ತುಂಬಿ ತುಳುಕುತ್ತಿದೆ ಶಾಸ್ತ್ರೀ ಜಲಾಶಯ


Team Udayavani, Sep 17, 2017, 12:52 PM IST

vij-17-9.jpg

ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣೆಯ ಉಗಮಸ್ಥಾನ ಹಾಗೂ ಅಚ್ಚುಕಟ್ಟುಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಕೋಯ್ನಾ ಜಲಾಶಯ ಸೇರಿದಂತೆ ವಿವಿಧ ಬ್ಯಾರೇಜುಗಳಿಂದ ನದಿ ಪಾತ್ರಕ್ಕೆ ನೀರು ಬಿಟ್ಟ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ
ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

ಶುಕ್ರವಾರದಿಂದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣ ವ್ಯಾಪಕ ಏರಿಕೆಯಾಗಿದ್ದರಿಂದ ಕೃಷ್ಣೆಯ ಹಿನ್ನೀರು ಪ್ರದೇಶದಲ್ಲಿ ನೀರು ಸಂಗ್ರಹದಲ್ಲಿ ಏರಿಕೆಯಾಗಿ ರೈತರ ಜಮೀನಿನಲ್ಲಿ ನುಗ್ಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ.

ಶನಿವಾರ ಬೆಳಗ್ಗೆಯಿಂದ ಆಲಮಟ್ಟಿ ಬಲದಂಡೆಯಲ್ಲಿರುವ ಕರ್ನಾಟಕ ಜಲ ವಿದ್ಯುದ್‌ ಗಾರದ ಮೂಲಕ ನದಿ ಪಾತ್ರಕ್ಕೆ ಬಿಡಲಾಗುತ್ತಿದೆ
ಇದರಿಂದ ಹಿನ್ನೀರು ಪ್ರದೇಶದಲ್ಲಿ ಏರಿಕೆಯಾಗಿದ್ದ ನೀರು ಸಂಜೆ ವೇಳೆ ಇಳಿಮುಖವಾಗಿದೆ. ಇದರಿಂದ ಆತಂಕಕ್ಕೀಡಾಗಿದ್ದ ರೈತರು ನಿಟ್ಟುಸಿರು ಬಿಡುವಂತಾಯಿತು. 519.60 ಮೀ. ಗರಿಷ್ಠ ಎತ್ತರದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಜಲಾಶಯದಲ್ಲಿ ಶನಿವಾರ
ಸಾಯಂಕಾಲ 519.60 ಮೀ. ಎತ್ತರವಾಗಿ 123.081 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ 123.081 ಟಿಎಂಸಿ ಅಡಿ ಸಂಗ್ರಹವಾಗಿ 45,080 ಕ್ಯೂಸೆಕ್‌ ಒಳಹರಿವು ನೀರನ್ನು 45 ಸಾವಿರ ಕ್ಯೂಸೆಕ್‌ ನೀರನ್ನು ಜಲ ವಿದ್ಯುದ್‌ಗಾರ ಮೂಲಕ
ಹರಿಬಿಡಲಾಗುತ್ತಿದೆ.

ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಬರುವ 60 ಕ್ಯೂಸೆಕ್‌ ನೀರನ್ನು ವಿವಿಧ ಕೆರೆ ತುಂಬುವ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ಹಾಗೂ 20 ಕ್ಯೂಸೆಕ್‌ ನೀರನ್ನು ಕೂಡಗಿ ರಾಷ್ಟ್ರೀಯ ಉಷ್ಣ ವಿದ್ಯುತ್‌ ಸ್ಥಾವರಕ್ಕೆ ಬಿಡಲಾಗುತ್ತಿದೆಯಲ್ಲದೇ ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಕಾಲುವೆಗಳಿಗೆ ಚಾಲು ಬಂದ್‌ ಪದ್ಧತಿ ಅನುಸರಿಸುವುದರಿಂದ ಈಗ ಯಾವ ಕಾಲುವೆಗಳಿಗೂ ನೀರು ಹರಿಸುತ್ತಿಲ್ಲ.

ಬೇನಾಳದ ಪ್ರಕಾಶ ಉಳ್ಳಾಗಡ್ಡಿ ಪತ್ರಿಕೆಯೊಂದಿಗೆ ಮಾತನಾಡಿ, ಕೃಷ್ಣೆಯಲ್ಲಿ ಒಳಹರಿವು ಹೆಚ್ಚಾಗಿದ್ದರಿಂದ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಏರಿಕೆಯಾಗಿ ಸರ್ಕಾರ ಭೂಸ್ವಾಧೀನ ಪಡಿಸಿಕೊಂಡಿರುವುದಕ್ಕಿಂತ ಹೆಚ್ಚು ನೀರು ನಮ್ಮ ಜಮೀನಿನಲ್ಲಿ ನುಗ್ಗುವುದರಿಂದ
ನಮಗಿರುವ ಒಟ್ಟು ಐದು ಎಕರೆ ಜಮೀನಿನಲ್ಲಿ ಎರಡೂವರೆ ಎಕರೆ ಜಮೀನನ್ನು ಸರ್ಕಾರ ಭೂಸ್ವಾಧೀನ ಮಾಡಿಕೊಂಡಿದೆ.

ಇನ್ನುಳಿದ ಎರಡೂವರೆ ಎಕರೆಯಲ್ಲಿ ಉಳ್ಳಾಗಡ್ಡಿ, ಸಜ್ಜೆ, ಟೊಮೆಟೋ, ಬದನೆಕಾಯಿ, ಸೂರ್ಯಪಾನ ಬೆಳೆ ಬೆಳೆದಿದ್ದೇವೆ. ಇದರಲ್ಲಿ ಒಂದೂವರೆ ಎಕರೆ ಜಮೀನಿನಲ್ಲಿ ಜಲಾಶಯದ ಪ್ರವಾಹದ ವೇಳೆಯಲ್ಲಿ ನೀರು ನಿಲ್ಲುತ್ತದೆ. ಇದರಿಂದ ನಮ್ಮ ಬೆಳೆಗಳು ಹಾಳಾಗುತ್ತಿವೆ.
ಸರ್ಕಾರ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಸ್ವಾಧೀನ ಮಾಡಿಕೊಂಡಿರುವ ಜಮೀನಿಗಿಂತ ಹೆಚ್ಚು ನೀರು ಬರುವ ಜಮೀನುಗಳ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ಬಾರಿ ಬೇಸಿಗೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ವ್ಯಾಪಕವಾಗಿ ಕುಸಿದಿದ್ದರಿಂದ ವಿಜಯಪುರ ಸೇರಿದಂತೆ ಕೃಷ್ಣೆ ನೀರನ್ನು ನಂಬಿದ್ದ ಅವಳಿ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಜನರು ನೀರಿಗಾಗಿ ಪರದಾಡುವಂತಾಗಿತ್ತು, ಕೃಷ್ಣೆಯ ಒಳಹರಿವಿನಲ್ಲಿ ಹೆಚ್ಚಾಗಿದ್ದರಿಂದ ಇಂಥ ವೇಳೆಯಲ್ಲಿಯೇ ಎಲ್ಲ ಕೆರೆ ತುಂಬುವ ಯೋಜನೆ, ಕಾಲುವೆ ವ್ಯಾಪ್ತಿಯ ಕೆರೆ, ಬಾಂದಾರಗಳು ಹಾಗೂ ವಿವಿಧ ಕಾರ್ಖಾನೆಗಳಿಗೆ ಇದೇ ಅವ ಧಿಯಲ್ಲಿ ನೀರು ಸಂಗ್ರಹಿಸಬೇಕು ಮತ್ತು ವಾರಾಬಂಧಿ ಪದ್ಧತಿ ಕೈ ಬಿಟ್ಟು ಎಲ್ಲ ರೈತರ ಹಿತ ಕಾಪಾಡಲು ಕಾಲುವೆ ಜಾಲಗಳಿಗೆ ನೀರು ಹರಿಸಬೇಕು ಎಂದು ರೈತ ಮಹಾದೇವಪ್ಪ ಪತ್ತೆಪುರ ಹಾಗೂ ಶಾಂತಪ್ಪ ಮನಗೂಳಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.