ಫೋನ್‌-ಇನ್‌ನಲ್ಲಿ ಎಸ್‌ಪಿ ಜತೆ ಮಾತನಾಡಿ


Team Udayavani, Sep 9, 2017, 6:05 AM IST

Phone-in-program.jpg

ಉಡುಪಿ: ಜಿಲ್ಲಾ ಎಸ್‌ಪಿ ಡಾ| ಸಂಜೀವ ಪಾಟೀಲ್‌ ಅವರ 4ನೇ ಫೋನ್‌-ಇನ್‌ ಕಾರ್ಯಕ್ರಮವು ಶನಿವಾರ ನಡೆಯಲಿದ್ದು, ಸಾರ್ವಜನಿಕರು ಮೌನಿಯಾಗಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಇರುವ ಪೊಲೀಸ್‌ ಇಲಾಖೆ ಮತ್ತು ಸಾರ್ವಜನಿಕರಿಗೆ ಸಂಬಂಧಪಟ್ಟ ಸಮಸ್ಯೆಗಳು ಮತ್ತು ಮಾಹಿತಿಗಳ ಕುರಿತು ಎಸ್‌ಪಿಯವರಿಗೆ ಕರೆ ಮಾಡಿ ತಿಳಿಸಿದರೆ ಉತ್ತಮ.

ಗ್ರಾಮಗಳಿಂದ ಹಿಡಿದು ನಗರಗಳಲ್ಲಿನ ಕೆಲವೊಂದು ಸಮಸ್ಯೆಗಳು ಎಸ್‌ಪಿಯವರ ಗಮನಕ್ಕೆ ಬಾರದೆ ಇದ್ದು, ಸಮಸ್ಯೆ ಹಾಗೆಯೇ ಉಳಿದು ಬಿಡುತ್ತದೆ. ಇನ್ನು ಕೆಲವು ಸಮಸ್ಯೆಗಳು ಬೆಳೆಯುತ್ತಾ ಹೋಗುತ್ತದೆ. ಕೆಲವೊಂದು ವಾಹನಗಳ ಸವಾರರು ರಾತ್ರಿ ವೇಳೆಯಲ್ಲಿ ಕಣ್ಣಿಗೆ ಹೊಡೆಯುವಂತಹ ದೀಪಗಳನ್ನು ಹಾಕುತ್ತಾರೆ, ಜೀಬ್ರಾ ಕ್ರಾಸಿಂಗ್‌ನಲ್ಲಿ ಜನರು ಕ್ರಾಸಿಂಗ್‌ ಮಾಡುವಾಗ ವಾಹನದವರು ನಿಧಾನಿಸುವುದಿಲ್ಲ. ಅನಗತ್ಯ ರಸ್ತೆ ತಡೆಗಳು, ರಸ್ತೆ ತಿರುವುಗಳು, ಸೂಚನಾ ಫ‌ಲಕಗಳು ಮೊದಲಾದ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಮಾಹಿತಿ ನೀಡಬಹುದಾಗಿದೆ.

ಹಿಂದೆ ಗಾಂಜಾ ಮಾರಾಟ ಮಾಡುವವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿತ್ತು. ಈಗ ಗಾಂಜಾ ಸೇವಿಸಿರುವವರ ಮೇಲೂ ಪ್ರಕರಣ ದಾಖಲಿಸಿಕೊಳ್ಳಲು ಎಸ್‌ಪಿಯವರು ಸೂಚಿಸಿದ್ದಾರೆ. ಅದರಂತೆ ಪ್ರಕರಣವೂ ದಾಖಲಾಗುತ್ತಿದೆ. ಗಾಂಜಾ ಸೇವಿಸುವವರ ಮಾಹಿತಿಯು ಕೆಲ ಸಾರ್ವಜನಿಕರಿಗೆ ಇರುತ್ತದೆ. ಈ ಬಗ್ಗೆ ಎಸ್‌ಪಿಯವರ ಗಮನಕ್ಕೆ ತರಬಹುದು. ಈಗಾಗಲೇ ಮಟ್ಕಾ ದಂಧೆಯ ಕುರಿತು ಎಲ್ಲ ಕಡೆಯಿಂದಲೂ ಮಾಹಿತಿ ಬರುತ್ತಲಿದೆ. ಇದೇ ರೀತಿ ಇನ್ನೂ ಹಲವು ಅಕ್ರಮ ದಂಧೆಗಳು ಕಾರ್ಯಾಚರಿಸುತ್ತಿರಬಹುದು. ಇದು ಸ್ಥಳೀಯ ಮಟ್ಟದ ಅಧಿಕಾರಿಗಳ ಸುಪರ್ದಿಯಲ್ಲಿಯೇ ನಡೆಯುತ್ತಿದ್ದಿರಲೂಬಹುದು. ಮೇಲಧಿಕಾರಿಗಳ ಗಮನಕ್ಕೆ ಇದು ಬಾರದಿರಬಹುದು. ಇದನ್ನೂ ಸಹ ಎಸ್‌ಪಿಯವರ ಗಮನಕ್ಕೆ ತಂದರೆ ಅವುಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.

ಹೆಸರು ಗೌಪ್ಯತೆಗೆ 
ಕೊಡುತ್ತಾರೆ ಒತ್ತು

ಎಸ್‌ಪಿಯವರ ಫೋನ್‌-ಇನ್‌ನಲ್ಲಿ  ಎಲ್ಲ ದೂರು/ವಿಚಾರ/ಮಾಹಿತಿ ಗಳನ್ನು ಮುಕ್ತವಾಗಿ ಅವ ರೊಂದಿಗೆ ಹಂಚಿಕೊಳ್ಳಬಹುದು. ಇಲ್ಲಿ ಗೌಪ್ಯತೆ ಕಾಪಾಡಲಾಗುವುದು. ಮಾಹಿತಿ ತಿಳಿಸುವವರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಲಾಗುವುದಿಲ್ಲ.  ಫೋನ್‌-ಇನ್‌ನಲ್ಲಿ ಪತ್ರಕರ್ತರು ಭಾಗಿಯಾಗುತ್ತಾರಾದರೂ, ಅವರಿಗೆ ಸಹ ಕರೆ ಮಾಡಿದವರ ಹೆಸರು, ವಿಳಾಸದ ವಿವರವನ್ನು ಎಸ್‌ಪಿಯವರು ನೀಡದೆ ಗೌಪ್ಯವಾಗಿಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರಿಗೆ ಗೌಪ್ಯತೆಯ ಬಗ್ಗೆ ಯಾವುದೇ ಸಂದೇಹ ಬೇಡ. ಉತ್ತಮ ಸಮಾಜಕ್ಕಾಗಿ ಫೋನ್‌-ಇನ್‌ಗೆ ಕರೆ ಮಾಡಿ ಮಾಹಿತಿ ಕೊಡಿ. ಈ ಶನಿವಾರ ಕರೆ ಬ್ಯುಸಿ ಬಂದರೆ, ಕನೆಕ್ಟ್ ಆಗದಿದ್ದರೆ, ತಾಳ್ಮೆಯಿಂದಿರಿ. ಮತ್ತೂಂದು ಶನಿವಾರ ಬೆಳಗ್ಗೆ 10ಕ್ಕೆ ಸಿದ್ಧರಾಗಿರಿ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.