ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಮಹಿಳಾ ಧ್ವನಿ ಹತ್ತಿಕ್ಕುವ ಯತ್ನ


Team Udayavani, Sep 18, 2017, 12:58 PM IST

vij-2.jpg

ವಿಜಯಪುರ: ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾಕ್‌ ಸ್ವಾತಂತ್ರ್ಯ ಇದ್ದರೂ ಪುರುಷ ಪ್ರಧಾನ ಸಮಾಜ ಮಹಿಳೆಯ ಧ್ವನಿಯನ್ನೇ ಹಕ್ಕುತ್ತಿರುವ ಯತ್ನಕ್ಕೆ ಮುಂದಾಗಿರುವುದು ಆತಂಕದ ಸಂಗತಿ ಎಂದು ಹಿರಿಯ ಪತ್ರಕರ್ತ ಡಿ.ವಿ. ರಾಜಶೇಖರ ಕಳವಳ ವ್ಯಕ್ತಪಡಿಸಿದರು.

ರವಿವಾರ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ವಿಷಯಗಳು ಮತ್ತು ಮಾಧ್ಯಮ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಆರ್ಥಿಕ ಕ್ಷೇತ್ರದಲ್ಲಿ ಶೇ. 40ರಷ್ಟು ಮಹಿಳೆಯರು ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ದೊಡ್ಡದಿದೆ. ಆದರೆ ಆರ್ಥಿಕ ವಿಷಯಗಳು ಮತ್ತು ಇನ್ನಿತರ ಗಂಭೀರ ವಿಷಯಗಳ ಕುರಿತು ಬರೆಯುವ ಮಹಿಳಾ ಪತ್ರಕರ್ತೆಯರನ್ನು ಮಾಧ್ಯಮಗಳಲ್ಲಿ ನಾವು ಕಾಣುತ್ತಿಲ್ಲ ಎಂದು ಬೇಸರಿಸಿದ ಅವರು, ಹೆಣ್ಣಿನ ಮೇಲೆ ನಡೆಯುವ ಅತ್ಯಾಚಾರದಂಥ ಪ್ರಕರಣದ ಸಂಗತಿಗಳನ್ನು ಜವಾಬ್ದಾರಿ ಮೀರಿ ಮನರಂಜನೆ ಎಂಬಂತೆ ಬಿತ್ತರ ಮಾಡುತ್ತಿರುವುದು ಮಾಧ್ಯಮಗಳು ಸಾಮಾಜಿಕ ಜವಾಬ್ದಾರಿ ಮರೆತಿರುವುದಕ್ಕೆ ಪ್ರತೀಕ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಆರ್ಥಿಕ ಅಧಿಕಾರಿ ಆರ್‌.ಸುನಂದಮ್ಮ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆ ಕಾನೂನಿನ ಅಡಿಯಲ್ಲಿ ನ್ಯಾಯ ಕೇಳಿದರೂ ಸರಿಯಾದ ರೀತಿಯಲ್ಲಿ ನ್ಯಾಯ ಸಿಗುತ್ತಿಲ್ಲ. ಸಮಾಜದಲ್ಲಿ ನ್ಯಾಯ ದೊರಕದೆ ಸಾಯುತ್ತಿವೆ.

ದೇಶದಲ್ಲಿ ಶೇ. 80ರಷ್ಟು ಅತ್ಯಾಚಾರಗಳು ಮನೆಯಲ್ಲಿಯೇ ನಡೆಯುತ್ತಿವೆ. ಹೀಗಾದರೆ ಮಹಿಳೆಗೆ ಸುರಕ್ಷತೆಯ ಸ್ಥಳ
ಯಾವುದು ಎಂಬ ಪರಿಸ್ಥಿತಿ ಇದೆ. ಇಂದು ಮಹಿಳೆಗೆ ಈ ದುಸ್ಥಿತಿ ಒದಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ರುದ್ರಣ್ಣ ಹರ್ತಿಕೋಟಿ, ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ, ರಶ್ಮಿ ಎಸ್‌., ವಾಸುದೇವ ಹೆರಕಲ್‌, ಕೆ.ಎನ್‌.ರಮೇಶ ಕೆ., ಕೀರ್ತಿ ಇದ್ದರು.

ಹವ್ಯಾಸಿ ಪತ್ರಕರ್ತೆ ಡಾ| ಮಮತಾ ಕೆ.ಎನ್‌. ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ ಪ್ರಾಸ್ತಾವಿಕ ಮತನಾಡಿದರು. ಗೀತಮ್ಮ ಅಂಗಡಿ ಸ್ವಾಗತಿಸಿದರು. ಅಭಿಲಾಷಾ ಆರ್‌., ಸುವರ್ಣ ಕಂಬಿ ಪರಿಚಯಿಸಿದರು. ಜ್ಞಾನಜ್ಯೋತಿ ಚಾಂದಕವಠೆ ನಿರೂಪಿಸಿದರು. ಡಾ| ತಹಮೀನಾ ಕೋಲಾರ ವಂದಿಸಿದರು. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.