ಹಣ ಗಳಿಸದಿದ್ದರೂ ಗುಣ ಗಳಿಸಿ: ರಂಭಾಪುರಿ ಶ್ರೀ
Team Udayavani, Sep 14, 2017, 12:00 PM IST
ಶಿವಮೊಗ್ಗ: ಹಲವು ಜನ್ಮದ ಪುಣ್ಯದ ಫಲ ಮಾನವ ಜೀವನ. ಮನುಷ್ಯ ಜೀವನದಲ್ಲಿ ಹಣ ಗಳಿಸದಿದ್ದರೂ ಗುಣ ಸಂಪಾದಿಸಿಕೊಂಡು ಬಾಳಬೇಕು. ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲವೆಂದು ಎಂದು ಬಾಳೆಹೊನ್ನೂರು ರಂಭಾಪುರಿ ಶ್ರೀಗಳು ಅಭಿಪ್ರಾಯಪಟ್ಟರು.
ನಗರದ ಶ್ರೀ ಬಸವೇಶ್ವರ ದೇವಸ್ಥಾನದ ಅವರಣದಲ್ಲಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಧರ್ಮಾಚರಣೆಯಿಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ, ನೆಲೆ ಸಿಗುವುದಿಲ್ಲ. ಅನ್ನ,ನೀರು, ಗಾಳಿ ಮನುಷ್ಯ ಬದುಕಿಗೆ ಅಗತ್ಯವಾಗಿರುವಂತೆ, ನೆಮ್ಮದಿಯ ಬದುಕಿಗೆ ಧರ್ಮ, ಪ್ರಜ್ಞೆ ಅವಶ್ಯಕ. ಪ್ರಕೃತಿ ಮಾನವನನ್ನು ಸೃಷ್ಟಿಸಿದರೆ, ಸಂಸ್ಕಾರ
ದೇವ ಮಾನವರನ್ನು ಸೃಷ್ಟಿಸುತ್ತದೆ. ಅತಿ ಶತ್ರುಗಳನ್ನು ನಿಯಂತ್ರಿಸಬಹುದು. ಆದರೆ ಮತಿ ಶತ್ರುಗಳನ್ನು ನಿಯಂತ್ರಿಸುವುದು ಕಷ್ಟ ಎಂದರು.
ಸಂಪತ್ತು ಹೆಚ್ಚಿದಂತೆಲ್ಲ ಮಾನವೀಯ ಸಂಬಂಧಗಳು ನಾಶಗೊಳ್ಳಬಾರದು. ಸತ್ಯದ ತಳಹದಿಯ ಮೇಲೆ ಸೈದ್ಧಾಂತಿಕ ನಿಲುವುಗಳು ಗಟ್ಟಿಗೊಳ್ಳುವ ಅವಶ್ಯಕತೆಯಿದೆ. ಭೌತಿಕ ಸಂಪತ್ತು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ ಎಂದು ಹೇಳಿದರು. ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮೋಹದ ದಾರಿ ತೊರೆದರೆ ಮೋಕ್ಷದ ಹಾದಿ ದೊರೆಯುತ್ತದೆ. ಉನ್ನತ ಗುರಿ ಮತ್ತು ಧ್ಯೇಯ
ವ್ಯಕ್ತಿತ್ವ ವಿಕಾಸಕ್ಕೆ ದಾರಿದೀಪ ಎಂದರು. ಮಳಲಿಯ ಶ್ರೀ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಚನ್ನಗಿರಿ ಶ್ರೀ ಶಿವಶಾಂತ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿ ನಮನ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಸೆ. 21ರಿಂದ 30ರ ವರೆಗೆ ಜರುಗುವ ಶ್ರೀ ರಂಭಾಪುರಿ ಜಗದ್ಗುರುಗಳ 26ನೇ ವರ್ಷದ
ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಕರೆಯೋಲೆಯನ್ನು ಅಧ್ಯಕ್ಷತೆ ವಹಿಸಿದ್ದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಜೆ. ರಾಜಶೇಖರ ಬಿಡುಗಡೆ ಮಾಡಿದರು. ಡಿ.ವಿ. ಮಲ್ಲಿಕಾರ್ಜುನ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕೆ.ಸಿ. ನಾಗಠಾಣ ಸ್ವಾಗತಿಸಿದರು. ಶಾಂತಾ ಆನಂದ ನಿರೂಪಿಸಿದರು. ಎಚ್.ಎಂ. ಶಿವಾನಂದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ