ಛೇ..ಸಿಮೆಂಟ್‌ ನಗರಿಯಲ್ಲಿ ಮೂತ್ರಾಲಯ ಇಲ್ಲ!


Team Udayavani, Sep 8, 2017, 12:50 PM IST

GUL-7.jpg

ವಾಡಿ: ಬೆಳೆಯುತ್ತಿರುವ ಪಟ್ಟಣದಲ್ಲಿ ಕನಿಷ್ಠ ಮೂತ್ರಾಲಯಗಳ ಮೂಲಸೌಕರ್ಯಗಳಿಲ್ಲ ಎಂದಾದರೆ, ಇಲ್ಲಿ ನಾಚಿಕೆ ಪಡಬೇಕಾದದ್ದು ಅಧಿಕಾರಿಗಳ್ಳೋ, ಜನಪ್ರತಿನಿಧಿಗಳ್ಳೋ ಅಥವಾ ಮತಹಾಕಿದ ಜನತೆಯೋ ಎನ್ನುವುದು
ಯಕ್ಷ ಪ್ರಶ್ನೆಯಾಗಿದೆ.

ಒಟ್ಟು 23 ವಾರ್ಡ್‌ಗಳಿರುವ ಹಾಗೂ 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಟ್ಟಣದಲ್ಲಿ ಪುರಸಭೆ ಆಡಳಿತವಿದೆ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಬೃಹತ್‌ ಸಿಮೆಂಟ್‌ ಕಾರ್ಖಾನೆಯಿದೆ. ಅಷ್ಟಕ್ಕೂ ಇದು ಅಪ್ಪಟ ಕಾರ್ಮಿಕ ನಗರಿ. ಇಲ್ಲಿ ಶೇ.90 ರಷ್ಟು ಭಾಗ ದುಡಿಯುವ ಜನರಿದ್ದಾರೆ. ಕಲ್ಲು ಗಣಿ ಕಾರ್ಮಿಕರು, ಎಸಿಸಿ ಸಿಮೆಂಟ್‌ ಕಂಪನಿ ಕಾರ್ಮಿಕರು, ಪೌರಕಾರ್ಮಿಕರು, ದಿನಗೂಲಿ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರಿಂದ ಪಟ್ಟಣ ಆವರಿಸಿಕೊಂಡಿದೆ.

ಪಟ್ಟಣದ ಯಾವ ರಸ್ತೆಗಳ ಬದಿಯಲ್ಲೂ ಸಾರ್ವಜನಿಕ ಮೂತ್ರಾಲಯಗಳು ಕಾಣಸಿಗುವುದಿಲ್ಲ. ಪುರುಷರು ಗೋಡೆಗಳಿಗೆ ಒರಗಿ ನಿಲ್ಲುವ ಅನಾಗರಿಕ ಪದ್ಧತಿ ಕಂಡು ಕೇಂದ್ರ ಸರಕಾರದ ಸ್ವತ್ಛ ಭಾರತ ಅಭಿಯಾನ ಯೋಜನೆ ಮುಸಿಮುಸಿ ನಗುತ್ತಿದೆ. ಪುರಸಭೆ ಕಚೇರಿಯ ಗೋಡೆಗಳಿಗೆ ನಿತ್ಯ ಮೂತ್ರ ವಿಸರ್ಜಿಸುವರ ಸಂಖ್ಯೆಯೂ ಹೆಚ್ಚಿದೆ. ನೈಸರ್ಗಿಕ ಕ್ರಿಯೆ ತಡೆಯಲಾಗದೆ ಸಾರ್ವಜನಿಕರು ಸಿಕ್ಕಸಿಕ್ಕ ಗೋಡೆಗಳ ಆಸರೆಗೆ ನಿಂತು ಮೂತ್ರ ವಿಸರ್ಜಿಸುವುದನ್ನು ಕಂಡು ವಿದ್ಯಾರ್ಥಿನಿಯರು, ಮಹಿಳೆಯರು, ಕಣ್ಣು-ಮೂಗು ಮುಚ್ಚಿಕೊಂಡು ಹೆಜ್ಜೆ ಹಾಕಬೇಕಾದ ಹೀನಾಯ ಸ್ಥಿತಿ ಇಲ್ಲಿ ಜೀವಂತವಿದೆ.

ಸ್ವತ್ಛ ಭಾರತ ಯೋಜನೆ ಸಾಕಾರಕ್ಕೆ ಮುಂದಾಗಿರುವ ಪುರಸಭೆ ಅಧಿಕಾರಿಗಳು, ವಿದ್ಯಾರ್ಥಿಗಳಿಂದ ಪ್ರಭಾತ್‌ಫೇರಿ ಮಾಡಿಸಿದ್ದಾರೆ. ಪಟ್ಟಣದ ವಿವಿಧೆಡೆ ಜಾಹಿರಾತು ಪ್ರಕಟಿಸಿ ಮೂಲಸೌಕರ್ಯ ಜಾಗೃತಿಗೆ ಮುಂದಾಗಿದ್ದಾರೆ. ಕನಿಷ್ಠ ಒಂದು ಸ್ಥಳದಲ್ಲಾದರೂ ಮೂತ್ರಾಲಯ ಸೌಲಭ್ಯ ಒದಗಿಸದ ಪುರಸಭೆ ಅಧಿಕಾರಿಗಳ ಜಾಗೃತಿ ಅಭಿಯಾನಗಳು ಸ್ಥಳೀಯರ ಟೀಕೆಗೆ ಗುರಿಯಾಗಿವೆ.

ವಿಷಜಂತುಗಳ ಭಯದಲ್ಲಿಯೇ ಕಸದ ರಾಶಿಗಳ ಮಧ್ಯೆ ನಿಂತು ಮೂತ್ರ ವಿಸರ್ಜಿಸುವಂತ ದುಸ್ಥಿತಿ ಇಲ್ಲಿದೆ. ಪುರಸಭೆ ಸಿಬ್ಬಂದಿಯೊಬ್ಬ ವಾರದ ಹಿಂದಷ್ಟೇ ಪುರಸಭೆ ಸಮೀಪದ ಪಾಳು ಗೋಡೆ ಮರೆಗೆ ಮೂತ್ರಕ್ಕೆ ಹೋದಾಗ ಹಾವು ಕಚ್ಚಿಸಿಕೊಂಡು ಆಸ್ಪತ್ರೆಗೆ ಸೇರಿದ ಘಟನೆಯೂ ನಡೆದಿದೆ. ಇಷ್ಟಾದರೂ ಅಧಿಕಾರಿಗಳು, ವಾರ್ಡ್‌ ಸದಸ್ಯರು ಎಚ್ಚೆತ್ತುಕೊಳ್ಳದಿರುವುದು ಬೇಜವಾಬ್ದಾರಿ ಪರಮಾವಧಿ ಆಗಿದೆ. 

ಪುರಸಭೆ ಖಜಾನೆಯಲ್ಲಿ ಕೋಟ್ಯಂತರ ರೂ. ಅನುದಾನ ಕೊಳೆಯುತ್ತಿದೆ. ಈ ಅನುದಾನ ಯಾವ ಕಾರ್ಯಕ್ಕೆ ಬಳಕೆಯಾಗುತ್ತಿದೆ ಎನ್ನುವ ಪ್ರಶ್ನೆಗೆ ಪುರಸಭೆಯೇ ಉತ್ತರಿಸಬೇಕಿದೆ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.