ಧರ್ಮ ಸಂಘರ್ಷ ತಡೆಯಲು ವೀರಶೈವ ಪರಂಪರೆ ಸದಾ ಶಕ್ಯ


Team Udayavani, Sep 4, 2017, 3:51 PM IST

04-DV-4.jpg

ದಾವಣಗೆರೆ: ಯಾವುದೇ ಧರ್ಮ ಸಂಘರ್ಷ ನಡೆದಾಗಲೂ ವೀರಶೈವ ಪರಂಪರೆ ಅದನ್ನು ನಿವಾರಿಸುವಲ್ಲಿ ಸದಾ ಯಶಸ್ಸು ಕಂಡಿದೆ ಎಂದು ಶ್ರೀ ಶೈಲ ಪೀಠದ ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ಶ್ರೀಶೈಲ ಮಠದ ಆವರಣದಲ್ಲಿ ಸಮಾರೋಪಗೊಂಡ ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ
31ನೇ ಪುಣ್ಯಾರಾಧನೆ, ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ 6ನೇ ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನದ ಸಾನ್ನಿಧ್ಯ ವಹಿಸಿ, ಮಾತನಾಡಿದ ಅವರು, ವೀರಶೈವ ಪರಂಪರೆ ಯಾವುದೇ ಧರ್ಮ ಸಂಘರ್ಷ ನಡೆದಾಗಲೂ ಅದನ್ನು ಶಮನ ಮಾಡುವಲ್ಲಿ ಯಶಸ್ವಿಯಾಗಿದೆ ಎಂದರು.

ಭಾರತೀಯ ಸಂಸ್ಕೃತಿಯಲ್ಲಿ ಎರಡು ಮಾರ್ಗ ಇವೆ. ವೇದ ಮತ್ತು ಆಗಮ ಮಾರ್ಗಗಳು. ವೇದ ಒಪ್ಪಿದವರು ಆಗಮ ಒಪ್ಪುವುದಿಲ್ಲ. ಆಗಮ ಒಪ್ಪಿದವರು ಆಗಮ ಒಪ್ಪುವುದಿಲ್ಲ. ಆದರೆ, ವೀರಶೈವ ಧರ್ಮ ಎರಡನ್ನೂ ಒಪ್ಪುತ್ತದೆ. ಭಗವಂತನ ಸಾಕಾರ, ನಿರಾಕಾರಗಳನ್ನು ಒಪ್ಪಿ, ಕರ್ಮ,
ಭಕ್ತಿ ಮಾರ್ಗದಲ್ಲಿ ಬದುಕು ಸಾಗಿಸುವುದ ಕಲಿಸುತ್ತದೆ ಎಂದು ಹೇಳಿದರು. ಸಂಘರ್ಷದ ಮೂಲಕ ಮನುಷ್ಯ ಎಂದಿಗೂ ಶಾಂತಿ ಗಳಿಸಲಾರ. ಇದನ್ನು ಅರಿತು ಎಲ್ಲರೂ ಸಂಘರ್ಷವನ್ನು ಬಿಟ್ಟು ಸಮನ್ವಯದ ಮೂಲಕ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಅದನ್ನು ವೀರಶೈವ ಧರ್ಮ ಮಾಡುತ್ತಾ ಬಂದಿದೆ. ವೀರಶೈವ ಧರ್ಮದ ಪಂಚ ಪೀಠಗಳ ಪೈಕಿ ಒಂದಾದ ಶ್ರೀಶೈಲ ಪೀಠದ ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಪಂಚಪೀಠದ ಪರಂಪರೆ ಜೊತೆಗೆ ವಿರಕ್ತ ಪರಂಪರೆಯಲ್ಲಿ ಸಮನ್ವಯ ಸಾಧಿಸಿದ್ದರು ಎಂದು ಸ್ಮರಿಸಿದರು. 

ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಇಂದು ಅನೇಕ ರಾಜಕಾರಣಿಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಮಠಗಳತ್ತ ಮುಖಮಾಡುತ್ತಾರೆ. ಉಳಿದ ಸಂದರ್ಭದಲ್ಲಿ ಮಠದಿಂದ ದೂರ ಇರುತ್ತಾರೆ. ಆದರೆ, ನಾನು ಅಂತಹವರ ಸಾಲಿನವನಲ್ಲ. ಸದಾ ಮಠದೊಂದಿಗೆ ಇದ್ದು,
ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯಾವಾಗಿ ಪಾಲ್ಗೊಳ್ಳುತ್ತೇನೆ. ಶ್ರೀಶೈಲ ಮಠದ ಅನೇಕ ಕಾರ್ಯಗಳಲ್ಲಿ ನಾನು ಭಾಗಿಯಾಗಿದ್ದೇನೆ, ಅಭಿವೃದ್ಧಿಗೆ ನನ್ನದೇ ಆದ ಕೊಡುಗೆ ನೀಡಿದ್ದೇನೆ ಎಂದು ತಿಳಿಸಿದರು.

ನಾನು ತುಂಬಾ ಅದೃಷ್ಟವಂತ. ಶ್ರೀಶೈಲ ಮಠದ ಮೂರು ಗುರುಗಳೊಂದಿಗೆ ನಾನು ಒಡನಾಟ ಬೆಳೆಸಿಕೊಳ್ಳುವ ಭಾಗ್ಯ ಪಡೆದುಕೊಂಡೆ. ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಲಿಂಗೈಕ್ಯ ಉಮಾಪತಿ ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿಗಳ ಜೊತೆ ಉತ್ತಮ
ಒಡನಾಟ ಹೊಂದಿದ್ದೆ. ಇದೀಗ ಚನ್ನಸಿದ್ಧರಾಮ ಪಂಡಿತಾರಾಧ್ಯ ಶ್ರೀಗಳ ಜೊತೆಗೂ ಉತ್ತಮ ಒಡನಾಟ ಹೊಂದಿದ್ದೇನೆ ಎಂದು ಅವರು ಹೇಳಿದರು.

ಮರಿಯಮ್ಮನಹಳ್ಳಿ ಗುರುಪಾದ ದೇವರ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಜೈನಾಪುರ ಹಿರೇಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಉಪ ಮೇಯರ್‌ ಮಂಜಮ್ಮ ಹನುಮಂತಪ್ಪ, ಸದಸ್ಯ ದಿನೇಶ್‌ ಕೆ. ಶೆಟ್ಟಿ, ಹೋಟೆಲ್‌ ಉದ್ಯಮಿ ಅಣಬೇರು ರಾಜಣ್ಣ, ಜೆಡಿಎಸ್‌ ಜಿಲ್ಲಾಧ್ಯಕ್ಷ ಚಿದಾನಂದ, ಶಕುಂತಲ ಗುರುಸಿದ್ಧಯ್ಯ,  ಇತರರು ವೇದಿಕೆಯಲ್ಲಿದ್ದರು.

ವಕೀಲ ಬಳ್ಳಾರಿ ರೇವಣ್ಣ, ಪತ್ರಕರ್ತ ವರದರಾಜ್‌, ಪತ್ರಿಕಾ ಛಾಯಾಗ್ರಹಕ ವಿವೇಕ ಎಲ್‌, ಪುಟ್ಟಮ್ಮ ಮಹಾರುದ್ರಯ್ಯ  ಸೇರಿದಂತೆ ವಿವಿಧ ಗಣ್ಯರಿಗೆ ಗುರು ರಕ್ಷೆ ನೀಡಲಾಯಿತು. ಬಿಐಇಟಿ ಕಾಲೇಜಿನ ಡಾ| ಬಿ.ಇ. ರಂಗಸ್ವಾಮಿ ಉಪನ್ಯಾಸ ನೀಡಿದರು.

ಮೂಲೆಯಲಿದ್ದ ಮಾತೆ ಮಹಾದೇವಿ ಈಗ ಎದ್ದು ಬಂದ್ರು 
ದಾವಣಗೆರೆ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ನೀಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಕೂಡಲ ಸಂಗಮದ ಮಾತೆ ಮಹಾದೇವಿ ವಿರುದ್ಧ ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ಧಾಳಿ ನಡೆಸಿದ್ದಾರೆ.
ಭಾನುವಾರ ನಗರದ ಶ್ರೀಶೈಲ ಮಠದಲ್ಲಿ ಹಮ್ಮಿಕೊಂಡಿದ್ದ ಸ್ಮರಣೋತ್ಸವ, ಪುಣ್ಯಾರಾಧನೆ, ಜನಜಾಗೃತಿ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ಮಾತೆ ಮಹಾದೇವಿ ಬಸವಣ್ಣನವರ ವಚನಗಳನ್ನೇ ತಿದ್ದಿದವರು. ಅಂತಹವರು ವೀರಶೈವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ
ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿದ್ದಂತೆಯೇ ಮೂಲೆಯಿಂದ ಎದ್ದುಬಂದು ಲಿಂಗಾಯತ ಧರ್ಮಕ್ಕಾಗಿ ನೇತೃತ್ವ ವಹಿಸಿದರು ಎಂದರು.

110 ವರ್ಷದ ಹಿಂದೆ ಆರಂಭವಾದ ವೀರಶೈವ ಮಹಾಸಭಾ ಕೇವಲ ವೀರಶೈವರಿಗೆ ಸಂಬಂಧಪಟ್ಟದ್ದಲ್ಲ. ಲಿಂಗಾಯತರಿಗೂ ಸಂಬಂಧಪಟ್ಟದ್ದು. ನಾವು ಇದುವರೆಗೆ ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಎಲ್ಲೂ ಹೇಳಿಕೊಂಡಿಲ್ಲ. 38 ಒಳಪಂಗಡಗಳ ನಡುವೆಯೂ ಹೆಣ್ಣು, ಗಂಡು ತರುವ, ಕೊಡುವ ಸಂಪ್ರದಾಯ ಬೆಳೆದಿದೆ. ಆದರೆ, ಇದೀಗ ಕೆಲವರು ರಾಜಕೀಯ ಉದ್ದೇಶಕ್ಕೆ, ಇನ್ನಾವುದೋ ದುರುದ್ದೇಶಕ್ಕೆ ಲಿಂಗಾಯತ, ವೀರಶೈವರೆಂದು ಒಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಅಖೀಲ ಭಾರತ ವೀರಶೈವ ಮಹಾಸಭಾ ಸಧ್ಯ ನಡೆಯುತ್ತಿರುವ ಹೋರಾಟಗಳ ಪೈಕಿ ಯಾವುದರಲ್ಲೂ ಪಾಲ್ಗೊಳ್ಳದೇ ಇರಲು ನಿರ್ಧರಿಸಿದೆ. ಎರಡೂ ಬಣಗಳಿಂದ ಅಂತರ ಕಾಯ್ದುಕೊಳ್ಳುವ ನಿಲುವು ತಾಳಿದೆ. ಈ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ನಡೆಯುವ ಗುರು, ವಿರಕ್ತರ ಸಮಾವೇಶದಲ್ಲಿ ನಾನು ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. 

ಶ್ರೀಶೈಲ ಪೀಠದ ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.