ಶಾಂತಿಮೊಗರು: ಒಂದು ಮೃತ ದೇಹ ಪತ್ತೆ


Team Udayavani, Sep 7, 2017, 10:18 AM IST

07-REP-16.jpg

ಸವಣೂರು: ಶಾಂತಿಮೊಗರು ಸೇತುವೆ ಬಳಿ ಕುಮಾರಧಾರಾ ನದಿಗೆ ಮಂಗಳವಾರ ಸ್ನಾನಕ್ಕಿಳಿದು ನೀರುಪಾಲಾದ ಸಹೋದರರ ಪೈಕಿ ಸತ್ಯಪ್ರಸಾದ್‌ (27) ಅವರ  ಮೃತದೇಹ ಬುಧವಾರ ಮಧ್ಯಾಹ್ನ ಸುಮಾರು 700 ಮೀಟರ್‌ ದೂರದಲ್ಲಿ ಪತ್ತೆಯಾಗಿದೆ. ಬೆಳ್ಳಾರೆ ಠಾಣಾಧಿಕಾರಿ ಮಹಜರು ಮಾಡಿ, ಮೃತದೇಹವನ್ನು ಕಡಬ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಬಿಟ್ಟುಕೊಡಲಾಯಿತು.

ಘಟನೆ ವಿವರ
ಕಡಬ ಹೋಬಳಿಯ ಕುಟ್ರಾಪ್ಪಾಡಿ ಗ್ರಾಮದ ಹರಿಪ್ರಸಾದ್‌, ಸತ್ಯಪ್ರಸಾದ್‌ ಸಹೋದರರು ಚಿಕ್ಕಪ್ಪನ ಮಗ ರೋಹಿತ್‌ ಅವರೊಂದಿಗೆ ಮಂಗಳವಾರ ಶಾಂತಿಮೊಗರು ಬಳಿ ನದಿಗಿಳಿದಿದ್ದರು. ಈ ಸಂದರ್ಭ ಹರಿಪ್ರಸಾದ್‌ ಹಾಗೂ ಸತ್ಯಪ್ರಸಾದ್‌ ಸುಳಿಯಲ್ಲಿ ಸಿಲುಕಿ ನೀರು ಪಾಲಾಗಿದ್ದರು. ಕಣ್ಮರೆಯಾಗಿದ್ದ ಅವರ ಪತ್ತೆಗಾಗಿ ಅಗ್ನಿಶಾಮಕ ದಳ, ಸ್ಥಳೀಯ ಈಜು ತಜ್ಞರು ಮಂಗಳವಾರವಿಡೀ ಶೋಧಕಾರ್ಯ ನಡೆಸಿದ್ದರು. ತಣ್ಣೀರುಬಾವಿ ಮುಳುಗುತಜ್ಞರು ತಣ್ಣೀರು ಬಾವಿ ತಂಡದ ವಾಸಿಂ ತಣ್ಣೀರುಬಾವಿ, ಸಾದಿಕ್‌ ತಣ್ಣೀರುಬಾವಿ, ಜಾಕಿರ್‌ ಹುಸೈನ್‌, ಜಾವಿದ್‌ ತಣ್ಣೀರು ಬಾವಿ, ಹಸನ್‌ ಪಿ.ಟಿ., ವಿಜಿತ್‌ ಪೆರ್ಲಂಪಾಡಿ ಅವರೊಂದಿಗೆ ನೀರಕಟ್ಟೆಯ ಆಶ್ರಫ್‌ ಹಾಗೂ ಯಶವಂತ್‌ ಬುಧವಾರ ತೀವ್ರ ಶೋಧಕಾರ್ಯಾಚರಣೆ ನಡೆಸಿದರು. ಅಗ್ನಿಶಾಮಕ ಇಲಾಖೆಯ ಬೋಟ್‌ ಮಾತ್ರ ಉಪಯೋಗಕ್ಕೆ ಲಭಿಸಿತೇ ವಿನಾ ಸಿಬಂದಿ ನೀರಿಗಿಳಿಯುವ ಪ್ರಯತ್ನ ಮಾಡಿಲ್ಲ.

ಮಂಗಳವಾರ ಕೂಡ ಘಟನಾ ಸ್ಥಳದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದರು. ಕಡಬ ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ರೋಡ್ರಿಗಸ್‌, ಆರ್‌ಐ ಕೊರಗಪ್ಪ ಹೆಗ್ಡೆ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್‌ ಕುಮಾರ್‌ ಕೆಡೆಂಜಿ, ಪುತ್ತೂರು ಎಪಿಎಂಸಿ ನಿರ್ದೇಶಕ ದಿನೇಶ್‌ ಮೆದು, ತಾಪಂ ಸದಸ್ಯೆ ತೇಜಸ್ವಿನಿ ಶೇಖರ್‌, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಭೇಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

ಬೆಳ್ಳಾರೆ ಠಾಣೆಯ ಎಸ್‌ಐ ಎಂ.ವಿ. ಚೆಲುವಯ್ಯ ನೇತೃತ್ವದಲ್ಲಿ ಪೊಲೀಸ್‌ ತಂಡ ಹಾಗೂ ಅಗ್ನಿಶಾಮಕ ದಳ ಮುಳುಗು ತಜ್ಞರಿಗೆ ಸಹಕರಿಸಿತ್ತು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.