ಜೀವ ರಕ್ಷಣೆಗೆ ಸುರಕ್ಷತೆ ಅವಶ್ಯ
Team Udayavani, Sep 18, 2017, 10:05 AM IST
ಕಲಬುರಗಿ: ಜೀವ ಜೀವನ ತುಂಬಾ ಅತ್ಯಮೂಲ್ಯ. ಅದರ ಸುರಕ್ಷತೆಗೆ ಎಚ್ಚರಿಕೆ ವಹಿಸಬೇಕು. ರಕ್ಷಣೆ ಭಾಗವಾಗಿ ಉತ್ತಮವಾಗಿ ಪ್ರಯಾಣಿಸಬೇಕು ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ ಹೇಳಿದರು.
ರವಿವಾರ ಸಂಜೆ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಸುಗಮ, ಸುರಕ್ಷಿತ ಟ್ರಾಫಿಕ್ ಡ್ರೈವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇತ್ತಿಚಿನ ವರ್ಷಗಳಲ್ಲಿ ರಸ್ತೆ ಅಫಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಫಘಾತಗಳಲ್ಲಿ ಬಹುತೇಕವು ನಿರ್ಲಕ್ಷ ಮತ್ತು ಹೆಚ್ಚು ವೇಗದ ಕಾರಣದಿಂದಾಗಿ ನಡೆಯುತ್ತವೆ. ಅವುಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಸುರಕ್ಷಿತ ಪ್ರಯಾಣಕ್ಕಾಗಿ ಮನವಿ ಮಾಡುತ್ತ ಜಾಗೃತಿ ಮೂಡಿಸುವ ಯತ್ನ ಮಾಡುತ್ತಿದೆ. ಅಪಘಾತದ ಸಂದರ್ಭದಲ್ಲಿ ತಲೆಗೆ ಹೆಚ್ಚು ಪೆಟ್ಟಾಗುವುದರಿಂದ ಹೆಲ್ಮೆಟ್ ಕಡ್ಡಾಯವಾಗಿ ಹಾಕಿಕೊಳ್ಳಿ ಎಂದು ಮನವಿ ಮಾಡಿದರು.
ರಸ್ತೆಗಳಲ್ಲಿ ಓಡಾಡುವವರೆಲ್ಲ ಸಹ ಪ್ರಯಾಣಿಕರ ಪ್ರಾಣದ ಕುರಿತು ಎಚ್ಚರಿಕೆ ವಹಿಸುವುದು ಉತ್ತಮ. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಇದರಿಂದ ಅವರನ್ನು ಗುರುತಿಸಲು ಸಹಾಯವಾಗುತ್ತದೆ. ಆಟೋಗಳಲ್ಲಿ ಮುಂದಿನ ಸೀಟುಗಳಲ್ಲಿ ಪ್ರಯಾಣಿಕರನ್ನು ಕೂಡಿಸಿಕೊಳ್ಳಬಾರದು. ಇದರಿಂದ ಉತ್ತವಾಗಿ ಆಟೋ ಓಡಿಸಲು ಚಾಲಕರಿಗೆ ಸಹಾಯವಾಗುತ್ತದೆ. ಬೀದಿಗಳಲ್ಲಿ ವ್ಯಾಪಾರ ಮಾಡಿಕೊಂಡಿರುವರು ಸುಗಮ ಸಂಚಾರಕ್ಕೆ ಅಡ್ಡಿ ಪಡಿಸದೆ ಸಹಕಾರ ನೀಡಬೇಕು ಎಂದರು.
ಪಾಲಿಕೆ ಆಯುಕ್ತ ಪಿ.ಸುನೀಲಕುಮಾರ ಹಾಗೂ ಎಸ್ಪಿ ಶಶಿಕುಮಾರ ಮಾತನಾಡಿದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿ ಲೋಕೇಶ ಬಿ.ಜಿ, ಡಿವೈಎಸ್ಪಿ ಉದಯಕುಮಾರ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು, ಮಹಿಳಾ ಪೇದೆಗಳು ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ