ಕಾಳಸಂತೆಯಲ್ಲಿ ಪಡಿತರ ಮಾರಾಟ: ಕ್ರಮಕ್ಕೆ ಒತ್ತಾಯ
Team Udayavani, Sep 17, 2017, 4:44 PM IST
ಸಿಂಧನೂರು: ಅಹಾರ ಇಲಾಖೆಯಲ್ಲಿನ ಪಡಿತರ ಹಾಗೂ ಮಧ್ಯಾಹ್ನದ ಬಿಸಿಊಟದ ಪಡಿತರಗಳನ್ನು ಕಾಳಸಂತೆಯಲ್ಲಿ ಸಾಗಣೆ ಮಾಡುವಾಗ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ದಲಿತ ಸಂಘರ್ಷ ಸಮಿತಿ (ಭೀಮಶಕ್ತಿ) ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷ ಹುಸೇನಪ್ಪ ಸೂಲಂಗಿ, ಅಕ್ಕಿ, ತೊಗರಿ ಬೇಳೆ, ಎಣ್ಣೆ ಮತ್ತಿತರರ ಪಡಿತರಗಳನ್ನು ಅಹಾರ ಇಲಾಖೆ ಅಧಿಕಾರಿಗಳು ಕಾಳಸಂತೆಯಲ್ಲಿ ಅವ್ಯಾಹತವಾಗಿ ಮಾರಾಟ ಮಾಡುತ್ತಿದ್ದಾರೆ.
ವ್ಯವಸ್ಥಾಪಕ ಮಲ್ಲಿಕಾರ್ಜುನ, ಬಿಸಿಊಟ ಯೋಜನೆ ಸಹಾಯಕ ನಿರ್ದೇಶಕ ಶರಣಪ್ಪ, ಅಹಾರ ಸಾಗಾಟದ ಗುತ್ತಿಗೆದಾರ ಜಿ. ಗುನ್ನೇಶ್ವರ ಹಾಗೂ ಲಾರಿ ಚಾಲಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಇವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಕಾರ್ಯಾಧ್ಯಕ್ಷ ಅಮರೇಶ ಗಿರಿಜಾಲಿ, ಉಪಾಧ್ಯಕ್ಷ ಜಾಕೋಬ್ ಧುಮತಿ, ಪದಾಧಿಕಾರಿಗಳಾದ ವೈ.ಅನಿಲಕುಮಾರ, ನಾಗರಾಜ, ಮಾರುತಿ, ಬಸವರಾಜ, ಆಲಂಭಾಷಾ, ಫಾರೂಖ್, ಯಶವಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ