“ಜಿಎಸ್‌ಟಿ ತಾಂತ್ರಿಕ ಅಡಚಣೆಗೆ ಇನ್ಫೋಸಿಸ್‌ ಕಾರಣವಲ್ಲ’


Team Udayavani, Sep 17, 2017, 12:13 PM IST

16BNP-(25).jpg

ಬೆಂಗಳೂರು: “ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆಗೆ ಸಂಬಂಧಿಸಿದ ಬಹುತೇಕ ತಾಂತ್ರಿಕ ಅಡಚಣೆಗಳು ಅಕ್ಟೋಬರ್‌ 30ರೊಳಗೆ ಬಗೆಹರಿಯಲಿದೆ’ ಎಂದು ಜಿಎಸ್‌ಟಿ ಅನುಷ್ಠಾನ ಕುರಿತ ಸಚಿವರ ಸಮಿತಿ ಅಧ್ಯಕ್ಷರೂ ಆಗಿರುವ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಜಿಎಸ್‌ಟಿಎನ್‌ ಸಾಫ್ಟ್ವೇರ್‌ ಅಭಿವೃದಿಟಛಿಪಡಿಸಿ ನಿರ್ವಹಣೆ ಮಾಡುತ್ತಿರುವ ಇನ್ಫೋಸಿಸ್‌ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜುಲೈ 1ರಿಂದ ಜಿಎಸ್‌ಟಿ ಜಾರಿಯಾದ ನಂತರ ಎರಡೂವರೆ ತಿಂಗಳಲ್ಲಿ ಸಾಕಷ್ಟು ತಾಂತ್ರಿಕ ಅಡಚಣೆ ನಿವಾರಿಸಲಾಗಿದೆ.

ಆದರೂ ಒಂದಷ್ಟು ಸಮಸ್ಯೆ ಇರುವುದು ನಿಜ ಎಂದು ಒಪ್ಪಿಕೊಂಡರು. ಇನ್ಫೋಸಿಸ್‌ ಸಂಸ್ಥೆ ಜಿಎಸ್‌ಟಿ ಸಾಫ್ಟ್ವೇರ್‌ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮೋದಿ ಶ್ಲಾ ಸಿದರು.

ಜಿಎಸ್‌ಟಿ ರಿಟನ್ಸ್‌ ಸಲ್ಲಿಸಲು ಕೊನೆಯ ದಿನದವರೆಗೂ ಸುಮ್ಮನಿದ್ದು ಒಮ್ಮಿಂದೊಮ್ಮೆಲೇ ಗುಡುವು ಮುಗಿಯುವ ಕಡೆಯ ನಾಲ್ಕೈದು ದಿನಗಳಲ್ಲಿ ಸಲ್ಲಿಸಲು ವ್ಯಾಪಾರಸ್ಥರು ಮುಗಿಬೀಳುವುದರಿಂದ ಲೋಡ್‌ ಹೆಚ್ಚಾಗಿ ಸಮಸ್ಯೆಗಳು ಉದ್ಭವಿಸುತ್ತಿವೆ. ದಯವಿಟ್ಟು ಕೊನೆಯ ದಿನದವರೆಗೂ ಕಾಯದೆ ಶೀಘ್ರ ರಿಟರ್ನ್ ಸಲ್ಲಿಸಬೇಕೆಂದು ವ್ಯಾಪಾರಸ್ಥರು, ಉದ್ಯಮಿಗಳಲ್ಲಿ ಅವರು ಮನವಿ ಮಾಡಿಕೊಂಡರು.

ಯಾವುದೇ ಒಂದು ವ್ಯವಸ್ಥೆ ಜಾರಿಯಾದ ನಂತರ ಸರಿದಾರಿಗೆ ಬರಬೇಕಾದರೆ ಸಮಯ ಬೇಕಾಗುತ್ತದೆ. ಜಿಎಸ್‌ಟಿ ವಿಚಾರದಲ್ಲಿ ಎಲ್ಲವೂ ಶೇ.100ಕ್ಕೆ 100ರಷ್ಟು ತಾಂತ್ರಿಕ ಅಡಚಣೆ ಬಗೆಹರಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಆದರೆ, ಸಮಸ್ಯೆ ನಿವಾರಣೆಯ ಪ್ರಾಮಾಣಿಕ ಪ್ರಯತ್ನವಂತೂ ಆಗುತ್ತಿದೆ. ಅ.30ರೊಳಗೆ ಬಹುತೇಕ ಅಡಚಣೆಗಳು ನಿವಾರಣೆಯಾಗಲಿವೆ. ಇನ್ಫೋಸಿಸ್‌ ಸಹ ಈ ಕುರಿತು ಆಶ್ವಾಸನೆ ನೀಡಿದೆ ಎಂದರು.

ಉಪ ಸಮಿತಿಯು ಪ್ರತಿ 15 ದಿನಗಳಿಗೊಮ್ಮೆ ಸಭೆ ಸೇರಿ ತಾಂತ್ರಿಕ ಅಡಚಣೆಗಳ ಬಗ್ಗೆ ಪರಿಶೀಲಿಸಲಿದೆ. ವ್ಯಾಪಾರಸ್ಥರಿಂದ ವ್ಯಕ್ತವಾಗುವ ಅಭಿಪ್ರಾಯ, ಮಾರುಕಟ್ಟೆಯಲ್ಲಿನ ವಾಸ್ತವ ಸ್ಥಿತಿ, ಗ್ರಾಹಕರ ಸ್ಪಂದನೆ ಎಲ್ಲವನ್ನೂ ಅಧ್ಯಯನ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಿದೆ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಯಾದ ನಂತರ 62.25 ಲಕ್ಷ ವ್ಯಾಪಾರಸ್ಥರು ಹಳೇ ವ್ಯವಸ್ಥೆಯಿಂದ ಜಿಎಸ್‌ಟಿಗೆ ವರ್ಗಾವಣೆಗೊಂಡಿದ್ದಾರೆ. 23.18 ಲಕ್ಷ ವ್ಯಾಪಾರಸ್ಥರು ಹೊಸದಾಗಿ ನೋಂದಣಿ ಮಾಡಿಕೊಂಡಿದ್ದಾರೆ. 85 ಲಕ್ಷದಷ್ಟು ಜಿಎಸ್‌ಟಿ ನೆಟ್‌ವರ್ಕ್‌ಗೆ ಬಂದಂತಾಗಿದೆ ಎಂದು ವಿವರಿಸಿದರು.

ಗಡುವು
ವಿಸ್ತರಿಸುವುದಿಲ್ಲ

ಕಂದಾಯ ಕಾರ್ಯದರ್ಶಿ ಹಸುಖ್‌ ಆಧಿಯಾ ಮಾತನಾಡಿ, ಜುಲೈ ವಹಿವಾಟಿಗೆ ಸಂಬಂಧಿಸಿದಂತೆ ರಿಟರ್ನ್ ಮತ್ತು ತೆರಿಗೆ
ಸಲ್ಲಿಕೆಗೆ ನೀಡಲಾಗಿರುವ ಅ.10ರ ಗುಡುವು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಿಸಲಾಗುವುದಿಲ್ಲ. ಆ ನಂತರ ತಿಂಗಳುಗಳಿಗೂ ನಿಗದಿತ ಕಾಲಮಿತಿಯಲ್ಲೇ ಸಲ್ಲಿಸಬೇಕಾಗುತ್ತದೆ. ಗುಡುವು ವಿಸ್ತರಿಸುವ ನಿರೀಕ್ಷೆ ಬೇಡ ಎಂದು ಹೇಳಿದರು. ಜುಲೈ ವಹಿವಾಟಿಗೆ ಸಂಬಂಧಿಸಿದಂತೆ 47 ಲಕ್ಷ ಡೀಲರ್‌ಗಳು 3 ಬಿ ರಿಟರ್ನ್ಸ್ ಸಲ್ಲಿಸಿದ್ದಾರೆ. ಕಡೆಯ ದಿನಕ್ಕಾಗಿ ಕಾಯುತ್ತಿರುವುದರಿಂದ ಸಮಸ್ಯೆ ಉಂಟಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.