ಮನಸೂರೆಗೊಂಡ ಜಾನಪದ ಸಿರಿ ಸಂಭ್ರಮ


Team Udayavani, Sep 4, 2017, 3:55 PM IST

04-DV-5.jpg

ದಾವಣಗೆರೆ: ಆಯಾಯ ಗ್ರಾಮ ಶಕ್ತಿದೇವತೆಗಳ ವಿವಿಧ ಪ್ರಕಾರದಲ್ಲಿ ಆರಾಧನೆ ಮಾಡುವ ಪೂಜಾ ಕುಣಿತ, ಕಾಡನ್ನೇ ದೇವರು ಎಂದು ಪೂಜಿಸುವ ಸೋಲಿಗರು ವರ್ಷಕ್ಕೊಮ್ಮೆ ಆಚರಿಸುವ ರೊಟ್ಟಿ ಹಬ್ಬದ ಸಂದರ್ಭದಲ್ಲಿ ಗೋರು…ಗೋರುಕ… ಗೋರುಕ… ಎಂಬ ಹಾಡಿಗೆ ಹಾಕುವ ಹೆಜ್ಜೆ, ಉಡುಪಿ ಜಿಲ್ಲೆಯಹ ಕುಡುಬಿ.. ಜನಾಂಗದವರು ಹೋಳಿ ಹುಣ್ಣಿಮೆಯಂದು ಹೂವಿನಿಂದ ಅಲಂಕರಿಸಿದ ಕರಗವನ್ನ ತಲೆಯ ಮೇಲೆ ಹೊತ್ತು ಕುಣಿಯುವ ಕರಗ ಕೋಲಾಟ, ವಿಜಯೋತ್ಸವದ ಸಂಕೇತದ ಕಲೆ ಪಟಾ ಕುಣಿತ, ಪೌರಾಣಿಕ ಕಥಾ ಹಿನ್ನೆಲೆಯ ಡೊಳ್ಳು ಕುಣಿತ… ಹೀಗೆ 15ಕ್ಕೂ ಹೆಚ್ಚು ಜಾನಪದ ಕಲೆಗಳ ಅತ್ಯಾಕರ್ಷಕ, ಮನ ಸೂರಗೊಳಿಸುವ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದು ಸಿರಿಗೆರೆಯ ತರಳಬಾಳು ಕಲಾಸಂಘ, ದಾವಣಗೆರೆಯ ಶಿವಸೈನ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಜಾನಪದ ಸಿರಿ ಸಂಭ್ರಮ-2017. ಗ್ರಾಮೀಣ ಪ್ರದೇಶದ ಜನರು ದೈನಂದಿನ ಹೊಲ, ಕಣ, ಮನೆಯ ಕೆಲಸದ ಆಯಾಸ, ಬದುಕಿನ ಏಕತಾನತೆ, ಬೇಸರಿಕೆ ದೂರ ಮಾಡಲೆಂದು ಗ್ರಾಮೀಣರು ರೂಢಿಸಿಕೊಂಡ ನೆಲದ ಜಾನಪದ ಕಲೆಯು ಕ್ರಮೇಣ ಕ್ಷೀಣಿಸುತ್ತಿದ್ದು, ಅದನ್ನು ಉಳಿಸಿ, ಬೆಳೆಸುವ ಮಹತ್ತರ ಉದ್ದೇಶದಿಂದ ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನ, ರಂಗಭೂಮಿಯ ದಿಗ್ಗಜರಲ್ಲೊಬ್ಬರಾದ ಶ್ರೀನಿವಾಸ ಜಿ. ಕಪ್ಪಣ್ಣ ಸಂಯೋಜನೆಯಲ್ಲಿ ಮೂಡಿ ಬಂದ ಜಾನಪದ ಸಿರಿ ಸಂಭ್ರಮ ನೋಡುಗರ ಮನಸೂರುಗೊಂಡಿತು.

ಸಿರಿಗೆರೆ ವಿದ್ಯಾಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ನರ್ಸರಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಜಾನಪದ ಕಲೆಗಳ ರಸದೌತಣ ಉಣ ಬಡಿಸಿದರು. ನೋಡುಗರು ಮಂತ್ರಮುಗ್ಧರಾಗುವಂತೆ ನೃತ್ಯ ಪ್ರದರ್ಶಿಸಿದರು. ಬಹು ದಿನಗಳ ನಂತರ ಒಂದೊಳ್ಳೆಯ ಜಾನಪದದ ಸಿರಿಯ ಸಂಭ್ರಮ ಅನುಭವಿಸುವ ಅವಕಾಶ ಮಾಡಿಕೊಟ್ಟರು. ಮೈಸೂರು ಭಾಗದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಬೀಸು ಕಂಸಾಳೆ, ಗಂಡುಮೆಟ್ಟಿನ ಕಲೆ ಎಂದೇ ಪರಿಗಣಿಸುವ ಡೊಳ್ಳು ಕುಣಿತ, ತುಳುನಾಡಿನ ಬುಡಕಟ್ಟು ಜನರ ಕಂಗೀಲು ನೃತ್ಯ, ಕೊಡಗಿನ ಪ್ರಮುಖ ಜನಪದ ನೃತ್ಯ ಉಮ್ಮತ್ತಾಟ್‌, ಶೈವ ಸಂಪ್ರದಾಯದ ವೀರರಸ ಪ್ರಧಾನದ ವೀರಗಾಸೆ, ಪ್ರಾಚೀನ ಸಾಂಪ್ರದಾಯಿಕ ಕ್ರೀಡೆ ಮಲ್ಲಕಂಬ, ಲಂಬಾಣಿ ಜನಾಂಗದ ಸಂಪ್ರದಾಯ ನೃತ್ಯ… ಹೀಗೆ ಪ್ರತಿಯೊಂದನ್ನು ವಿದ್ಯಾರ್ಥಿಗಳು ಚಿತ್ತಾಕರ್ಷಕವಾಗಿ ಪ್ರದರ್ಶಿಸಿದರು.

ಸಮಾಳ ಬಾರಿಸುವ ಮೂಲಕ ಜಾನಪದ ಸಿರಿ-2017 ಉದ್ಘಾಟಿಸಿದ ಶಾಸಕ ಶಾಮನೂರು ಶಿವಶಂಕರಪ್ಪ, ದೃಶ್ಯ, ಸಿನಿಮಾ ಮಾಧ್ಯಮದ ಪ್ರಭಾವದಲ್ಲಿ ನಗರ ಪ್ರದೇಶದಲ್ಲಿ ಜಾನಪದ ಕಲೆಯ ಮರೆಯ ಲಾಗುತ್ತಿದೆ. ನೆಪ ಮಾತ್ರಕ್ಕೆ ಜಾನಪದ ಕಲೆಗಳನ್ನು ಸ್ಮರಿಸಲಾಗುತ್ತಿದೆ. ಮದುವೆ,
ಮಗಳನ್ನ ಗಂಡ ಮನೆಗೆ ಕಳಿಸುವಾಗ, ಇತರೆ ಶುಭ ಸಂದರ್ಭದಲ್ಲಿ ಹಾಡುವ ಸೋಬಾನೆ… ಎಲ್ಲವೂ ಕಾಣೆಯಾಗುತ್ತಿವೆ. ಇಂತಹ ವಾತಾವರಣದಲ್ಲಿ
ಜಾನಪದ ಕಲೆಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಿರಿಗೆರೆ ಕಲಾಸಂಘದ ಜಾನಪದ ಸಿರಿ ಸಂಭ್ರಮ ಕಾರ್ಯಕ್ರಮವನ್ನ ದಾವಣಗೆರೆಯಲ್ಲಿ ಏರ್ಪಡಿಸಿರುವುದು ಸಂತೋಷದ ವಿಚಾರ. ಜಾನಪದ ಕಲೆಯ ಸವಿಯುವ ಜೊತೆಗೆ ಉಳಿಸಿ,  ಬೆಳೆಸುವಂತಾಗಬೇಕು ಎಂದು ಆಶಿಸಿದರು.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಹಿಂದಿನ ಚಲನಚಿತ್ರಗಳಲ್ಲಿ ಜಾನಪದ ಹಾಡು, ನೃತ್ಯ  ಇರುತ್ತಿದ್ದವು. ಈಗಿನ ಚಲನಚಿತ್ರಗಳಲ್ಲಿ ಹಾಡು, ಕುಣಿತ ನೋಡಿದರೆ ಯಾವುದೇ ತಿರುಳೇ ಇರುವುದಿಲ್ಲ. ಸಿರಿಗೆರೆ ವಿದ್ಯಾಸಂಸ್ಥೆಯ ಮಕ್ಕಳು ದಾವಣಗೆರೆಯಲ್ಲೂ ಜಾನಪದ ಕಲೆಯ ಪ್ರದರ್ಶನ ನೀಡುತ್ತಿರುವುದು ಸಂತೋಷದ ವಿಚಾರ ಎಂದರು. ಸಾನ್ನಿಧ್ಯ ವಹಿಸಿದ್ದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇಶದ ಸಂಸ್ಕೃತಿಯ ಪ್ರತೀಕವಾಗಿರುವ ಕಲಾ ಸಂಪತ್ತು ಅನೇಕ ಕಾರಣದಿಂದ ಕೀಣಿಸುತ್ತಿದೆ. ನದಿ, ನೀರು, ಕೆರೆಗಳು ಬತ್ತಿ  ಗಿತ್ತಿರುವಂತೆಯೇ ಕಲಾ ಸಂಪತ್ತು ಬತ್ತಿ ಹೋಗುತ್ತಿದೆ. ತಾನಾಗಿಯೇ ಪ್ರವರ್ಧಮಾನಕ್ಕೆ ಬಂದಿರುವ ಗ್ರಾಮೀಣ ಜನರ ನೋವು, ನಲಿವು, ಸಂತೋಷ. ಸಂಭ್ರಮದ ಪ್ರತೀಕವಾಗಿರುವ
ಜಾನಪದ ಕಲೆಯ ಉಳಿಸಿ, ಬೆಳಸುವ ನಿಟ್ಟಿನಲ್ಲಿ ಸಿರಿಗೆರೆ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ ಗ್ರಾಮೀಣ ಭಾಗದ 350ಕ್ಕೂ ವಿದ್ಯಾರ್ಥಿಗಳು ತರಬೇತಿ ಪಡೆದು, ಪ್ರದರ್ಶನ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸಾದು ಸದ್ಧರ್ಮ ಸಂಘದ ಅಧ್ಯಕ್ಷ ಕೆ.ಆರ್‌. ಜಯದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ಜಿಲ್ಲಾ ಪಂಚಾಯತಿ ಸದಸ್ಯ ಕೆ.ಎಸ್‌. ಬಸವಂತಪ್ಪ, ಮಾಜಿ ಸದಸ್ಯ ಕೆ.ಜಿ. ಬಸವನಗೌಡ, ಹೋಟೆಲ್‌ ಉದ್ಯಮಿ ಅಣಬೇರು ರಾಜಣ್ಣ, ಅಗಸನಕಟ್ಟೆ ಶಿವಮೂರ್ತಿ, ಕೆಎಸ್ಸೆಸ್‌ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್‌. ಕೆ. ಬಸವರಾಜ್‌, ಶಿವಸೈನ್ಯದ ಗೌರವ ಅಧ್ಯಕ್ಷ ಶಶಿಧರ್‌ ಹೆಮ್ಮನಬೇತೂರು, ಅಧ್ಯಕ್ಷ ಅಗಸನಕಟ್ಟೆ ಲಿಂಗರಾಜ್‌ ಇತರರು ಇದ್ದರು. 

ಹಾವು ಬಿಡಲಿಲ್ಲ…
ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಯಾವುದೇ ಸಭೆ, ಸಮಾರಂಭದಲ್ಲಾಗಲಿ ಹಾವು ಬಿಡುವುದು ಸಾಮಾನ್ಯ. ಅದೇ ರೀತಿ ಶಾಸಕ ಶಾಮನೂರು ಶಿವಶಂಕರಪ್ಪ ಸಭೆ, ಸಮಾರಂಭಕ್ಕೆ ತಡವಾಗಿ ಬರುವುದು ಸಾಮಾನ್ಯ. ರವೀಂದ್ರನಾಥ್‌ ಹಾವು ಬಿಡದೇ ಇರುವುದು, ಶಾಮನೂರು
ಶಿವಶಂಕರಪ್ಪ ಮೊದಲೇ ಆಗಮಿಸಿದ್ದು ಇಂದಿನ ಕಾರ್ಯಕ್ರಮದ ವಿಶೇಷ ಎಂದು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.