ಮೋದಿ @ 67 ; ಸರ್ದಾರ್ ಸರೋವರ ಡ್ಯಾಂ ಲೋಕಾರ್ಪಣೆ
Team Udayavani, Sep 17, 2017, 9:46 AM IST
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 67 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಗಾಂಧಿನಗರದಲ್ಲಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಮೋದಿ ಕೆವಾಡಿಯಲ್ಲಿ ಸರ್ದಾರ್ ಸರೋವರ ಅಣೆಕಟ್ಟನ್ನು ದೇಶಕ್ಕೆ ಸಮರ್ಪಿಸಿದರು. ಮಂತ್ರ ಘೋಷಗಳ ವಿಧಿ ವಿಧಾನಗಳೊಂದಿಗೆ, ಬಾಗಿನ ನೀಡುವ ಮೂಲಕ ಡ್ಯಾಂ ಲೋಕಾರ್ಪಣೆಗೊಳಿಸಿದರು. ವಿಶ್ವಕರ್ಮ ಜಯಂತಿಯ ಸುಸಂದರ್ಭದಲ್ಲಿ ಡ್ಯಾಂ ಲೋಕಾರ್ಪಣೆ ಮಾಡಲಾಗಿದ್ದು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿರುವ ಈ ಅಣೆಕಟ್ಟಿಗೆ 1961ರ ಏ.6ರಂದು ಅಂದಿನ ಪ್ರಧಾನಿ ದಿ.ಜವಾಹರ್ ಲಾಲ್ ನೆಹರೂ ಶಿಲಾನ್ಯಾಸ ನೆರವೇರಿಸಿದ್ದರು. ಹೀಗಾಗಿ 56ವರ್ಷಗಳ ಬಳಿಕ ಈ ಅಣೆಕಟ್ಟು ಉದ್ಘಾಟನೆಯಾಗಿದೆ.ಈ ಯೋಜನೆಗೆ ಪರಿಸರವಾದಿ ಮೇಧಾ ಪಾಟ್ಕರ್ ನೇತೃತ್ವದಲ್ಲಿ ಭಾರಿ ಹೋರಾಟವೂ ನಡೆದಿತ್ತು. ವಿಶ್ವದಲ್ಲೇ 2 ನೇ ಅತೀ ದೊಡ್ಡ ಡ್ಯಾಂ ಇದಾಗಿದೆ.
ಪ್ರಧಾನಿ ಮೋದಿ ಎರಡು ದಿನಗಳ ಹಿಂದಷ್ಟೇ ಬುಲೆಟ್ ಟ್ರೈನ್ ಯೋಜನೆ ಶಿಲಾನ್ಯಾಸಕ್ಕೆ ತವರು ರಾಜ್ಯಕ್ಕೆ ಆಗಮಿಸಿದ್ದರು.
ಪಕ್ಷದ ಪರಮೋಚ್ಛ ನಾಯಕನ ಜನ್ಮ ದಿನವನ್ನು “ಸೇವಾ ದಿವಸ’ವನ್ನಾಗಿ ಬಿಜೆಪಿ ಆಚರಿಸುತ್ತಿದ್ದು , ದೇಶಾದ್ಯಂತ ಸ್ವಚ್ಛತಾ ಆಂದೋಲನ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ