ಜಿಎಸ್ಟಿಯಿಂದಾಗಿ ಕರ್ನಾಟಕದಲ್ಲಿ ಅವ್ಯವಸ್ಥೆ
Team Udayavani, Sep 9, 2017, 11:15 AM IST
ಹೊಸದಿಲ್ಲಿ: ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿ ಮಾಡಿದ್ದರಿಂದ ರಾಜ್ಯಗಳಲ್ಲಿ ಭಾರೀ ಅವ್ಯವಸ್ಥೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ದಿಲ್ಲಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯದ ಕೃಷಿ ಸಚಿವ ಕೃಷ್ಣ ಬೈರೇಗೌಡ, ಪಂಜಾಬ್ನ ವಿತ್ತ ಸಚಿವ ಮನ್ಪ್ರೀತ್ ಬಾದಲ್ ಹಾಗೂ ಕಾಂಗ್ರೆಸ್ ಮಾಧ್ಯಮ ವಿಭಾಗದ ಉಸ್ತುವಾರಿ ರಣ್ದೀಪ್ ಸುರ್ಜೆವಾಲ ಅವರು, ಶನಿವಾರದ ಜಿಎಸ್ಟಿ ಮಂಡಳಿಯ ಸಭೆ ಬಗ್ಗೆ ಮಾತನಾಡಿದ್ದಾರೆ. ಸಿದ್ಧತೆಯಿಲ್ಲದೇ ಅವಸರದಲ್ಲಿ ಜಿಎಸ್ಟಿ ಜಾರಿ ಮಾಡಿದ ಪರಿಣಾಮ ರಾಜ್ಯಗಳು ಸಂಕಷ್ಟ ಅನುಭವಿಸುವಂತಾಗಿದೆ. ಜುಲೈ ತಿಂಗಳಿನಲ್ಲಿ ಕರ್ನಾಟಕದ ಆದಾಯ 600 ಕೋಟಿ ರೂ. ಇಳಿಕೆಯಾಗಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ನಲ್ಲಿ 800 ಕೋಟಿ ಆದಾಯ ಖೋತಾ ಆಗಿದೆ ಎಂದ ಅಲ್ಲಿನ ವಿತ್ತ ಸಚಿವ ಮನ್ಪ್ರೀತ್ ಬಾದಲ್ ಅವರು ಆರೋಪಿಸಿದ್ದಾರೆ. ಜುಲೈನಲ್ಲಿ 1,650 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿತ್ತು. ಆದರೆ ಕೇವಲ 840 ಕೋ. ರೂ. ಆದಾಯ ಮಾತ್ರ ಬಂದಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಗುಜರಾತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಕಾಏಕಿ ಜಿಎಸ್ಟಿ ಜಾರಿ ಮಾಡಿದೆ. ಅಲ್ಲದೆ ಜಿಎಸ್ಟಿಯಿಂದ ಕೇಂದ್ರ ಸರಕಾರಕ್ಕೆ ಭಾರೀ ಆದಾಯ ಬಂದಿದ್ದು, ಅದನ್ನು ಹಾಗೆಯೇ ಇರಿಸಿಕೊಂಡು ಕುಳಿತಿದೆ. ಆದರೆ ರಾಜ್ಯಗಳು ಪಡಬಾರದ ಕಷ್ಟ ಅನುಭವಿಸುತ್ತಿವೆ ಎಂದು ಬಾದಲ್ ಆರೋಪಿಸಿದ್ದಾರೆ. ಹೀಗಾಗಿ ಶನಿವಾರ ನಡೆಯಲಿರುವ ಜಿಎಸ್ಟಿ ಮಂಡಳಿಯಲ್ಲಿ ಈ ಬಗ್ಗೆ ಪ್ರಸ್ತಾವಿಸಲಿದ್ದೇವೆ ಎಂದು ಈ ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ