ಉಡುಪಿ ನರ್ಮ್ ಬಸ್‌ ನಿಲ್ದಾಣ: ವರ್ಷದೊಳಗೆ ಪೂರ್ಣ


Team Udayavani, Sep 9, 2017, 6:10 AM IST

KSRTC-UDUDPI-BUS.jpg

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನರ್ಮ್ ಬಸ್‌ಗಳು ಆರಂಭವಾಗಿ ಒಂದು ವರ್ಷವಾದರೂ ಸರಿಯಾದ ಬಸ್‌ ನಿಲ್ದಾಣವಿಲ್ಲ ಎನ್ನುವ ಕೊರಗು ಇನ್ನು ನೀಗಲಿದೆ. ಮುಂದಿನ ಒಂದು ವರ್ಷದೊಳಗೆ ಉಡುಪಿ ನಗರದ ಕೇಂದ್ರ ಸ್ಥಾನದಲ್ಲಿ ಸುಸಜ್ಜಿತ ನರ್ಮ್ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ. 

ಸೆ. 10ಕ್ಕೆ ಗುದ್ದಲಿಪೂಜೆ
ಉಡುಪಿ ನಗರದ ಸಿಟಿ ಬಸ್‌ ನಿಲ್ದಾಣ ಬಳಿಯ ಶಿಕ್ಷಣ ಇಲಾಖೆ ಜಾಗದಲ್ಲಿ ಈ ಹೊಸ ಬಸ್‌ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಸೆ. 10 ರ ಬೆಳಗ್ಗೆ 11.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಗೋಪಾಲ ಪೂಜಾರಿ ಪಾಲ್ಗೊಳ್ಳಲಿದ್ದಾರೆ. 

ಐದು ಬಸ್‌ ನಿಲ್ದಾಣ
ಉಡುಪಿಯ ಬನ್ನಂಜೆಯಲ್ಲಿ 35 ಕೋ.ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಜಿಲ್ಲಾ ಬಸ್‌ ನಿಲ್ದಾಣ, ಉಡುಪಿಯಲ್ಲಿ 5 ಕೋ.ರೂ. ವೆಚ್ಚದ ಸಿಟಿ ಬಸ್‌ ನಿಲ್ದಾಣ (ಖಾಸಗಿ), 4 ಕೋ. ರೂ. ವೆಚ್ಚದ ನರ್ಮ್ ಬಸ್‌ ನಿಲ್ದಾಣ (ಸರಕಾರಿ), ಮಲ್ಪೆಯಲ್ಲಿ 3 ಕೋ.ರೂ., ಮಣಿಪಾಲದಲ್ಲಿ 2.5 ಕೋ.ರೂ. ವೆಚ್ಚದ ಬಸ್‌ ನಿಲ್ದಾಣ ಹೀಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಶೀಘ್ರ ಐದು ಹೊಸ ಸುಸಜ್ಜಿತ ಬಸ್‌ ನಿಲ್ದಾಣಗಳು ನಿರ್ಮಾಣವಾಗಲಿವೆ.

“ಬಸ್‌ ನಿಲ್ದಾಣ ಅಗತ್ಯವಿತ್ತು’
ಬೆಳೆಯುತ್ತಿರುವ ಉಡುಪಿ ನಗರದಲ್ಲಿ ಸುಸಜ್ಜಿತ ಸರಕಾರಿ ಬಸ್‌ ನಿಲ್ದಾಣದ ಅಗತ್ಯತೆಯನ್ನು ಮನಗಂಡು ಸಚಿವ ಪ್ರಮೋದ್‌ ಮಧ್ವರಾಜ್‌ ಅವರ ದೂರದೃಷ್ಠಿತ್ವದ ಚಿಂತನೆಯಿಂದ ಸೆ. 10 ರಂದು ಬಸ್‌ ನಿಲ್ದಾಣಕ್ಕೆ ಶಂಕುಸ್ಥಾಪನೆಯಾಗಲಿದ್ದು, ಆದಷ್ಟು ಬೇಗ ಜನರ ಸೇವೆಗೆ ಲಭ್ಯವಾಗಲಿದೆ. ನರ್ಮ್ ಬಸ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬಸ್‌ ನಿಲ್ದಾಣ ನಿರ್ಮಾಣದಿಂದ ಜನರಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ ಹೇಳಿದ್ದಾರೆ. 

ಉಡುಪಿ ನಗರದಾದ್ಯಂತ ಸಂಚರಿಸುತ್ತಿರುವ ನರ್ಮ್ ಬಸ್‌ಗಳಿಗೆ ಜನರಿಂದ ಉತ್ತಮ ಸ್ಪಂದನೆ ಕೂಡ ವ್ಯಕ್ತವಾಗಿದ್ದು, ಇನ್ನು ನರ್ಮ್ ಬಸ್‌ ನಿಲ್ದಾಣ ಸಹ ನಿರ್ಮಾಣವಾದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚುವುದರ ಜತೆಗೆ ಜನರಿಗೂ ಅನುಕೂಲಕರವಾಗಲಿದೆ.

ಹೀಗಿರಲಿದೆ ವಿನ್ಯಾಸ
4 ಕೋ.ರೂ. ವೆಚ್ಚದಲ್ಲಿ ಸಿಟಿ ಬಸ್‌ ನಿಲ್ದಾಣದ ಎದುರಿನ ಶಿಕ್ಷಣ ಇಲಾಖೆಯ ಹೆಸರಲ್ಲಿದ್ದ ಹಳೆ ಡಿಡಿಪಿಐ ಕಚೇರಿಯ 41 ಸೆಂಟ್ಸ್‌ ಜಾಗದಲ್ಲಿ ನರ್ಮ್ ಬಸ್‌ ನಿಲ್ದಾಣ ನಿರ್ಮಾಣವಾಗುತ್ತಿದ್ದು, 3 ಅಂತಸ್ತಿನಲ್ಲಿ ನಿರ್ಮಾಣವಾಗಲಿದೆ. ಅಂಡರ್‌ಗ್ರೌಂಡ್‌ನ‌ಲ್ಲಿ ಇತರೆ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆಯಿದ್ದರೆ, ಗ್ರೌಂಡ್‌ ಫ್ಲೋರ್‌ನಲ್ಲಿ ಬಸ್‌ಗಳಿಗೆ ನಿಲುಗಡೆ ವ್ಯವಸ್ಥೆ, ಮೊದಲ ಫ್ಲೋರ್‌ನಲ್ಲಿ ಕಮರ್ಶಿಯಲ್‌ ಕಾಂಪ್ಲೆಕ್ಸ್‌ಗಳು ಇರಲಿದೆ. ಒಮ್ಮೆಗೆ 10 ಬಸ್‌ಗಳು ನಿಲ್ಲುವ ಸೌಕರ್ಯ ಇರಲಿದೆ.

ಶಿಕ್ಷಣ ಇಲಾಖೆಯ ಸುಪರ್ದಿಯಲ್ಲಿದ್ದ ಜಾಗವನ್ನು ಕೆಎಸ್‌ಆರ್‌ಟಿಸಿಗೆ ವರ್ಗಾಯಿಸಿದ್ದೇನೆ. 4 ಕೋ. ರೂ. ವೆಚ್ಚದಲ್ಲಿ ನಗರೋತ್ಥಾನ ನಿಧಿಯಿಂದ ಬಸ್‌ ನಿಲ್ದಾಣಕ್ಕೆ ಹಣ ಮಂಜೂರಾಗಿದ್ದು, 41 ಸೆಂಟ್ಸ್‌  ಜಾಗದಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ. ಈ ಮೂಲಕ ಜನರ ಬಹುಕಾಲದ ಬೇಡಿಕೆ ಈಡೇರುತ್ತಿದೆ. ಮುಂದಿನ ಒಂದು ವರ್ಷದೊಳಗೆ ಈ ನಿಲ್ದಾಣ ಪೂರ್ಣಗೊಳ್ಳಲಿದೆ. ನರ್ಮ್ ಬಸ್‌ಗಳ ಪರವಾನಿಗೆ ವಿಚಾರ ನ್ಯಾಯಾಲುಯದಲ್ಲಿದ್ದು, ಅದು ಇತ್ಯರ್ಥಗೊಂಡ ಬಳಿಕ ಉಡುಪಿಗೆ ಮತ್ತಷ್ಟು ಸರಕಾರಿ ಬಸ್‌ಗಳಿಗಾಗಿ ಬೇಡಿಕೆ ಸಲ್ಲಿಸಲಾಗುವುದು.                – ಪ್ರಮೋದ್‌ ಮಧ್ವರಾಜ್‌, ಸಚಿವ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.