ಪ್ರವಾಸಿ ಮಿತ್ರರ ನೇಮಕಕ್ಕೆ ಚಿಂತನೆ : ಪ್ರಿಯಾಂಕ್ ಖರ್ಗೆ
Team Udayavani, Sep 17, 2017, 12:06 PM IST
ಬೆಂಗಳೂರು:ರಾಜ್ಯದ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ನೀಡುವುದರ ಜತೆಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೇ ‘ಪ್ರವಾಸಿ ಮಿತ್ರ’ರನ್ನು ನೇಮಕ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ‘ಓಲಾ’ ಸಂಸ್ಥೆ ಜಂಟಿಯಾಗಿ ಹಮ್ಮಿಕೊಂಡಿರುವ ‘ಜವಾಬ್ದಾರಿಯುತ ಪ್ರವಾಸೋದ್ಯಮ’ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪ್ರವಾಸಿ ತಾಣಗಳಲ್ಲಿ ಈಗಾಗಲೇ 500 ಗೃಹರಕ್ಷಕರನ್ನು ಪ್ರವಾಸಿ ಮಿತ್ರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದ್ದು, ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿ¨ªಾರೆ. ಇಲಾಖೆಯಿಂದಲೇ ಶಾಶ್ವತವಾಗಿ ಪ್ರವಾಸಿ ಮಿತ್ರರನ್ನು ನೇಮಕ ಮಾಡಿಕೊಳ್ಳುವ ಬಗ್ಗೆಯೂ ಪರಿಶೀಲನಡೆ ನಡೆಸಲಾಗಿದೆ ಎಂದು ಹೇಳಿದರು.
ಪ್ರವಾಸಿ ಮಿತ್ರರಾಗಿ ನೇಮಕ ಮಾಡಿಕೊಂಡಿರುವವರಿಗೆ ಪ್ರವಾಸಿಗರ ಬಳಿ ಹೇಗೆ ನಡೆದುಕೊಳ್ಳಬೇಕು ಹಾಗೂ ಅವರಿಗೆ ಭದ್ರತೆ ಒಗಿಸುವ ಸಂಬಂಧ ತರಬೇತಿ ನೀಡಲಾಗುವುದು ಎಂದರು.
14 ದಿನಗಳ ಪ್ರವಾಸ
ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಓಲಾ ಸಂಸ್ಥೆ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅದರಂತೆ ರಾಜ್ಯಗಳಲ್ಲಿನ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕೊಂಡೊಯ್ಯುವ 14 ದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಯಶಸ್ಸಿಗಾಗಿ ಚಿತ್ರನಟಿ ಶಹನಾಜ್ ರಹಾರಿ ಅವರು ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದ ಪ್ರವಾಸಿ ತಾಣಗಳಾದ ಹಂಪಿ, ಐಹೊಳೆ, ಬಾದಾಮಿ, ಪಟ್ಟದಕಲ್ಲು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಸಂಸ್ಕೃತಿ, ಅಲ್ಲಿನ ಜನಜೀವನ, ಆರ್ಥಿಕ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಅಭಿಯಾನ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪ್ರವಾಸಿಗರ ಮನೆ ಬಾಗಿಲಿಗೆ ಓಲಾ ಕಾರುಗಳು ತೆರಳಿ ಪ್ರವಾಸಿಗರನ್ನು ಅವರು ಬಯಸಿದ ತಾಣಗಳಿಗೆ ಕರೆದೊಯ್ದು ಮತ್ತೆ ಸುರಕ್ಷಿತವಾಗಿ ಮನೆಗೆ ಬಿಡುವ ಅಭಿಯಾನ ಇದಾಗಿದೆ. ಮಹಿಳೆಯರೂ ಕೂಡ ನಿರ್ಭೀತರಾಗಿ ಪ್ರವಾಸಿ ತಾಣಗಳಿಗೆ ಭೇಟಿ ಕೊಡಲು ಓಲಾ ಕಂಪನಿ ಸೂಕ್ತ ವ್ಯವಸ್ಥೆ ಮಾಡಲಿದೆ ಎಂದು ಹೇಳಿದರು.
ಓಲಾ ಕಂಪನಿಯ ಪ್ರಣಯ್ ಜೀವರಾಜ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ