ಗಾಂಧಿ ನಾಡಲ್ಲಿ ಭಾರತ- ಜಪಾನ್‌ ರೋಡ್‌ಶೋ


Team Udayavani, Sep 14, 2017, 8:35 AM IST

modi.jpg

ಅಹಮದಾಬಾದ್‌: ಭಾರತದ ಬುಲೆಟ್‌ ಟ್ರೇನ್‌ ಕನಸಿಗೆ ನೀರೆರೆದಿರುವ ಜಪಾನ್‌ ಪ್ರಧಾನಿ ಶಿಂಜೋ ಅಬೆ, ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ನ ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. 

ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಅಬೆ ಅವರು, ಗುರುವಾರ ಅಹಮಬಾದ್‌-ಮುಂಬೈ ಬುಲೆಟ್‌ ಟ್ರೇನ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮಧ್ಯೆಯೇ, ಬುಧವಾರ ಮಧ್ಯಾಹ್ನ ಬಂದ ಶಿನೋ ಅಬೆ ಅವರಿಗೆ ವಿಮಾನ ನಿಲ್ದಾಣದಲ್ಲೇ ಆಲಿಂಗನದ ಸ್ವಾಗತ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹತ್ಮಾ ಗಾಂಧೀಜಿ ಅವರ ಸಾಬರ್ಮತಿ ಆಶ್ರಮದ ವರೆಗೆ ತೆರೆದ ಜೀಪಿನಲ್ಲಿ ಅಬೆ ದಂಪತಿಯನ್ನು ಮೆರವಣಿಗೆಯಲ್ಲಿ ಕರೆತಂದಿದ್ದಾರೆ. ಸುಮಾರು 8 ಕಿ.ಮೀ. ಇದ್ದ ಈ ಮಾರ್ಗದಲ್ಲಿ ನಿಂತಿದ್ದ ಅಹಮದಾಬಾದ್‌ನ ಜನತೆ, ಜಪಾನ್‌ ಪ್ರಧಾನಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಅಲ್ಲದೆ ಹಲವಾರು ರಾಜ್ಯಗಳಿಂದ ಬಂದಿದ್ದ ಕಲಾವಿದರು, ರಸ್ತೆ ಬದಿಯಲ್ಲೇ 28ಕ್ಕೂ ಅಧಿಕ ಪ್ರದರ್ಶನ ನೀಡಿ ಭಾರತದ ಸಂಸ್ಕೃತಿ ಪರಿಚಯ ಮಾಡಿಕೊಟ್ಟಿದ್ದಾರೆ. 

ಸೀದಾ ಸಾಬರ್ಮತಿ ಆಶ್ರಮಕ್ಕೆ ಬಂದ ಅಬೆ ಅವರು, ಗಾಂಧೀಜಿ ಹೆಜ್ಜೆ ಗುರುತುಗಳ ಪರಿಚಯ ಮಾಡಿಕೊಂಡಿದ್ದಾರೆ. ಸ್ವತಃ ಪ್ರಧಾನಿ ಮೋದಿ ಅವರೇ, ಆಶ್ರಮದ ಸಂಪೂರ್ಣ ಪರಿಚಯ ಮಾಡಿಕೊಟ್ಟಿದ್ದಾರೆ. ಬಳಿಕ 16ನೇ ಶತಮಾನದ “ಸಿದಿ ಸೈಯ್ಯದ್‌ ನಿ ಜಾಲಿ’ ಮಸೀದಿಗೆ ಕರೆದೊಯ್ದ ಮೋದಿ ಅವರು, ಅದರ ಪರಿಚಯವನ್ನೂ ಮಾಡಿ ಕೊಟ್ಟಿದ್ದಾರೆ. ವಿಶೇಷವೆಂದರೆ, ಪ್ರಧಾನಿ ಯಾದ ಮೇಲೆ ಇದೇ ಮೊದಲ ಬಾರಿಗೆ ಮೋದಿ ಅವರು, ಮಸೀದಿಯೊಂದಕ್ಕೆ ಭೇಟಿ ನೀಡುತ್ತಿರುವುದು. 

ಬುಧವಾರ ರಾತ್ರಿ ಅಬೆ ದಂಪತಿಗೆ ಮೋದಿ ಅವರು ಔತಣ ಕೂಟ ಆಯೋಜಿಸಿದ್ದರು. ಅಗಾಶಿಯೇ ಟೆರೆಸ್‌ ರೆಸ್ಟೋರೆಂಟ್‌ನಲ್ಲಿ ನಡೆದ ಈ ಔತಣಕೂಟದಲ್ಲಿ ಮೋದಿ ಅವರ ನೆಚ್ಚಿನ “ಹಂದೊÌà’ ಹಾಗೂ ಸಂಪೂರ್ಣವಾಗಿ ಸಸ್ಯಹಾರಿ ಊಟದ ವ್ಯವಸ್ಥೆ ಮಾಡಲಾಗಿತ್ತು. 

ವಿಶೇಷವೆಂದರೆ ಮೋದಿ ಅವರು ಪ್ರಧಾನಿಯಾದ ಮೇಲೆ ಅಬೆ ಅವರನ್ನು ನಾಲ್ಕನೇ ಬಾರಿಗೆ ಭೇಟಿ ಮಾಡುತ್ತಿದ್ದಾರೆ. ಭಾರತ ಮತ್ತು ಜಪಾನ್‌ ನಡುವೆ ವರ್ಷಕ್ಕೊಮ್ಮೆ ಪರಿಶೀಲನಾ ಮಾದರಿಯ ಸಭೆ ನಡೆಯುತ್ತಿವೆ. ಜಪಾನ್‌ ಬಿಟ್ಟರೆ ಭಾರತ, ರಷ್ಯಾ ಜತೆ ಮಾತ್ರ ಹೀಗೆ ವಾರ್ಷಿಕವಾಗಿ ಪರಿಶೀಲನಾ ಮಾದರಿ ಸಭೆ ನಡೆಸುತ್ತಿದೆ. 

ಇಂದು ಬುಲೆಟ್‌ ಟ್ರೇನ್‌ಗೆ ಚಾಲನೆ
ಗುರುವಾರ ಮೋದಿ ಮತ್ತು ಅಬೆ ಅವರು ಅಹಮದಾಬಾದ್‌-ಮುಂಬೈ ನಡುವಿನ 508 ಕಿ.ಮೀ. ಉದ್ದದ ಬುಲೆಟ್‌ ಟ್ರೇನ್‌ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈಗ ಆರಂಭವಾಗಲಿರುವ ಈ ಕಾಮಗಾರಿ 2022ಕ್ಕೆ ಅಂತ್ಯವಾಗಲಿದೆ. ಇದನ್ನು 1,10,000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಪಾನ್‌ ಶೇ.90 ರಷ್ಟು ಹಣವನ್ನು ಸಾಲದ ರೂಪದಲ್ಲಿ ನೀಡಲಿದೆ. ಅಲ್ಲದೆ ಇದಕ್ಕೆ ಶೇ.0.01 ಬಡ್ಡಿ ವಿಧಿಸಲಾಗುತ್ತದೆ.  ಈ ಮಾರ್ಗ ಪೂರ್ಣವಾದ ಮೇಲೆ ಅಹ್ಮದಾಬಾದ್‌-ಮುಂಬೈ ನಡುವಿನ ಸಂಚಾರದ ಅವಧಿ ಕೇವಲ 3 ಗಂಟೆಗೆ ಇಳಿಯಲಿದೆ. 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.