ಶಕಿಬ್ ನಿರ್ಧಾರಕ್ಕೆ ರಹೀಂ ಅಸಮಾಧಾನ
Team Udayavani, Sep 13, 2017, 6:10 AM IST
ಢಾಕಾ: ಟೆಸ್ಟ್ ಕ್ರಿಕೆಟ್ನಿಂದ ಸ್ವಲ್ಪ ಕಾಲ “ಬ್ರೇಕ್’ ತೆಗೆದುಕೊಂಡ ಶಕಿಬ್ ಅಲ್ ಹಸನ್ ಅವರ ನಿರ್ಧಾರಕ್ಕೆ ಬಾಂಗ್ಲಾದೇಶ ತಂಡದ ನಾಯಕ ಮುಶ್ಫಿಕರ್ ರಹೀಂ ಬೇಸರ ವ್ಯಕ್ತಪಡಿಸಿದ್ದಾರೆ.
“ತಂಡದ ನಾಯಕನಾಗಿ ಹೇಳಬೇಕಾದರೆ ಶಕಿಬ್ ಅವರ ಈ ನಿರ್ಧಾರವನ್ನು ನಾನು ಸಮರ್ಥಿಸುವುದಿಲ್ಲ. ಇದರಿಂದ ನನಗೆ ಸಂತಸವೇನೂ ಆಗಿಲ್ಲ. ಆದರೆ ಇದು ಅವರ ವೈಯಕ್ತಿಕ ನಿರ್ಧಾರ. ಇದನ್ನು ನಾನು ಗೌರವಿಸುತ್ತೇನೆ’ ಎಂದು ಎಹೀಂ ಹೇಳಿದ್ದಾರೆ.
ಬಾಂಗ್ಲಾದೇಶ ತಂಡ ಅತ್ಯಂತ ಸವಾಲಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ವೇಳೆ ಶಕಿಬ್ ಸೇವೆ ತಂಡಕ್ಕೆ ಅಗತ್ಯವಿತ್ತು ಎಂಬುದು ಬಾಂಗ್ಲಾ ಕ್ರಿಕೆಟಿಗರ ಹಾಗೂ ಅಭಿಮಾನಿಗಳ ಅಭಿಪ್ರಾಯ. ಬಿಡುವಿಲ್ಲದ ಕ್ರಿಕೆಟ್ನಿಂದ ತನಗೆ ಒಂದಿಷ್ಟು ವಿಶ್ರಾಂತಿಯ ಅಗತ್ಯವಿದೆ, ಹೀಗಾಗಿ ಟೆಸ್ಟ್ ಕ್ರಿಕೆಟ್ನಿಂದ ಸ್ವಲ್ಪ ಸಮಯ ಹೊರಗುಳಿಯುವುದಾಗಿ ಶಕಿಬ್ ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ವಿನಂತಿ ಮಾಡಿದ್ದರು. ಇದನ್ನು ಮಂಡಳಿ ಪುರಸ್ಕರಿಸಿದೆ. ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆಂದು ಸೋಮವಾರ ಬಾಂಗ್ಲಾ ತಂಡವನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಶಕಿಬ್ ಹೆಸರು ಕಂಡುಬಂದಿಲ್ಲ. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶಕಿಬ್ ಆಡುವುದಾದರೆ ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಬಿಸಿಬಿ ತಿಳಿಸಿದೆ.
ಇತ್ತೀಚೆಗಷ್ಟೇ ತಮ್ಮ 50ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯಗೊಳಿಸಿದ ಶಕಿಬ್, ಆಸ್ಟ್ರೇಲಿಯ ವಿರುದ್ಧದ ಈ ಪಂದ್ಯದಲ್ಲಿ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ