ತಗ್ಗದ ಮಳೆ ಆರ್ಭಟಕ್ಕೆ ತಬ್ಬಿಬ್ಟಾದ ನಗರ


Team Udayavani, Sep 11, 2017, 11:53 AM IST

taggadamale.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ತಗ್ಗಿಲ್ಲ. ಶನಿವಾರ ಇಡೀ ರಾತ್ರಿ ಭಾರಿ ಪ್ರಮಾಣದ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಹಲವು ಕೆರೆಗಳು ತುಂಬಿ ಕೋಡಿ ಬಿದ್ದವೆ. ಕೆಲವೆಡೆ ಹತ್ತಾರು ವಾಹನಗಳು ಮುಳುಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ. 

ನಗರದ ಹಲವು ರಸ್ತೆಗಳು ಕೆರೆಗಳಂತಾಗಿದ್ದವು. ಇನ್ನು ಶನಿವಾರ ಒಂದೇದಿನ 40ಕ್ಕೂ ಹೆಚ್ಚು ಮರಗಳು ಧರೆಗುರುಳಿದವು. ಬಿದ್ದ ಮರಗಳನ್ನು ತೆರವುಗೊಳಿಸುವುದು ವಿಳಂಬವಾದ್ದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಕೆರೆಗಳು ಹಾಗೂ ಕಾಲುವೆಗಳು ತುಂಬಿ ಹರಿದು ಮಳೆ ನೀರು ರಸ್ತೆಯಲ್ಲೇ ಹರಿಯಿತು.

ವೃಷಭಾವತಿ, ಕೋರಮಂಗಲ ರಾಜಕಾಲುವೆಗಳು ತುಂಬಿ ಹರಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳು ಸಮಸ್ಯೆಗೆ ಒಳಗಾವು. ಕೆಂಗೇರಿಯ ಸಮೀಪದ ದುಬಾಸಿಪಾಳ್ಯ ಹಾಗೂ ಕೊಮ್ಮಘಟ್ಟ ಕೆರೆಗಳ ಕೋಡಿ ಒಡೆದ ಹಿನ್ನೆಲೆಯಲ್ಲಿ ಆ ಭಾಗದ ರಸ್ತೆಗಳೆಲ್ಲ ಕೆರೆಗಳಂತಾಗಿದ್ದವು.

ಮೈಸೂರು ಕಡೆಯಿಂದ ನಗರಕ್ಕೆ ಬರುತ್ತಿದ್ದ ಬಸ್‌ ಅರ್ಧ ಮುಳುಗಿದ್ದರಿಂದ 36ಕ್ಕೂ ಹೆಚ್ಚು ಪ್ರಯಾಣಿಕರು ಬಸ್‌ನಲ್ಲಿ ಸಾವು-ಬದುಕಿನ ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುವ ಮೂಲಕ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ರಕ್ಷಿಸಿ, ಬೋಟ್‌ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. 

ಆರು ಅಡಿಯಷ್ಟು ನೀರು
ಇದರೊಂದಿಗೆ ಮೈಸೂರು ರಸ್ತೆಯ ಬಿಡಿಎ ಎನ್‌ಕ್ಲೇವ್‌ ಮುಂಭಾಗದ ರಾಜಕಾಲುವೆಗೆ  ಟಾಟಾ ಏಸ್‌ ವಾಹನವೊಂದು ಕೊಚ್ಚಿ ಹೋಗಿದೆ ಎನ್ನಲಾಗಿದೆ. ಇಲ್ಲಿ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿರುವುದರಿಂದ ವೃಷಭಾವತಿ ಕಾಲುವೆಯಲ್ಲಿ ತಡೆ ಉಂಟಾಗಿದ್ದು, ರಸ್ತೆಯಲ್ಲಿ ಸುಮಾರು 6 ಅಡಿಯಷ್ಟು ನೀರು ನಿಂತಿತ್ತು.

ಗೋಡೆ ಹತ್ತಿದ ನಿವಾಸಿಗಳು
ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದರಿಂದಾಗಿ ನಿವಾಸಿಗಳು ತಮ್ಮದೇ ಮನೆಗಳಿಗೆ ಗೋಡೆ ಹಾಗೂ ಗೇಟುಗಳನ್ನು ಹಾರಬೇಕಾಯಿತು. ಇದರೊಂದಿಗೆ ಮನೆಯಲ್ಲಿ ಸೇರಿದ್ದ ಕೊಳಚೆ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದರು. 

ಮನೆ -ಗೋಡೆ ಕುಸಿತ
ನಗರದ ಎಂಟು ವಲಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಭಾಗಗಳಲ್ಲಿ ಮನೆ ಹಾಗೂ ಮನೆಯ ಗೋಡೆಗಳು ಮಳೆಗೆ ಕುಸಿದು ಬಿದ್ದಿವೆ. ಆದರೆ, ಅದೃಷ್ಟವಶಾತ್‌ ಎಲ್ಲಿಯೂ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.