ತಪ್ಪೊಪ್ಪಿಕೊಂಡ ಬಸ್ ನಿರ್ವಾಹಕ
Team Udayavani, Sep 10, 2017, 8:05 AM IST
ಗುರುಗ್ರಾಮ: ಇಲ್ಲಿನ ರ್ಯಾನ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಶುಕ್ರವಾರ ನಡೆದ 2ನೇ ತರಗತಿ ವಿದ್ಯಾರ್ಥಿ ಪ್ರಧುಮನ್ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಾಲಕನನ್ನು ಕೊಂದಿದ್ದು ತಾನೇ ಎಂದು ಶಾಲಾ ಬಸ್ ಕಂಡಕ್ಟರ್ ತಪ್ಪೊಪ್ಪಿಕೊಂಡಿದ್ದು, 2 ದಿನಗಳ ಕಾಲ ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಲೈಂಗಿಕ ದೌರ್ಜನ್ಯ ನಡೆಸಲು ಹೋಗಿ ಮಗುವನ್ನು ಕೊಂದಿದ್ದಾಗಿ ಬಸ್ ನಿರ್ವಾಹಕ ಅಶೋಕ್ ಕುಮಾರ್ ಹೇಳಿದ್ದಾನೆ. ಆದರೆ, ಇದರಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. 7 ದಿನಗಳೊಳಗೆ ಪ್ರಕರಣ ಸಂಬಂಧ ಆರೋಪಪಟ್ಟಿ ಸಲ್ಲಿಸುತ್ತೇವೆ ಎಂದು ಶನಿವಾರ ಗುರುಗ್ರಾಮ ಪೊಲೀಸ್ ಆಯುಕ್ತ ಸಂದೀಪ್ ಖೀರ್ವಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಶಾಲೆಯು ಭದ್ರತಾ ನಿಯಮಗಳನ್ನು ಪಾಲಿಸಿತ್ತೋ, ಇಲ್ಲವೋ ಎಂಬುದರ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿ ನೇಮಕ ಮಾಡಲಾಗಿದ್ದು, ಸೋಮವಾರ ವರದಿ ಕೈಗೆ ಸಿಗಲಿದೆ ಎಂದಿದ್ದಾರೆ.
ಇದೇ ವೇಳೆ, ರ್ಯಾನ್ ಶಾಲೆಯ ಪ್ರಾಂಶುಪಾಲೆ ನೀರಜಾ ಭಾತ್ರಾರನ್ನು ಅಮಾನತು ಮಾಡಲಾಗಿದ್ದು, ಎಲ್ಲ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 8.30ರ ವೇಳೆಗೆ ಬಾಲಕ ಪ್ರಧುಮನ್ನ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಟಾಯ್ಲೆಟ್ನಲ್ಲಿ ಪತ್ತೆಯಾಗಿತ್ತು.
ಸಿಬಿಐ ತನಿಖೆಗೆ ಒತ್ತಾಯ: ಶನಿವಾರವೂ ಶಾಲೆಯ ಮುಂದೆ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿಗಳ ಹೆತ್ತವರು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ಇನ್ನೊಂದೆಡೆ, ಸಿಬಿಎಸ್ಇ ಕೂಡ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ. ಪ್ರಕರಣ ಕುರಿತು 2 ದಿನಗಳೊಳಗೆ ವರದಿ ನೀಡುವಂತೆ ಸಮಿತಿಯು ಶಾಲಾ ಆಡಳಿತ ಮಂಡಳಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ