ಹಿಂದಿ ಹೋಗುವ ಭಯದಲ್ಲಿ ಶಿಕ್ಷಕರು


Team Udayavani, Sep 17, 2017, 6:00 AM IST

hindi-teacher.jpg

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಿಗೆ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದರಿಂದ ಅಲ್ಲಿರುವ ಹಿಂದಿ ಶಿಕ್ಷಕರಿಗೆ ಈಗ ತಲೆಬಿಸಿ ಪ್ರಾರಂಭವಾಗಿದೆ.

ಸಿಬಿಎಸ್‌ಇ ಪಠ್ಯಕ್ರಮ ಜಾರಿಯಾದರೆ ಪ್ರಥಮ ಮತ್ತು ದ್ವಿತೀಯ ಭಾಷೆ (ದ್ವಿಭಾಷಾ ಸೂತ್ರ) ಇರುವುದರಿಂದ ಸದ್ಯ ಸರ್ಕಾರಿ ಶಾಲೆಗಳಲ್ಲಿ ಮೂರನೇ ಭಾಷೆಯಾಗಿ ಹಿಂದಿ ಶಿಕ್ಷಕರಿಗೆ ಇದರಿಂದ ಕೆಲಸವಿಲ್ಲದಂತಾಗುವ ಪ್ರಮೇಯವೇ ಹೆಚ್ಚು.
ಹೀಗಾಗಿ, ಸರ್ಕಾರದ ಹೊಸ ಚಿಂತನೆ ನಮ್ಮ ಉದ್ಯೋಗಕ್ಕೆ ಕಂಟಕವಾಗಬಹುದು ಎಂಬುದು ಹಿಂದಿ ಶಿಕ್ಷಕರ ಆತಂಕ. ಏಕೆಂದರೆ ಪ್ರಸ್ತುತ  ಹಿಂದಿ ಶಿಕ್ಷಕರಿಗೆ ನಿತ್ಯ ಮೂರು ತರಗತಿ ಪಾಠ ಮಾಡುವುದು ಮಾತ್ರ ಹೊಣೆಗಾರಿಕೆ.  ಈ ಹಿನ್ನೆಲೆಯಲ್ಲಿ  ಹಿಂದಿ ಶಿಕ್ಷಕರಲ್ಲಿ ಕೆಲವರು, ನಿತ್ಯವೂ ನಮಗೂ ಐದಾರು ತರಗತಿ ನಡೆಸಲು ಅವಕಾಶ ನೀಡಬೇಕು ಎಂಬ ಪ್ರಸ್ತಾವನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದಾರೆ.

2016-17ರ ಡೈಸ್‌ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 22,454 ಸರ್ಕಾರಿ  ಹಾಗೂ 2,835 ಅನುದಾನಿತ ಪ್ರೌಢಶಾಲೆ ಇದೆ. ಹಾಗೆಯೇ 1,45,720 ಶಿಕ್ಷಕರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಗೂ 15,945 ಶಿಕ್ಷಕರು ಅನುದಾನಿತ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅನುದಾನಿತ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಲ್ಲಿ ಸರ್ಕಾರಿ ಶಿಕ್ಷಕರು ಶೇ.30ಕ್ಕಿಂತ ಹೆಚ್ಚಿದ್ದಾರೆ. 1.45 ಲಕ್ಷ ಪ್ರೌಢಶಾಲಾ ಶಿಕ್ಷಕರಲ್ಲಿ  ಒಂದು ಪ್ರೌಢಶಾಲೆಗೆ ತಲಾ ಒರ್ವ ಶಿಕ್ಷಕರಂತೆ ಸುಮಾರು 20 ಸಾವಿರ ಹಿಂದಿ ಶಿಕ್ಷಕರಿದ್ದಾರೆ. ಹಾಗೆಯೇ ಅನುದಾನಿತ ಶಾಲೆಯಲ್ಲೂ ಹಿಂದಿ ಶಿಕ್ಷಕರಿದ್ದಾರೆ.

ಸಿಬಿಎಸ್‌ಇ ಪಠ್ಯಕ್ರಮ ಅವಳವಡಿಸಲು ಚಿಂತನೆ:
ರಾಜ್ಯ ಸರ್ಕಾರ ಈಗಾಲೇ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಸಿದೆ. ಪ್ರಸ್ತಕ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಹಿಂದಿನ ಸಾಲಿನಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಬಿಎಸ್‌ಇ ಪಠ್ಯಕ್ರಮದಲ್ಲೇ ಅಭ್ಯಾಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಸಲು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದ್ದು, ಮುಂದಿನ ವರ್ಷದಿಂದ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಈ ಪಠ್ಯಕ್ರಮದ ಅನುಷ್ಠಾನಕ್ಕೂ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ.

ಸರ್ಕಾರಿ ಪ್ರೌಢಶಾಲೆಯಲ್ಲಿ ಸಿಬಿಎಸ್‌ಇ ಪಠ್ಯಕ್ರಮ  ಅಳವಡಿಸುವುದರಿಂದ ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲಾ ವಿದ್ಯಾರ್ಥಿಗಳ ಜತೆ ಸ್ಪರ್ಧೆ ಮಾಡಬಹುದು. ಜತೆಗೆ ಮಕ್ಕಳ ಕಲಿಕಾ ಗುಣಮಟ್ಟವು ಸುಧಾರಿಸುತ್ತದೆ. ಈ ಪಠ್ಯಕ್ರಮದ ಆಧಾರದಲ್ಲೇ ಶಿಕ್ಷಕರಿಗೂ ತರಬೇತಿ ನೀಡುವುದರಿಂದ ಶೈಕ್ಷಣಿಕ ಗುಣಮಟ್ಟ ಇನ್ನಷ್ಟು ಉತ್ತಮವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ದ್ವಿಭಾಷಾ ಸೂತ್ರ:
ಒಂದು ವೇಳೆ ಮುಂದಿನ ಶೈಕ್ಷಣಿಕ ವರ್ಷದಿಂದ ಸಿಬಿಎಸ್‌ಇ ಪಠ್ಯಕ್ರಮ ಜಾರಿಗೆ ಬಂದರೆ, ಪ್ರಥಮ ಭಾಷೆ ಕನ್ನಡ,  ದ್ವಿತೀಯ ಭಾಷೆ ಇಂಗ್ಲಿಷ್‌ ಹಾಗೂ ತೃತೀಯ ಭಾಷೆ ಹಿಂದಿ, ಸಂಸ್ಕೃತ, ಮರಾಠಿ, ಉರ್ದು ಇತ್ಯಾದಿ ಎಂಬ ನಿಯಮ ಬದಲಾಗಲಿದೆ. ಸಿಬಿಎಸ್‌ಇ ಪಠ್ಯಕ್ರಮದಲ್ಲಿ ಸದ್ಯ ಅನುಸರಿಸುತ್ತಿರುವ ದ್ವಿಭಾಷಾ ಸೂತ್ರವೇ ಜಾರಿಗೆ ಬರಲಿದೆ. ಕರ್ನಾಟಕದಲ್ಲಿ ಸರ್ಕಾರಿ ಶಾಲೆಯಲ್ಲಿ ಕನ್ನಡ ಪ್ರಥಮ ಭಾಷೆಯಾಗಿರುತ್ತದೆ. ಎರಡನೇ ಭಾಷೆ ಇಂಗ್ಲಿಷ್‌ ಆಗಿರುತ್ತದೆ. ಖಾಸಗಿ ಅಥವಾ ಅನುದಾನಿತ ಶಾಲೆ, ವಿವಿಧ ಮಾಧ್ಯಮದ ಶಾಲೆಯಲ್ಲಿ ಪ್ರಥಮ ಭಾಷೆ ಬದಲಾಗುತ್ತದೆ.

ರಾಜ್ಯದ ಸುಮಾರು 22 ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಪ್ರಥಮ ಭಾಷೆಯಾದರೆ, ಇಂಗ್ಲಿಷ್‌ ದ್ವಿತೀಯ ಭಾಷೆಯಾಗಿದೆ. ತೃತೀಯ ಭಾಷೆಯಾಗಿ ಹಿಂದಿ ಅಥವಾ ಸಂಸ್ಕೃತ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಸಂಸ್ಕೃತ ಓದುತ್ತಿರುವ ಮಕ್ಕಳ ಸಂಖ್ಯೆ ತೀರ ಕಡಿಮೆ. ಇದು ಹಿಂದಿ ಶಿಕ್ಷಕರ ಭಯಕ್ಕೆ ಕಾರಣ.

ಹಿಂದಿ ಶಿಕ್ಷಕರು ಸದ್ಯ ದಿನಕ್ಕೆ ಮೂರು ತರಗತಿ ತೆಗೆದುಕೊಳ್ಳುತ್ತಿದ್ದಾರೆ. ಅದನ್ನು ಹೆಚ್ಚಿಸುವಂತೆ ಹಿಂದಿ ಶಿಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರೌಢಶಾಲೆಗೆ ಸಿಬಿಎಸ್‌ಇ ಪಠ್ಯಕ್ರಮವನ್ನು ಅಳವಡಿಸುವ ಚಿಂತನೆ ನಡೆದಿರುವುದರಿಂದ ದ್ವಿಭಾಷಾ ಸೂತ್ರ ಜಾರಿಗೆ ಬರುವ ಸಾಧ್ಯತೆಯೂ ಇದೆ.
-ಫಿಲೋಮಿನಾ ಲೋಬೊ, ನಿರ್ದೇಶಕಿ, ಪ್ರೌಢ ಶಿಕ್ಷಣ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.