ಪಾಕ್‌ಗೆ ಮತ್ತೆ ಮುಖಭಂಗ


Team Udayavani, Sep 17, 2017, 6:05 AM IST

pak.jpg

ವಿಶ್ವಸಂಸ್ಥೆ: ತನ್ನ ನೆಲದಲ್ಲಿ ರಕ್ತಪಿಪಾಸುಗಳನ್ನು ಪೋಷಿಸಿ ಬೆಳೆಸುತ್ತಿದ್ದರೂ ಮತ್ತೂಂದು ದೇಶದ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸುವ ಪಾಕಿಸ್ಥಾನಕ್ಕೆ ಶನಿವಾರ ಭಾರತವು ಕಟು ಪದಗಳ ಮೂಲಕವೇ ನೈತಿಕತೆಯ ಪಾಠ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾವಿಸಿ, ಚಪ್ಪಾಳೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದ ಪಾಕಿಸ್ಥಾನವನ್ನು ಭಾರತವು ಸರಿಯಾಗಿಯೇ ಝಾಡಿಸಿದೆ.

“ನಮ್ಮ ಆಂತರಿಕ ವಿಚಾರದಲ್ಲಿ ಎಳ್ಳಷ್ಟೂ ಹಸ್ತಕ್ಷೇಪ ಮಾಡುವ ಅಧಿಕಾರ ನಿಮಗಿಲ್ಲ. ಭವಿಷ್ಯದಲ್ಲಿ ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ’ ಎಂದು ಹೇಳಿ ವಿಶ್ವಸಮುದಾಯದ ಮುಂದೆಯೇ ಪಾಕಿಸ್ಥಾನಕ್ಕೆ ಭಾರತ ತೀವ್ರ ಮುಖಭಂಗ ಮಾಡಿದೆ.

ಇದು ನಡೆದದ್ದು ಜಿನೇವಾದ ವಿಶ್ವಸಂಸ್ಥೆ ಕಚೇರಿಯಲ್ಲಿ. ಮುಸ್ಲಿಂ ರಾಷ್ಟ್ರಗಳ ಒಕ್ಕೂಟವಾದ ಇಸ್ಲಾ ಮಿಕ್‌ ಸಹಕಾರ ಸಂಘ (ಒಐಸಿ)ದ ಪರ ಪಾಕ್‌ ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಹಿಂಸಾಚಾರವನ್ನು ಪ್ರಸ್ತಾ ವಿಸಿತ್ತು. ಕಾಶ್ಮೀರದಲ್ಲಿನ ಸ್ವದೇಶಿ ಚಳವಳಿಗೆ ಭಾರತ ತೊಂದರೆ ಉಂಟುಮಾಡುತ್ತಿದೆ. ಅಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದ್ದು, ಅದನ್ನು ತಡೆಯುವ ಅಗತ್ಯವಿದೆ ಎಂದೆಲ್ಲ  ಆರೋಪಗಳ ಪಟ್ಟಿ ಮುಂದಿಟ್ಟು ಭಾರತವನ್ನು ಹೀಗಳೆಯಲು ಯತ್ನಿಸಿತ್ತು.

ಇದಕ್ಕೆ “ಭಾರತದ ಪ್ರತಿಕ್ರಿಯಿಸುವ ಹಕ್ಕು’ ನಿಯಮದಡಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ರಾಯಭಾರ ಕಚೇರಿಯ ಕಾರ್ಯದರ್ಶಿ ಸುಮಿತ್‌ ಸೇs…, “ಜಮ್ಮು ಮತ್ತು ಕಾಶ್ಮೀರ ಎನ್ನುವುದು ಭಾರತದ ಅವಿಭಾಜ್ಯ ಹಾಗೂ ಎಂದೂ ಪ್ರತ್ಯೇಕಿಸಲಾಗದ ಅಂಗ. ಹೀಗಾಗಿ, ಅಲ್ಲಿನ ಎಲ್ಲ ಸಂಗತಿಗಳೂ ನಮ್ಮ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡಲು ನೀವ್ಯಾರು’ ಎಂದು ಕೇಳುವ ಮೂಲಕ ಪಾಕಿಸ್ಥಾನದ ಬಾಯಿ ಮುಚ್ಚಿಸಿದರು. ಅಲ್ಲದೆ, “ಒಐಸಿ ನೀಡಿರುವ ಹೇಳಿಕೆಯಲ್ಲಿ ಸತ್ಯಕ್ಕೆ ದೂರವಾದ ಅಂಶಗಳೇ ತುಂಬಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಹಾದಿ ತಪ್ಪಿಸುವಂಥ ಉಲ್ಲೇಖಗಳನ್ನು ಮಾಡಲಾಗಿದೆ. ಇವೆಲ್ಲವನ್ನೂ ಭಾರತವು ಖಂಡತುಂಡವಾಗಿ ನಿರಾಕರಿಸುತ್ತದೆ. ಅಷ್ಟಕ್ಕೂ, ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿ ಗಿಲ್ಲ. ಈಗ ಮಾತ್ರವಲ್ಲ, ಭವಿಷ್ಯದಲ್ಲೂ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ ಎಂದು ನಾವು ಒಐಸಿಗೆ ಹೇಳಬಯಸುತ್ತೇವೆ’ ಎಂದರು.

ಏನಿದು ಒಐಸಿ?: ಇಸ್ಲಾಮಿಕ್‌ ಸಹಕಾರ ಸಂಸ್ಥೆ (ಆರ್ಗನೈಸೇಷನ್‌ ಆಫ್ ಇಸ್ಲಾಮಿಕ್‌ ಕೋ- ಆಪರೇಷನ್‌) ಎನ್ನುವುದು 57 ರಾಷ್ಟ್ರಗಳು ಸೇರಿ ರಚಿಸಿದ ಒಂದು ಗುಂಪು. ಇದರ ಸದಸ್ಯ ರಾಷ್ಟ್ರಗಳ ಪೈಕಿ ಪಾಕಿಸ್ಥಾನವೂ ಒಂದಾಗಿದೆ.

ಪಾಕಿಸ್ಥಾನದ ಆರೋಪ ಏನಾಗಿತ್ತು ?
– ಕಾಶ್ಮೀರದ ಸ್ವದೇಶಿ ಚಳವಳಿಗೆ ಕಪ್ಪು ಚುಕ್ಕೆ ತರಲು ಭಾರತ ಯತ್ನಿಸುತ್ತಿದೆ
– ಬಹುಸಂಖ್ಯಾತ ಕಾಶ್ಮೀರಿಗರನ್ನು ಅಲ್ಪಸಂಖ್ಯಾಕರಿರುವ ಪ್ರದೇಶಕ್ಕೆ ಬದಲಿಸುವ ಮೂಲಕ ಭಾರತ ಸರಕಾರವು ಕಾಶ್ಮೀರದ ಜನಸಂಖ್ಯಾ ಸ್ಥಿತಿಯನ್ನೇ ಬದಲಿಸಲು ಹೊರಟಿದೆ
– ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕಬೇಕು
– ಎಲ್‌ಒಸಿಯಲ್ಲಿ ಭಾರತೀಯ ಸೇನಾ ಪಡೆ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದನ್ನು ತಡೆಯಬೇಕು

ಭಾರತದ ಪ್ರತಿಕ್ರಿಯೆಯೇನು?
– ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಪ್ರತ್ಯೇಕಿಸಲು ಅಸಾಧ್ಯವಾದ ಅಂಗ
– ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿಗಿಲ್ಲ
– ಒಐಸಿ ಹೇಳಿಕೆಯಲ್ಲಿರುವುದು ಸುಳ್ಳು ಮತ್ತು ಹಾದಿ ತಪ್ಪಿಸುವ ಅಂಶಗಳೇ
– ಭವಿಷ್ಯದಲ್ಲಿ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಿ

ಇಬ್ಬರು ಉಗ್ರರ ಹತ್ಯೆ
ಶ್ರೀನಗರ
: ಪಾಕ್‌ ಕಡೆಯಿಂದ ಕಾಶ್ಮೀರದೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿರುವ ಭಾರತೀಯ ಸೇನೆ, ಒಳನುಸುಳುವಿಕೆ ಪ್ರಯತ್ನವನ್ನು ತಡೆದಿದೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್‌ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡ ಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ಹೇಳಿದ್ದಾರೆ.
 

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.