ಡೇವಿಸ್‌ ಕಪ್‌: ಡಬಲ್ಸ್‌ನಲ್ಲಿ ಭಾರತಕ್ಕೆ ಸೋಲು


Team Udayavani, Sep 18, 2017, 6:55 AM IST

Davis-Cup.jpg

ಎಡ್ಮಂಟನ್‌(ಕೆನಡ): ಭಾರತದ ತಾರಾ ಆಟಗಾರ ರೋಹನ್‌ ಬೋಪಣ್ಣ ಮತ್ತು ಪುರವ್‌ ರಾಜ ಅವರು ಡೇವಿಸ್‌ ಕಪ್‌ ವಿಶ್ವ ಬಣ ಪ್ಲೇ-ಆಫ್ನ ಡಬಲ್ಸ್‌ನಲ್ಲಿ ಕೆನಡ ವಿರುದ್ಧ ಸೋಲುಂಡಿದ್ದಾರೆ. ಇದರಿಂದಾಗಿ ಭಾರತ 1-2 ರಿಂದ ಹಿನ್ನಡೆ ಅನುಭವಿಸಿದೆ. ಹೀಗಾಗಿ ಭಾರತದ ವಿಶ್ವ ಬಣಕ್ಕೆ ತೇರ್ಗಡೆಯ ಕನಸು ತೂಗುಯ್ನಾಲೆಯಲ್ಲಿದೆ.

ಭಾರತದ ರೋಹನ್‌ ಬೋಪಣ್ಣ ಮತ್ತು ಪುರವ್‌ ರಾಜ ಅವರು 5-7, 5-7, 7-5, 3-6 ಸೆಟ್‌ಗಳಿಂದ ಕೆನಡದ ಅನುಭವಿ ಆಟಗಾರರಾದ ಡೇನಿಯಲ್‌ ನೆಸ್ಟರ್‌ ಮತ್ತು ವಾಸೆಕ್‌ ಪಾಸ್ಪಿಸಿಲ್‌ ವಿರುದ್ಧ ಸೋತಿದ್ದಾರೆ. ಈ ಹೋರಾಟ 2 ಗಂಟೆ, 52 ನಿಮಿಷಗಳ ಕಾಲ ನಡೆಯಿತು. ಭಾರತೀಯ ಜೋಡಿ ಸೋತರೂ ಕೂಡ ಭರ್ಜರಿ ಹೋರಾಟ ಪ್ರದರ್ಶಿಸಿತು. 

ಅನುಭವಿ ಆಟಗಾರ ಬೋಪಣ್ಣ ಪ್ರದರ್ಶನ ಪ್ರಬಲವಾಗಿತ್ತು. ಆದರೆ ಪುರವ್‌ ರಾಜ ಅವರಿಂದ ಕೆಲವು ಅನಗತ್ಯ ತಪ್ಪುಗಳು ಮರುಕಳಿಸಿದ್ದು, ಭಾರತ ತಂಡಕ್ಕೆ ಹೊರೆಯಾಯಿತು. ಡಬಲ್ಸ್‌ನಲ್ಲಿ ಸೋತ ಕಾರಣ ಭಾರತ ವಿಶ್ವಬಣಕ್ಕೆ ತೇರ್ಗಡೆಯಾಗುವ ಪ್ರಯತ್ನಕ್ಕೆ ಪ್ರಬಲ ಹೊಡೆತ ಬಿದ್ದಿದೆ. ಮರು ಸಿಂಗಲ್ಸ್‌ನ ಎರಡೂ ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಭಾರತ 16 ರಾಷ್ಟ್ರಗಳು ಭಾಗವಹಿಸುವ ಎಲೈಟ್‌ ವಿಶ್ವಬಣಕ್ಕೆ ತೇರ್ಗಡೆಯಾಗಲಿದೆ. ಆದರೆ ಕೆನಡ ಒಂದು ಪಂದ್ಯ ಗೆದ್ದರೆ ಸಾಕಾಗುತ್ತದೆ.

ರಿವರ್ಸ್‌ ಸಿಂಗಲ್ಸ್‌ ಮೇಲೆ ಕಣ್ಣು
ರಿವರ್ಸ್‌ ಸಿಂಗಲ್ಸ್‌ನ ಮೊದಲ ಪಂದ್ಯದಲ್ಲಿ ರಾಮ್‌ಕುಮಾರ್‌ ರಾಮನಾಥನ್‌ ಅವರು ವಿಶ್ವದ 51ನೇ ರ್‍ಯಾಂಕಿನ ಡೆನಿಸ್‌ ಶಪೋವಾಲೋವ್‌ ಅವರನ್ನು ಎದುರಿಸಲಿದ್ದಾರೆ. ಅವರಿಬ್ಬರು ಶುಕ್ರವಾರ ನಡೆದ ಮೊದಲ ಸಿಂಗಲ್ಸ್‌ನಲ್ಲಿ ಗೆಲುವು ತಮ್ಮ ಎದುರಾಳಿಯೆದುರು ಜಯ ಸಾಧಿಸಿದ್ದರು. ಒಂದು ವೇಳೆ ಈ ಪಂದ್ಯದಲ್ಲಿ ರಾಮ್‌ಕುಮಾರ್‌ ಗೆಲುವು ಸಾಧಿಸಿದರೆ ಎರಡನೇ ಮರು ಸಿಂಗಲ್ಸ್‌ ಪಂದ್ಯಕ್ಕೆ ಹೆಚ್ಚಿನ ಮಹತ್ವ ಬರಲಿದೆ. ಈ ಪಂದ್ಯದಲ್ಲಿ ಯೂಕಿ ಭಾಂಬ್ರಿ ಅವರು ಬ್ರಾಡನ್‌ ಶೂ°ರ್‌ ಅವರನ್ನು ಎದುರಿಸಲಿದ್ದಾರೆ. ಒಂದು ವೇಳೆ ಶಪೋವಾಲೋವ್‌ ಮರು ಸಿಂಗಲ್ಸ್‌ನಲ್ಲಿ ಸೋತರೆ ಕೆನಡ ತಂಡವು ಶೂ°ರ್‌ ಬದಲಿಗೆ ವಾಸೆಕ್‌ ಪಾಸ್ಪಿಸಿಲ್‌ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ.

ಡಬಲ್ಸ್‌ನಲ್ಲಿ ಗೆಲುವು ಸಾಧಿಸಲು ಬೋಪಣ್ಣ ಮತ್ತು ರಾಜ ತೀವ್ರ ಹೋರಾಟ ನಡೆಸಿದರು. ಮೊದಲ ಸೆಟ್‌ನಲ್ಲಿ ಒಂದು ಹಂತದಲ್ಲಿ ಉಭಯ ಜೋಡಿ 5-5 ರಲ್ಲಿ ಸಮಬಲದಲ್ಲಿವು. ಆದರೆ ಆಬಳಿಕ ಕೆನಡ ಜೋಡಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಯಿತು. 2ನೇ ಸೆಟ್‌ ಅನ್ನು ಕೆನಡ ಜೋಡಿ ವಶಪಡಿಸಿಕೊಂಡಿತು. ಆದರೆ ಮೂರನೇ ಸೆಟ್‌ನಲ್ಲಿ ಭಾರತೀಯ ಜೋಡಿ ತಿರುಗೇಟು ನೀಡಿತು. ಇದರಿಂದಾಗಿ ಪಂದ್ಯ ಮತ್ತೆ ರೋಚಕ ಹಂತ ತಲುಪಿತ್ತು. ಅನಂತರ ನಡೆದ 4ನೇ ಸೆಟ್‌ನಲ್ಲಿ ಕೆನಡ ಜೋಡಿ ಮೇಲುಗೈ ಸಾಧಿಸಿ ಪಂದ್ಯವನ್ನು ವಶಪಡಿಸಿಕೊಂಡಿತು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.