IRCTC ಹೋಟೆಲ್ ಹಗರಣ; ಲಾಲು, ಪುತ್ರ ತೇಜಸ್ವಿಗೆ ಸಿಬಿಐ ಸಮನ್ಸ್
Team Udayavani, Sep 7, 2017, 12:46 PM IST
ನವದೆಹಲಿ: ಐಆರ್ ಸಿಟಿಸಿ ಹೋಟೆಲ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಗುರುವಾರ ರಾಷ್ಟ್ರೀಯ ಜನತಾದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಯಾದವ್ ಪುತ್ರ ತೇಜಸ್ವಿ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 11ರಂದು ಲಾಲು ಪ್ರಸಾದ್ ಯಾದವ್ ಹಾಗೂ ಸೆಪ್ಟೆಂಬರ್ 12ರಂದು ತೇಜಸ್ವಿ ಯಾದವ್ ವಿಚಾರಣೆಗೆ ಹಾಜರಾಗಬೇಕೆಂದು ಸಿಬಿಐ ಸೂಚನೆ ನೀಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
2006ರಲ್ಲಿ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ, 2 ಐಆರ್ ಸಿಟಿಸಿ ಹೋಟೆಲ್ ಗಳ ನಿರ್ವಹಣೆಯ ಗುತ್ತಿಗೆಯನ್ನು ಭಾರೀ ಪ್ರಮಾಣದ ಲಂಚ ಪಡೆದು ಖಾಸಗಿ ಹೋಟೆಲ್ ಗೆ ನೀಡಿರುವ ಆರೋಪ ಎದುರಿಸುತ್ತಿದ್ದಾರೆ.
ಪಾಟ್ನಾದಲ್ಲಿ ಸುಮಾರು 3 ಎಕರೆ ಜಾಗವನ್ನು ಲಂಚವಾಗಿ ಸ್ವೀಕರಿಸಿ ಖಾಸಗಿ ಕಂಪನಿಯ ಹೋಟೆಲ್ ಗಳಿಗೆ ರೈಲ್ವೆ ಹೋಟೆಲ್ ನಿರ್ವಹಣೆಯ ಗುತ್ತಿಗೆ ನೀಡಿರುವುದಾಗಿ ವರದಿ ವಿವರಿಸಿದೆ. ಲಾಲು ಯಾದವ್ ಮತ್ತು ಸರಳಾ ಗುಪ್ತಾ ಒಡೆತನದ ಸುಜಾತಾ ಹೋಟೆಲ್ ನಡುವಿನ ಸಂಚು ಇದಾಗಿದೆ ಎಂದು ಸಿಬಿಐ ಆರೋಪಿಸಿದೆ. ಸರಳಾ ಗುಪ್ತಾ ಲಾಲು ಯಾದವ್ ಪಕ್ಷದ ಸಂಸದನ ಪತ್ನಿ ಹಾಗೂ ಪ್ರೇಮ್ ಗುಪ್ತಾ ಅವರ ನಿಕಟವರ್ತಿಯಾಗಿರುವುದಾಗಿ ವರದಿ ತಿಳಿಸಿದೆ.
ಬೃಹತ್ ಮಾಲ್ ನಿರ್ಮಾಣಗೊಂಡಿರುವ ಈ ಭೂಮಿಯ ಮಾಲೀಕತ್ವವನ್ನು ತೇಜಸ್ವಿ ಯಾದವ್ ಕೂಡಾ ಹೊಂದಿದ್ದಾರೆ ಎಂದು ಸಿಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ