ಲಿಂಗಾಯತ, ವೀರಶೈವ ಎರಡೂ ಒಂದೇ: ಸಿದ್ದಗಂಗಾಶ್ರೀ ಸ್ಪಷ್ಟನೆ
Team Udayavani, Sep 12, 2017, 2:40 PM IST
ತುಮಕೂರು/ಬೆಂಗಳೂರು:ವೀರಶೈವ-ಲಿಂಗಾಯತ ಎರಡೂ ಪದದ ಅರ್ಥ ಒಂದೇ. ಗ್ರಾಮೀಣ ಭಾಗಗಳಲ್ಲಿ ಲಿಂಗಾಯ ಪದ ಬಳಸುತ್ತಾರೆ, ನಗರ ಪ್ರದೇಶದ ವಿದ್ಯಾವಂತರು ವೀರಶೈವ ಪದ ಬಳಸುತ್ತಾರೆ ಎಂದು ಸಿದ್ದಗಂಗಾ ಮಠದ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.
ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತಂತೆ ತುಮಕೂರಿನ ಸಿದ್ದಗಂಗಾಶ್ರೀಗಳು ಸಹಮತ ಸೂಚಿಸಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಸಾಕಷ್ಟು ವಿವಾದಕ್ಕೆ ಗ್ರಾಸವಾದ ಹಿನ್ನೆಲೆಯಲ್ಲಿ ಸ್ವತಃ ಸಿದ್ದಗಂಗಾಶ್ರೀಗಳೇ ಮಾಧ್ಯಮ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಲಿಂಗಾಯತ, ವೀರಶೈವ ಎರಡೂ ಪದದ ಅರ್ಥ ಒಂದೇ. ಸ್ವತಂತ್ರ ಲಿಂಗಾಯತ ಧರ್ಮದ ಬಗ್ಗೆ ಸಚಿವ ಎಂಬಿ ಪಾಟೀಲ್ ಅವರು ಚರ್ಚಿಸಿದ್ದಾರೆ. ಆದರೆ ಒಂದು ಸಮಾಜವನ್ನು ಇಬ್ಬಾಗ ಮಾಡುವುದು ಒಳ್ಳೆಯದಲ್ಲ. ಈ ರೀತಿಯ ಪ್ರಯತ್ನ ಯಾರೇ ಮಾಡಿದರೂ ಅದು ಒಳ್ಳೆಯದಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನನ್ನ ಹೇಳಿಕೆಯನ್ನು ಎಂಬಿ ಪಾಟೀಲ್ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಲಿಂಗಾಯತ, ವೀರಶೈವ ಎರಡೂ ಒಂದೇ, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್