RSS ಬಗ್ಗೆ ಮಾತಾಡಬೇಡಿ, ನಕ್ಸಲರ ತನಿಖೆ ನಡೆಸಿ; ಮೌನ ಮುರಿದ ಕೇಂದ್ರ
Team Udayavani, Sep 8, 2017, 1:40 PM IST
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ರಾಜ್ಯ ಸರ್ಕಾರ ಯಾಕೆ ಸೂಕ್ತ ಭದ್ರತೆ ಕೊಟ್ಟಿಲ್ಲ. ಮಾವೋವಾದಿಗಳಿಗೂ ಗೌರಿ ಲಂಕೇಶ್ ಮೇಲೆ ಸಿಟ್ಟಿತ್ತು. ಅನಾವಶ್ಯಕವಾಗಿ ಆರ್ ಎಸ್ ಎಸ್ ಬಗ್ಗೆ ಮಾತನಾಡಬೇಡಿ, ಸೂಕ್ತ ತನಿಖೆ ನಡೆಸಿ ಎಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾದ ಮೂರು ದಿನಗಳ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ಮೌನ ಮುರಿಯುವ ಮೂಲಕ ತಿರುಗೇಟು ನೀಡಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ ಎಸ್ ಎಸ್ ಕೈವಾಡ ಇರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪತ್ರಿಕಾಗೋಷ್ಠಿ ನಡೆಸಿ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಗೌರಿ ಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಆಧಾರವಿಲ್ಲದೇ ರಾಹುಲ್ ಗಾಂಧಿ ಹೇಗೆ ಆರೋಪಿಸಿದ್ದಾರೆ ಎಂದು ಪ್ರಶ್ನಿಸಿದರು. ತನಿಖೆಗೂ ಮೊದಲೇ ಯಾರೂ ತೀರ್ಪು ಕೊಡಬಾರದು.
ಗೌರಿ ಹತ್ಯೆಯಲ್ಲಿ ಬಲಪಂಥೀಯ ಸಂಘಟನೆ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ 2 ನಕ್ಸಲೀಯರ ಗುಂಪುಗಳಾಗಿವೆ. ನಕ್ಸಲರಿಗೂ ಗೌರಿ ಲಂಕೇಶ್ ಮೇಲೆ ಸಿಟ್ಟಿತ್ತು. ಪರಿಹಾರ ಕೊಡಿಸುವುದಾಗಿ ಮುಖ್ಯವಾಹಿನಿಗೆ ಕರೆ ತಂದಿದ್ದ 5 ನಕ್ಸಲೀಯರು ಜೈಲು ಸೇರಿದ್ದಾರೆ. ಹಾಗಾಗಿ ಮಾವೋವಾದಿಗಳಿಗೂ ಗೌರಿ ಮೇಲೆ ಸಿಟ್ಟಿದೆ. ಆ ಬಗ್ಗೆಯೂ ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದು ರವಿಶಂಕರ್ ಪ್ರಸಾದ್ ಹೇಳಿದರು.
ಆರ್ ಎಸ್ ಎಸ್ ನಾಯಕರ ಹತ್ಯೆಯಾದಾಗ ಯಾಕೆ ರಾಹುಲ್ ಗಾಂಧಿ ಸುಮ್ಮನಿದ್ದರು, ಕೇರಳದಲ್ಲಿ ಬಿಜೆಪಿ ನಾಯಕರ ಹತ್ಯೆಯಾದಾಗಲೂ ಯಾಕೆ ಮೌನವಾಗಿದ್ದು ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್