48 ಗಂಟೆಯೊಳಗೆ ಮತ್ತೊಬ್ಬ ಪತ್ರಕರ್ತನ ಹತ್ಯೆಗೆ ಯತ್ನ, ಗುಂಡಿನ ದಾಳಿ
Team Udayavani, Sep 7, 2017, 6:18 PM IST
ಪಾಟ್ನ: ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಯ ಬೆನ್ನಲ್ಲೇ ಬಿಹಾರದ ಅಲ್ವಾರ್ ಜಿಲ್ಲೆಯಲ್ಲಿ ಹಿಂದಿ ದೈನಿಕದ ಕಾರ್ಯನಿರತ ಪತ್ರಕರ್ತರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಪತ್ರಕರ್ತನನ್ನು ಪಂಕಜ್ ಮಿಶ್ರಾ ಎಂದು ಗುರುತಿಸಲಾಗಿದೆ. ಗುಂಡೇಟಿನಲ್ಲಿ ಗಾಯಗೊಂಡ ಮಿಶ್ರಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಿಶ್ರಾ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಿದೆ.
ಮಿಶ್ರಾ ಅವರು ಬ್ಯಾಂಕ್ ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ತೆಗೆದುಕೊಂಡು ಹೊರ ಬರುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!