ಬೆಸ್ಕಾಂ ಜನಸ್ನೇಹಿಯಾಗಿಸಲು ಯತ್ನ


Team Udayavani, Sep 14, 2017, 12:21 PM IST

14-CHIT-1.jpg

ಚಿತ್ರದುರ್ಗ: ಬೆಸ್ಕಾಂ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಿ ಜನಸ್ನೇಹಿ ಕಂಪನಿ ಮಾಡುವುದಲ್ಲದೆ, ದಕ್ಷಿಣ ಏಷ್ಯಾದ ನಂಬರ್‌ 1 ಕಂಪನಿ ಮಾಡುವ ಗುರಿ ಹೊಂದಲಾಗಿದೆ ಎಂದು ಬೆಸ್ಕಾಂ ಜಾಗೃತ ದಳದ ಪೊಲೀಸ್‌ ಅಧೀಕ್ಷಕ ಎಂ. ನಾರಾಯಣ ತಿಳಿಸಿದರು.

ಇಲ್ಲಿನ ಬೆಸ್ಕಾಂ ಮುಖ್ಯ ಇಂಜಿನಿಯರ್‌ ಕಚೇರಿ ಸಭಾಂಗಣದಲ್ಲಿ ಬೆಸ್ಕಾಂ ಜಾಗೃತ ದಳದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬೆಸ್ಕಾಂ ವಿಭಾಗ ವ್ಯಾಪ್ತಿಯ ಗ್ರಾಹಕರ ಕುಂದುಕೊರತೆ ಸಭೆ ಹಾಗೂ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಕ್ಷಿಣ ಏಷ್ಯಾದಲ್ಲಿ ಬೆಸ್ಕಾಂಗೆ ಘನತೆ, ಗೌರವವಿದೆ. ಇದನ್ನು ಎಲ್ಲ ಅಧಿಕಾರಿ, ಸಿಬ್ಬಂದಿ ಎತ್ತಿ ಹಿಡಿಯಬೇಕು. ತಮ್ಮ 
ಕರ್ತವ್ಯಗಳನ್ನು ಸರಿಯಾಗಿ ಪಾಲಿಸಬೇಕು. ಕಂಪನಿಗೆ ಆಗುತ್ತಿರುವ ನಷ್ಟವನ್ನು ತಪ್ಪಿಸಬೇಕು. ಬೆಸ್ಕಾಂ ಗುತ್ತಿಗೆದಾರರು ತಮ್ಮ ವ್ಯಾಪ್ತಿ ಬಿಟ್ಟು ಕೆಲಸ ಮಾಡುವಂತಿಲ್ಲ. ಪರವಾನಗಿ ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು, ಗ್ರಾಹಕರು, ಗುತ್ತಿಗೆದಾರರನ್ನು ಹೆದರಿಸಿ ಬೆದರಿಸಿ ವಿದ್ಯುತ್‌ ಕಳವು ಮಾಡುವವರಿಗೆ ಹೆಚ್ಚಿನ ದಂಡ ವಿಧಿಸಿ ಬೆಸ್ಕಾಂಗೆ ದಂಡದ ರೂಪದಲ್ಲಿ ಸಂಪನ್ಮೂಲ ಕ್ರೋಢೀಕರಿಸುವ ಉದ್ದೇಶ ನಮ್ಮದಲ್ಲ. ಈಗಾಗಲೇ ಕಂಪನಿ 2 ಕೋಟಿಗೂ ಅಧಿಕ  ಸಂಖ್ಯೆಯ ಗ್ರಾಹಕರು ಹಾಗೂ 17,200 ಕೋಟಿ ರೂ.ಗಳ ಆಸ್ತಿ ಹೊಂದಿದೆ. ಇದೆಲ್ಲ ಗ್ರಾಹಕರಿಂದಲೇ ಸಾಧ್ಯವಾಗಿದೆ ಎನ್ನುವುದನ್ನು ಮರೆಯಬೇಡಿ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಬೆಂಗಳೂರಿನಲ್ಲಿ ನಾಲ್ಕು, ಚಿತ್ರದುರ್ಗದಲ್ಲಿ ಒಂದು ಸೇರಿದಂತೆ ರಾಜ್ಯದ ಇತರೆ ಕಡೆಗಳಲ್ಲಿ ಒಟ್ಟು 11 ಬೆಸ್ಕಾಂ
ಜಾಗೃತದಳದ ಪೊಲೀಸ್‌ ಠಾಣೆಗಳಿವೆ. ಈ ಠಾಣೆಗಳಿಗೂ ಗ್ರಾಹಕರು ಇ-ಮೇಲ್‌, ಎಸ್‌ಎಂಎಸ್‌, ಲಿಖೀತ, ದೂರವಾಣಿ ಕರೆ ಮಾಡಿ ಅಥವಾ ಇನ್ಯಾವುದೇ ರೂಪದಲ್ಲಿ ದೂರು ನೀಡಬಹುದಾಗಿದೆ. ವಿತರಣಾ ಪರಿವರ್ತಕಗಳ ಅಳವಡಿಕೆ, ಸಲಕರಣೆಗಳ ನಿರ್ವಹಣೆ, ವಿದ್ಯುತ್‌ ಸರಬರಾಜು ಗುಣಮಟ್ಟ, ಅಡಚಣೆ, ತಾಂತ್ರಿಕ ವಿಷಯಗಳು, ಬಿಲ್‌ ಸಂಬಂಧಿತ ಗ್ರಾಹಕ ದೂರುಗಳಿಗೆ ಸ್ಪಂದಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡಲಾಗುತ್ತದೆ. ಅಕ್ರಮ ವಿದ್ಯುತ್‌ ಬಳಸುತ್ತಿದ್ದರೆ ಸಾರ್ವಜನಿಕರು ಸೂಕ್ತ ಮಾಹಿತಿ ನೀಡಿದರೂ ಬಹುಮಾನ ನೀಡಲಾಗುತ್ತದೆ. ಅಕ್ರಮ ವಿದ್ಯುತ್‌ ಸಂಪರ್ಕ ಪಡೆದ ವ್ಯಕ್ತಿ ಅಥವಾ ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದರು. 

ವಿದ್ಯುತ್‌ ಅಪಘಾತಗಳನ್ನು ತಡೆಗಟ್ಟಬೇಕು. ಅಕ್ರಮ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಂಡು ಜೀವಹಾನಿ ಮಾಡುತ್ತಿದ್ದಲ್ಲಿ ಅದರಲ್ಲೂ ಮಾನವ, ಸಾಕುಪ್ರಾಣಿ, ಕಾಡು ಪ್ರಾಣಿ ಸಂಕುಲದ ಅಮೂಲ್ಯ ಜೀವಗಳ ರಕ್ಷಣೆಗಾಗಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಬಳಕೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಶಾಮೀಲಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಬೆಸ್ಕಾಂ ಜಾಗೃತ ದಳದ ಡಿವೈಎಸ್ಪಿ ಸುರೇಶ್‌, ವಿಜಯಭಾಸ್ಕರ್‌, ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌, ಮುಖ್ಯ ಇಂಜಿನಿಯರ್‌ ಡಿ. ಜಯಣ್ಣ, ಬೆಸ್ಕಾಂ ಅಧಿಕಾರಿಗಳಾದ ಸುಭಾಶ್ಚಂದ್ರ ಮತ್ತಿತರ ಅಧಿಕಾರಿಗಳು, ಗ್ರಾಹಕರು, ಗುತ್ತಿಗೆದಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ದೂರು ಕೊಡಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್‌ ಸರಬರಾಜು ಕಲ್ಪಿಸಿ ನಂಬಿಕೆ 
ಉಳಿಸಿಕೊಳ್ಳುವುದು ಮುಖ್ಯ. ಗ್ರಾಹಕರು ವಿದ್ಯುತ್‌ ಸಂಪರ್ಕ ಪಡೆಯುವ ಸಂದರ್ಭದಲ್ಲಿ ಬೆಸ್ಕಾಂ ಅಧಿಕಾರಿಗಳು ಅಸಭ್ಯವಾಗಿ ವರ್ತಿಸಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಗ್ರಾಹಕರು ನೇರವಾಗಿ ಬೆಸ್ಕಾಂ ಜಾಗೃತ ದಳಕ್ಕೆ ದೂರು ನೀಡಬಹುದು. ಗ್ರಾಹಕರ ಕುಂದುಕೊರತೆ, ಸಮಸ್ಯೆಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಪಂದಿಸಿ ಕೆಲಸ ಮಾಡದಿದ್ದರೆ ಸಹಾಯವಾಣಿ 1912 ಅಥವಾ 080-22381838, ಎಸ್ಪಿ ಕಚೇರಿ ಮೊಬೈಲ್‌: 94480 42375ಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಸ್ಕಾಂ ಜಾಗೃತದಳದ ಪೊಲೀಸ್‌ ಅಧೀಕ್ಷಕ ಎಂ. ನಾರಾಯಣ ತಿಳಿಸಿದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.