ಎರಡನೇ ದಿನಕ್ಕೆ ಕಾಲಿಟ್ಟ ಅಹೋ ರಾತ್ರಿ ಧರಣಿ
Team Udayavani, Sep 8, 2017, 6:10 AM IST
ಬೆಂಗಳೂರು: ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ 12
ವಿಧಾನ ಪರಿಷತ್ ಸದಸ್ಯರು ಪಕ್ಷಾತೀತವಾಗಿ ನಡೆಸುತ್ತಿರುವ ಅಹೋ ರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ವಿಧಾನಸೌಧ-ವಿಕಾಸ ಸೌಧ ನಡುವಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿರುವ ವಿಧಾನ ಪರಿಷತ್
ಸದಸ್ಯರು, ಮುಖ್ಯ ಮಂತ್ರಿಯವರು ಖುದ್ದು ಸಭೆ ಆಶ್ವಾಸನೆ ಕೊಡಿಸುವವರೆಗೂ ಧರಣಿ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹೀಗಾಗಿ,ಬುಧವಾರ ಆರಂಭಗೊಂಡ ಧರಣಿ ಗುರುವಾರ ರಾತ್ರಿಯೂ ಮುಂದುವರಿದಿದ್ದು, ವಿಧಾನ ಪರಿಷತ್ ಸದಸ್ಯರು ದಿಂಬು-ಹಾಸಿಗೆ ಸಮೇತ ಠಿಕಾಣಿ ಹೂಡಿದ್ದಾರೆ. ಈ ಮಧ್ಯೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್
ಸೇಠ್ ಗುರುವಾರ ಬೆಳಗ್ಗೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದರಾದರೂ ಪ್ರಯೋಜನವಾಗಲಿಲ್ಲ.ಬದಲಿಗೆ, ತನ್ವೀರ್ ಸೇಠ್ ಧರಣಿ ನಿಲ್ಲಿಸುವಂತೆ ಧಮ್ಕಿ ಹಾಕಿದ್ದಾರೆ.ಏನಾದರೂ ಮಾಡಿ ಕೊಳ್ಳಿ ಎಂದು ಬೇಜವಾಬ್ದಾರಿಯಾಗಿ
ಮಾತನಾಡಿದ್ದಾರೆ.
ಲಕ್ಷಾಂತರ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮುದಾಯದ ಪ್ರತಿ ನಿಧಿಗಳಾದ ನಾವು ನ್ಯಾಯಕ್ಕಾಗಿ ಧರಣಿ ನಡೆಸುತ್ತಿದ್ದರೆ ಸ್ಪಂದನೆ ಮಾಡುವ ಬದಲು ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ಸದಸ್ಯರು, ಬಸವರಾಜ ಹೊರಟ್ಟಿಯಂತಹ ಹಿರಿಯರು ಧರಣಿ ಕುಳಿತಿರುವಾಗ ಸಚಿವರ ವರ್ತನೆ ಸರಿಯಲ್ಲ. ಮುಖ್ಯಮಂತ್ರಿಯವರು ತಕ್ಷಣ ಸಂಪುಟದಿಂದ ತನ್ವೀರ್ ಸೇಠ್ ಕೈ ಬಿಡಬೇಕು ಎಂದು ಆಗ್ರಹಿಸಿದರು.
ನಾನು ಬೆದರಿಕೆಯೊಡ್ಡಿಲ್ಲ. ಮುಖ್ಯಮಂತ್ರಿ ಜತೆ ಮಾತುಕತೆಗೆ ಸಮಯ ನಿಗದಿ ಪಡಿಸಿದರೂ ಪರಿಷತ್ ಸದಸ್ಯರು ಬರಲಿಲ್ಲ. ಅವರ ಉದ್ದೇಶವೇ ಬೇರೆ ಇದೆ. ಶಿಕ್ಷಕ ಸಮುದಾಯದ ಬಗ್ಗೆ ಸರ್ಕಾರಕ್ಕೂ ಕಾಳಜಿಯಿದ್ದು ಸಮಸ್ಯೆ ಗಳನ್ನು ಈಡೇರಿಸಲು ಬದ್ಧವಾಗಿದೆ.
– ತನ್ವೀರ್ ಸೇಠ್ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ