ಕೃಷ್ಣಾಷ್ಟಮಿ: ಮಕ್ಕಳ ಚಿಕಿತ್ಸೆಗೆ ವೇಷ ಹಾಕಲಿರುವ ರವಿ ಕಟಪಾಡಿ


Team Udayavani, Sep 12, 2017, 7:00 AM IST

Ravi-Katapady,.jpg

ಉಡುಪಿ: ಕಳೆದ 3 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭ ವಿವಿಧ ವೇಷ ಧರಿಸಿ, ಬಡ ಮಕ್ಕಳಿಗೆ ನೆರವಾಗುತ್ತಿರುವ ರವಿ ಕಟಪಾಡಿ ಅವರು ಬಳಗದೊಂದಿಗೆ ಸೇರಿ ಈ ಬಾರಿಯೂ 4 ಮಕ್ಕಳ ಚಿಕಿತ್ಸೆಗೆ ನೆರವಾಗುವ ಮಹಾದಾಸೆ ಹೊಂದಿದ್ದಾರೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ ಕೆ. ಅವರು ರವಿ ಮತ್ತು ಫ್ರೆಂಡ್ಸ್‌ ಕಟಪಾಡಿ ಬಳಗವು ಅನಾರೋಗ್ಯದಿಂದ ಬಳಲುತ್ತಿರುವ 4 ಬಡ ಮಕ್ಕಳ ಕುಟುಂಬಕ್ಕೆ ಆರ್ಥಿಕ ಸಹಾಯ ಹಸ್ತ ನೀಡುವ ಉದ್ದೇಶದಿಂದ ಸೆ. 13, 14ರಂದು ಕ್ರಾಂಪಸ್‌ ವೇಷ ತೊಟ್ಟು ಹಣ ಸಂಗ್ರಹಿಸಲು ಮುಂದಾಗಿದೆ. ಸೆ.13, ಬೆಳಗ್ಗೆ 7 ಗಂಟೆಗೆ ಗ್ರಾಂಪಸ್‌ ವೇಷದೊಂದಿಗೆ ಕಟಪಾಡಿಯಿಂದ ಹೊರಡಲಿದ್ದೇವೆ. 

ಕಟಪಾಡಿ, ಮಲ್ಪೆ, ಪಡುಕೆರೆ, ಉದ್ಯಾವರ, ಉಡುಪಿ, ನಿಟ್ಟೂರು, ರಾಜಾಂಗಣದಲ್ಲಿ ಪ್ರದರ್ಶನ ನೀಡಿ, ಸಂಗ್ರಹವಾಗುವ ಹಣವನ್ನು ಮಕ್ಕಳಿಗೆ ನೀಡಲಿದ್ದೇವೆ ಎಂದರು.

ಮೂಡುಬಿದಿರೆಯ ದರೆಗುಡ್ಡೆ – ಪಣಪಿಲ ಪುನಿಕೆಬೆಟ್ಟುವಿನ ಒಂದೂವರೆ ವರ್ಷದ ಲಾವಣ್ಯ, ಶಿವಮೊಗ್ಗದ ಶಾಹೀನಾ ಅವರ ಪುತ್ರಿ ಮೆಹಕ್‌ ಜಿ, ಉಡುಪಿ ದೆಂದೂರುಕಟ್ಟೆಯ ಸುನೀತಾ ಪ್ರಕಾಶ್‌ ಅವರ ಒಂದುವರೆ ತಿಂಗಳಿನ ಮಗು ಹಾಗೂ ಬನ್ನಂಜೆಯ ಎಳೆಯ ಮಗುವಿಗೆ ಆರ್ಥಿಕ ಸಹಾಯ ಹಸ್ತ ನೀಡಲಿದ್ದಾರೆ.

ಈ ವೇಷಕ್ಕಾಗಿ ನನ್ನ 75ಕ್ಕೂ ಅಧಿಕ ಸ್ನೇಹಿತರು ದುಡಿಯುತ್ತಿದ್ದು, ಸಂಗ್ರಹವಾದ ಹಣವನ್ನು ಸಮನಾಗಿ ಹಂಚಿ ನಾಲ್ವರು ಮಕ್ಕಳ ಚಿಕಿತ್ಸೆಗೆ ನೀಡಲಿದ್ದೇವೆ. ಸೆ. 19ರ ಸಂಜೆ 4 ಗಂಟೆಗೆ ಕಟಪಾಡಿ ವಿಜಯ ಬ್ಯಾಂಕಿನ ಬಳಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಕೇಮಾರು ಮಠದ ಶ್ರೀ ಈಶ ವಿಠಲದಾಸ ಶ್ರೀಪಾದರು, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹಾಗೂ ಎಸ್ಪಿ ಡಾ| ಸಂಜೀವ್‌ ಎಂ. ಪಾಟೀಲ್‌ ಭಾಗವಹಿಸಲಿದ್ದಾರೆ ಎಂದರು.

ನೀವು ನೆರವು ನೀಡಬಹುದು ಆರೋಗ್ಯ ಸಮಸ್ಯೆಯಿಂದ ಬಳಲು ತ್ತಿರುವ ಮಕ್ಕಳ ಚಿಕಿತ್ಸೆ ವೆಚ್ಚಕ್ಕಾಗಿ ವೇಷ ಹಾಕುವ ರವಿ ಕೆ. ಅವರ ಸಾಮಾಜಿಕ ಕಾರ್ಯಕ್ಕೆ ಕೈ ಜೋಡಿಸುವ ದಾನಿಗಳು ಪಾಂಗಾಳ ವಿಜಯ ಬ್ಯಾಂಕಿನ ಎಸ್‌ಬಿ ಖಾತೆ: 117206331000013 (ಐಎಫ್‌ಎಸ್‌ಸಿ ಕೋಡ್‌: VIGB 0001172) ಗೆ ಜಮಾ ಮಾಡಬಹುದು. 
ಸುದ್ದಿಗೋಷ್ಠಿಯಲ್ಲಿ ಪ್ರಾಧ್ಯಾಪಕ ದಯಾನಂದ, ಸುಧೀಶ್‌, ಚರಣ್‌ರಾಜ್‌, ಅರುಣ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.