ಬೃಹತ್ ಮರಾಠಾ ಮೌನ ಮೋರ್ಚಾ
Team Udayavani, Sep 8, 2017, 1:28 PM IST
ಬೀದರ: ಮರಾಠಾ ಸಮಾಜವನ್ನು 2(ಎ) ಪ್ರವರ್ಗಕ್ಕೆ ಸೇರ್ಪಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಬೀದರ ಸೇರಿದಂತೆ ಜಿಲ್ಲೆಯಾದ್ಯಂತ ಬೃಹತ್ ಮರಾಠಾ ಕ್ರಾಂತಿ (ಮೌನ) ಮೋರ್ಚಾ ನಡೆಸಲಾಯಿತು.
ಸಮಾಜ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಮೇಲೆ ಒತ್ತಡ ಹಾಕಿದರು. ವಿವಿಧ ಪಕ್ಷದ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು.
ಬೀದರನಲ್ಲಿ ನಗರದ ಗಣೇಶ ಮೈದಾನದಿಂದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೋರ್ಚಾ ನಡೆಸಲಾಯಿತು. ಕೈಯಲ್ಲಿ ಭಗವಾಧ್ವಜ ಹಿಡಿದು “ಏಕ ಮರಾಠಾ ಲಾಕ್ ಮರಾಠಾ’ ಘೋಷಣೆಯೊಂದಿಗೆ ಹೆಜ್ಜೆ ಹಾಕಿದರು. ರಾಜ್ಯದಲ್ಲಿ ಸಮಾಜ ಬಾಂಧವರು ಕಾಲಾನುಕಾಲದಿಂದ ಇತರೆ ಜಾತಿ, ಧರ್ಮದ ಜನರೊಂದಿಗೆ ಸ್ನೇಹ, ವಿಶ್ವಾಸದಿಂದ ಬಾಳುತ್ತಿದ್ದಾರೆ. ಆದರೆ ಆರ್ಥಿಕವಾಗಿ ಹಿಂದುಳಿದಿದ್ದು, ಇತರೆ ಸಮುದಾಯಕ್ಕೆ ಹೋಲಿಸಿದರೆ
ಅಲ್ಪಸಂಖ್ಯಾತರಾಗಿದ್ದಾರೆ. ಅಗತ್ಯ ಮೀಸಲಾತಿ ದೊರಕದ ಕಾರಣ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅವಕಾಶ ವಂಚಿತರಾಗಿದ್ದಾರೆ. ಬೇಡಿಕೆಗಳ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರಕ್ಕೆ ನಮ್ಮ ಧ್ವನಿ ಕೇಳಿಸುತ್ತಿಲ್ಲ. ಇದರಿಂದ ವಿಕಾಸದ ಮುಖ್ಯವಾಹಿನಿಯಿಂದ ದೂರ ಉಳಿಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ಅನಿವಾರ್ಯವಾಗಿ ಜನ ಸಹನೆ ಕಳೆದುಕೊಂಡು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ವಿದ್ಯಾರ್ಥಿಗಳಾದ ಜಿಜಾವ್ ಗಣೇಶ, ಅಂಬಿಕಾ ಟಾಕಳೆ, ಪೂಜಾ ಜಾವಕೆ ಮತ್ತು ಪೂಜಾ ಬಿರಾದಾರ ಅವರು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಡಾ| ಮಹಾದೇವ ಅವರಿಗೆ ಸಲ್ಲಿಸಿದರು. ಸಂಸದ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭಾಗವಹಿಸಿದ್ದರು.
ಔರಾದನಲ್ಲಿ ನಡೆದ ಮೋರ್ಚಾದಲ್ಲಿ 25ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು. ಶಾಸಕ ಪ್ರಭು ಚವ್ಹಾಣ ಮತ್ತಿತರರು ಪಾಲ್ಗೊಂಡಿದ್ದರು.
ಭಾಲ್ಕಿ ಮತ್ತು ಬಸವಕಲ್ಯಾಣದಲ್ಲಿ ನಡೆದ ರ್ಯಾಲಿಯಲ್ಲಿ 10-15 ಸಾವಿರ ಜನರು ಭಾಗವಹಿಸಿದ್ದರು. ಶಾಸಕ ಮಲ್ಲಿಕಾರ್ಜುನ ಖೂಬಾ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಬಸವರಾಜ ಪಾಟೀಲ ಅಟ್ಟೂರ, ಬಿ. ನಾರಾಯಣ, ಡಿ.ಕೆ. ಸಿದ್ರಾಮ್ ಮತ್ತಿತರರು ಬೆಂಬಲ ಸೂಚಿಸಿದರು. ಹುಮನಾಬಾದನಲ್ಲಿ 500ಕ್ಕೂ ಹೆಚ್ಚು ಜನ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ