ಗೌರಿ ಲಂಕೇಶ್ ಹತ್ಯೆ: ಮೋದಿ ವಿರುದ್ಧ ಹರಿಹಾಯ್ದ ರಾಹುಲ್
Team Udayavani, Sep 6, 2017, 12:15 PM IST
ಹೊಸದಿಲ್ಲಿ : ದಿಟ್ಟ ಪತ್ರಕರ್ತೆ, ನೇರ ನುಡಿಯ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹರಿಹಾಯ್ದಿದ್ದಾರೆ
“ಜನ ಹೇಳ್ತಾರೆ ಪ್ರಧಾನಿ ಮೋದಿ ಮೌನಿ ಎಂದು; ಆದರೆ ಗಮನಿಸಬೇಕಾದ ಅಂಶವೆಂದರೆ ಮೋದಿ ಅವರ ಒಟ್ಟಾರೆ ಚಿಂತನೆಯೇ ಜನರ ಧ್ವನಿಯನ್ನು ದಮನಿಸುವುದೇ ಆಗಿದೆ’ ಎಂದು ರಾಹುಲ್ ಹೇಳಿದ್ದಾರೆ.
“ಕೆಲವೊಮ್ಮೆ ಪ್ರಧಾನಿ ಮೋದಿ ಅವರು ಒತ್ತಡಕ್ಕೆ ಮಣಿದು ಮೌನ ಮುರಿಯುತ್ತಾರೆ; ಆದರೆ ಅವರ ಒಟ್ಟು ಮೌನದ ಹಿಂದಿನ ಉದ್ದೇಶವೇ ಜನರ ಧ್ವನಿಯನ್ನು ದಮನಿಸುವುದು’ ಎಂದು ರಾಹುಲ್ ಹೇಳಿದರು.
“ಅಹಿಂಸೆಯೇ ಈ ದೇಶದ ಇತಿಹಾಸ. ಕೊಲೆಯನ್ನು ಯಾರೂ ಸಮರ್ಥಿಸುವಂತಿಲ್ಲ. ಪ್ರಧಾನಿ ಮೋದಿ ಅವರೋರ್ವ ಕೌಶಲ ಹಿಂದೂ ರಾಜಕಾರಣಿ. ಮೋದಿ ಏನೇ ಹೇಳಿದರೂ ಅದರಲ್ಲಿ ಎರಡು ಅರ್ಥವಿರುತ್ತದೆ. ಪತ್ರಕರ್ತೆಯೊಬ್ಬಳು ಮತಾಂಧರಿಗೆ ಬಲಿಯಾಗಿರುವುದು ನಿಜಕ್ಕೂ ದೊಡ್ಡ ದುರದೃಷ್ಟ’ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?