ಸಿಬ್ಬಂದಿಯಿಂದ ಸಭೆ ಬಹಿಷ್ಕರಿಸಿ ಧರಣಿ


Team Udayavani, Sep 16, 2017, 1:32 PM IST

vij-2.jpg

ವಿಜಯಪುರ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸಿಬ್ಬಂದಿಗೆ ಅಸಂಸದೀಯ ಪದ ಬಳಕೆ ಮಾಡಿದ ಕಾರಣಕ್ಕೆ ಪಾಲಿಕೆ ಸಿಬ್ಬಂದಿ ಸಭೆ ಬಹಿಷ್ಕರಿಸಿ ಪ್ರತಿಭಟಿಸಿದ ಘಟನೆ ನಡೆಯಿತು.

ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಮೇಯರ್‌ ಸಂಗೀತಾ ಪೋಳ ಅಧ್ಯಕ್ಷತೆಯಲ್ಲಿ ಸಾಮಾನ್ಯಸಭೆ ನಡೆಯಿತು. ಸಭೆ ಆರಂಭಗೊಳ್ಳುತ್ತಲೇ ಸದಸ್ಯರಾದ ಪರಶುರಾಮ ರಜಪೂತ, ಮೈನುದ್ದೀನ ಬೀಳಗಿ, ಅಬ್ದುಲ್‌ ರಜಾಕ್‌ ಹೋರ್ತಿ ಇತರರು ಮೇಯರ್‌
ಮತ್ತು ಉಪ ಮೇಯರ್‌ ಬಳಸುತ್ತಿರುವ ವಾಹನ ನಿಯಮ ಬಾಹಿರವಾಗಿದೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಈ ಹಂತದಲ್ಲಿ ಸಮಜಾಯಿಸಿ ನೀಡಲು ಸಂಬಂಧಿಸಿದ ಅಧಿಕಾರಿ ಎದ್ದು ನಿಂತಾಗ ಸದಸ್ಯರೊಬ್ಬರು ಅವರ ಕುರಿತು ಹಗುರವಾಗಿ ಮಾತನಾಡಿದರೆಂದು ದೂರಿ, ಸದಸ್ಯರ ವಿರುದ್ಧಧಿಕ್ಕಾರ ಕೂಗುತ್ತ ಸಭೆಯಿಂದ ಹೊರ ಹೋಗಿ ಪಾಲಿಕೆ ಮುಂಭಾಗದಲ್ಲಿ ಧರಣಿ
ನಡೆಸಿದರು.

ಈ ಹಂತದಲ್ಲಿ ಸದಸ್ಯರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ತಮ್ಮ ಸಿಬ್ಬಂದಿಯನ್ನ ಸಮರ್ಥಿಸಿದ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ,
ಸಭೆಯನ್ನು ರದ್ದುಗೊಳಿಸಿ, ಮೇಯರ್‌ ಹಾಗೂ ಉಪ ಮೇಯರ್‌ ಬಳಸುವ ಸರ್ಕಾರಿ ವಾಹನಗಳು ಮಹಾರಾಷ್ಟ್ರ ನೋಂದಣಿ ಹೊಂದಿವೆ. ಗುತ್ತಿಗೆ ಆಧಾರದಲ್ಲಿ ಪಡೆದಿರುವ ಈ ವಾಹನಗಳು ಅಕ್ರಮವಾಗಿದ್ದು, ಇದು ನಿಯಮ ಬಾಹೀರವಾಗಿವೆ ಎಂದು ಆರೋಪಿಸಿದರು. ಸದ್ಯ ಬಳಸುತ್ತಿರುವ ಕಾರ್‌ನ ಗುತ್ತಿಗೆದಾರ ಮಹಾರಾಷ್ಟ್ರದ ಪಾಸಿಂಗ್‌ ಮಾಡಿಸಿದ್ದಾನೆ. ಇ-ಪ್ರೊಕ್ಯೂರ್‌ವೆುಂಟ್‌ ಮೂಲಕವೇ ಗುತ್ತಿಗೆ ಕರೆಯಲಾಗಿದೆ. ನೋಂದಣಿ ಎಲ್ಲಿ ಮಾಡಿಸಬೇಕು ಎಂಬುದು ವಾಹನ ಮಾಲೀಕನಿಗೆ ಬಿಟ್ಟ ವಿಚಾರವೇ ಹೊರತು ಪಾಲಿಕೆಯ ಕೆಲಸವಲ್ಲ.

ಕರ್ನಾಟಕದ ನೋಂದಣಿ ಮಾಡಿಸಿ ಹಳದಿ ಫಲಕ ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಕರ್ನಾಟಕದ ನೋಂದಣಿ ಮಾಡಿಸಿ, ಹಳದಿ
ಬಣ್ಣದ ನೋಂದಣಿ ಸಂಖ್ಯಾಫಲಕ ಅಳವಡಿಸಲು ಸೂಚಿಸಲಾಗಿದೆ. ಇದೇ ಕಾರಣಕ್ಕೆ ಗುತ್ತಿಗೆದಾರರಿಗೆ ಬಾಡಿಗೆ ಕೂಡ ಪಾವತಿ ಮಾಡಿಲ್ಲ ಎಂದು ಸಂಬಂಧಿಸಿದ ಅಧಿಕಾರಿಗಳು ಸಮಜಾಯಿಷಿ ನೀಡಿದರು.

ಮಾಸಿಕ 30 ಸಾವಿರ ರೂ. ಬಾಡಿಗೆ ಆಧಾರದ ಮೇಲೆ ಆದರ್ಶ ಟೂರ್ ಆಂಡ್‌ ಟ್ರ್ಯಾವೆಲ್ಸ್‌ನಿಂದ ಗುತ್ತಿಗೆ ಪಡೆಯಲಾಗಿದೆ. ಕರ್ನಾಟಕದಲ್ಲಿ ಕಡಿಮೆ ದರಕ್ಕೆ ಬಾಡಿಗೆ ವಾಹನ ದೊರೆಯದ ಕಾರಣ ಸದರಿ ಟ್ರಾವೆಲ್ಸ್‌ನವರಿಗೆ ಗುತ್ತಿಗೆ ವಹಿಸಲಾಗಿದೆ. ಹಳೆ
ವಾಹನದ ತಾಂತ್ರಿಕ ವರದಿ ನೀಡಲು ಸಮಯ ನೀಡಿ, ವರದಿ ಬಂದ ಮಾಹಿತಿ ಸಂಗ್ರಹಿಸಿ ವರದಿ ನೀಡುವುದಾಗಿ ಉತ್ತರಿಸಿದರು.

ಅಧಿಕಾರಿಗಳ ಉತ್ತರದಿಂದ ತೃಪ್ತರಾಗದ ಪರಶುರಾಮ ರಜಪೂತ, ಅಧಿಕಾರಿಗಳನ್ನು ಇಂಗ್ಲಿಷ್‌ ಪದ ಬಳಸಿ ನಿಂದಿಸಿದರು. ಇದರಿಂದ ಕುಪಿತರಾದ ಆಯುಕ್ತ ಹರ್ಷ ಶೆಟ್ಟಿ ಸಭೆಯನ್ನು ರದ್ದುಗೊಳಿಸಿ ಹೊರ ನಡೆದರು. ಆದರೆ ಸದಸ್ಯರು ಮೇಯರ್‌ ಅಧ್ಯಕ್ಷತೆಯಲ್ಲಿ ಸಭೆ ಮಂದುವರಿಸಿ ಮಹಾರಾಷ್ಟ್ರದ ವಾಹನ ಬಳಸುವ ತುರ್ತು ಅಗತ್ಯವೇನಿತ್ತು, ಬಾಡಿಗೆಗೆ ವಾಹನ ಪೂರೈಸುವ ಗುತ್ತಿಗೆದಾರರು
ನಮ್ಮ ರಾಜ್ಯದಲ್ಲಿ ಇಲ್ಲವೇ? ಅಲ್ಲದೇ ಬಾಡಿಗೆ ವಾಹನ ಪೂರೈಕೆದಾರ ಸಂಸ್ಥೆ ಹೆಸರೇನು, ಖಾಸಗಿ ಗುತ್ತಿಗೆದಾರರು ಪೂರೈಸಿರುವ ವಾಹನ ಬಳಕೆಯ ಕುರಿತು ಆರ್‌ಟಿಒ ವರದಿ ಕೊಡಿ ಎಂದು ಸದಸ್ಯರು ಪ್ರಶ್ನೆಗಳ ಸುರಿಮಳೆ ಗರೆದಾಗ ಸಭೆಯಲ್ಲಿ ಗೊಂದಲ
ಮೂಡಿತು.

ಮೇಯರ್‌ ಅನುಮತಿ ಪಡೆಯದೇ ಸಭೆ ರದ್ದುಗೊಳಿಸಿ, ಒಪ್ಪಿಗೆ ಇಲ್ಲದೇ ಸಾಮಾನ್ಯ ಸಭೆಯಂಥ ಮಹತ್ವದ ಸಭೆಯಿಂದ ಆಯುಕ್ತರು ಹೊರ ನಡೆದ ವರ್ತನೆಗೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಪಾಲಿಕೆಗೆ ವಾಹನ ಬಾಡಿಗೆ ಪಡೆಯುವಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಅವ್ಯವಹಾರ ಪ್ರಶ್ನಿಸಿದ್ದಕ್ಕೆ ಆಯುಕ್ತರು ಅಧಿಕಾರಗಳನ್ನು ಸಮರ್ಥಿಸಿಕೊಂಡು ಸಭೆಯಿಂದ ನಿಯಮ ಬಾಹೀರವಾಗಿ ಹೊರ ನಡೆದ ಕ್ರಮ
ಅಸಭ್ಯ ವರ್ತನೆಗೆ ಸಮವಾಗಿದೆ ಎಂದು ಸದಸ್ಯರು ದೂರಿದರು. ಆದರೆ ಸದಸ್ಯರು ಹಾಗೂ ಆಯುಕ್ತರು, ಅಧಿಕಾರಿಗಳ ಮಧ್ಯೆ ಇಷ್ಟೊಂದು ಗೊಂದಲದ ಬೆಳವಣಿಗೆ ನಡೆದರೂ ವಾಹನ ಬಳಸುವ ಮೇಯರ್‌ ಮಾತ್ರ ಮೌನ ಮುರಿಯದಿರುವುದು ಅಚ್ಚರಿ
ಮೂಡಿಸಿತು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.