮಾಜ ನಿಮ್ಮ ಮೇಲೆ ಇಟ್ಟ ಭರವಸೆ ಹುಸಿಗೊಳಿಸಬಾರದು. ಪಾಲಕರು ಸಹಿತ ಮಕ್ಕಳ ಎದುರು ಶಿಕ್ಷಕರನ್ನು ಅಗೌರವಿಸಬಾರದು. ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ನಿರ್ಮಿಸಿಕೊಡಬೇಕು ಎಂದರು.

ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಮಹಿಳಾ ಅಧ್ಯಕ್ಷೆ ಮಂಗಳಾದೇವಿ ಬಿರಾದಾರ, ದ್ರಾಕ್ಷಿ ನಿಗಮದ ಅಧ್ಯಕ್ಷ ಬಿ.ವಿ. ಪಾಟೀಲ ಮಾತನಾಡಿದರು. ಕರಭಂಟನಾಳ ಗುರು ಗಂಗಾಧರೇಶ್ವರ ಹಿರೇಮಠದ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿದರು.

ರಾಜ್ಯ ಸಂಘದ ಗೌರವಾಧ್ಯಕ್ಷ ಬಿ.ಎಸ್‌. ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಪುಗೌಡ ಬಿರಾದಾರ, ಜಿಲ್ಲಾಧ್ಯಕ್ಷ ಎಚ್‌.ಟಿ.ಬಿರಾದಾರ, ಕರ್ನಾಟಕ ವಿದ್ಯುತ್‌ ನಿಗಮ ನಿರ್ದೇಶಕ ವಕೀಲ ಆರ್‌.ಬಿ. ಪಾಟೀಲ, ಸಂಘದ ತಾಲೂಕಾಧ್ಯಕ್ಷ ಕೆ.ಎಸ್‌. ಗೌಡರ, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಗಣ್ಯರಾದ ಶರಣಪ್ಪ ರೇವಡಿ, ಸಂಗಮೇಶ ಕರಭಂಟನಾಳ, ಬಿ.ಎಚ್‌. ಪಾಟೀಲ, ಎಸ್‌. ಎಸ್‌. ಪಾಟೀಲ ಹಂಡರಗಲ್ಲ, ರಾಜೇಂದ್ರಗೌಡ ರಾಯಗೊಂಡ ವೇದಿಕೆಯಲ್ಲಿದ್ದರು.

ಬೆಂಗಳೂರು ಲಲಿತಕಲಾ ವಿವಿ ವಿಶ್ರಾಂತ ವಿಶೇಷ ಅಧಿಕಾರಿ ಡಾ|ಎಸ್‌.ಸಿ. ಪಾಟೀಲ, ಕೆಎಎಸ್‌ ಸಾಧಕಿ ಮಮತಾ ಹೊಸಗೌಡರ, ಯೋಗ ಶಿಕ್ಷಕಿ ಪ್ರೇಮಾ ಗುಡದಿನ್ನಿ ಅವರನ್ನು ಸನ್ಮಾನಿಸಲಾಯಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವಿವಿಧ ಪರೀಕ್ಷೆಗಳಲ್ಲಿ ಶೇ.80ಕ್ಕೂ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು
ಪುರಸ್ಕರಿಸಲಾಯಿತು.

ರವೀಂದ್ರ ಬಿರಾದಾರ ಸ್ವಾಗತಿಸಿದರು. ದೇವೇಂದ್ರ ಬೇನಾಳ ಪ್ರಾಸ್ತಾವಿಕ ಮಾತನಾಡಿದರು. ಎಂ.ಎಂ. ಬೆಳಗಲ್ಲ, ಎಚ್‌.ಎಸ್‌.ಹಂಡರಗಲ್ಲ, ಎಂ.ಬಿ.ಪಾಟೀಲ ನಿರೂಪಿಸಿದರು. ನಾಗರಾಜ ತಂಗಡಗಿ ವಂದಿಸಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.