ರೇಪ್ ಆರೋಪಿಗೆ ಬೇಲ್; ಭವ್ಯ ಮೆರವಣಿಗೆಯಲ್ಲಿ ಸ್ವಾಗತ!!
Team Udayavani, Sep 15, 2017, 11:24 AM IST
ಧಾರವಾಡ : ರಾಜಕಾರಣಿಗಳು, ಸಿನಿಮಾ ನಟರ ರೋಡ್ ಶೋಗಳನ್ನು ನೋಡಿದ್ದೀರಿ. ಆದರೆ ಧಾರವಾಡದಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದ ಆರೋಪಿಯೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾದಾಗ ಭವ್ಯ ರೋಡ್ ಶೋ ಮಾಡಿ ಸ್ವಾಗತ ಮಾಡಿರುವ ನಾಚಿಕೆಗೇಡಿನ ಘಟನೆ ಗುರುವಾರ ನಡೆದಿದೆ.
2 ತಿಂಗಳ ಹಿಂದೆ ಹುಬ್ಬಳ್ಳಿಯ ಲಾಡ್ಜ್ ವೊಂದರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೈಲು ಪಾಲಾಗಿದ್ದ ಮುಕ್ತುಂ ಸೊಗಲದ ಎಂಬಾತನಿಗೆ ಧಾರವಾಡ ನ್ಯಾಯಾಲಯ ಜಾಮೀನು ನೀಡಿತ್ತು.
ಜಾಮೀನು ಸಿಕ್ಕ ಕೂಡಲೇ ಹಾರ, ತುರಾಯಿಗಳೊಂದಿಗೆ ನ್ಯಾಯಾಲಯದ ಬಳಿ ಜಮಾಯಿಸಿದ ನೂರಾರು ಬೆಂಬಲಿಗರು ಯುದ್ಧ ಗೆದ್ದ ಮಾದರಿಯಲ್ಲಿ ಕೇಕೆ ಹಾಕುತ್ತಾ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ಮತ್ತು ಕಾರುಗಳ ಮೆರವಣಿಗೆ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಸುಮಾರು 500 ಬೈಕ್ಗಳು ಮತ್ತು 20 ಕ್ಕೂ ಹೆಚ್ಚು ಕಾರುಗಳು, ಆಟೋಗಳಲ್ಲಿ ಬಂದ ಬೆಂಬಲಿಗರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಮೆರವಣಿಗೆ ವೇಳೆ ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗಿದ್ದು ಆರೋಪಿಯೊಬ್ಬನಿಗೆ ಈ ಪರಿಯ ಮೆರವಣಿಗೆ ಬೇಕಿತ್ತೆ ಎಂದು ಆಕ್ರೋಶ ಹೊರ ಹಾಕಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮುಕ್ತುಂ ಈ ಹಿಂದೆ ಜೆಡಿಎಸ್ ಮುಖಂಡನಾಗಿದ್ದು ಆರೋಪ ಬಂದ ತಕ್ಷಣ ಆತನನ್ನು ಉಚ್ಛಾಟನೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ