ಕಾಸು ಕೊಡುವ ‘ಕೋಸು’


Team Udayavani, Sep 18, 2017, 1:30 PM IST

18-ISIRI-1.jpg

ಹೂ ಕೋಸಿನ ಪರಿಚಯವಿಲ್ಲದ ಜನರೇ ಇಲ್ಲ ಅನ್ನಬಹುದು. ಇದು  ರಾಜ್ಯದ ಸಾವಿರಾರು ರೈತರ ಪಾಲಿಗೆ ಕಾಸು ನೀಡುವ ತರಕಾರಿ. ಈ ಬೆಳೆಯ ಬಗ್ಗೆ ಸರಿಯಾದ ಮಾಹಿತಿ ಇದ್ದರಷ್ಟೇ ಬೆಳೆಯುವತ್ತಾ ಒಲವು ತೋರಬಹುದಾಗಿದೆ. ಒಂಚೂರು ಅನುಭವದ ಕೊರತೆಯಾದರೂ ನಷ್ಟ ಕಟ್ಟಿಟ್ಟ ಬುತ್ತಿ.  ಮಾರುಕಟ್ಟೆಯಲ್ಲಿ ಹೆಚ್ಚಾಗಿ ಬಹುಬೇಡಿಕೆ  ಗಳಿಸಿರುವ ಕೋಸನ್ನು ಬೆಳೆದೇ ಸುಂದರ ಬದುಕನ್ನು ಕಟ್ಟಿಕೊಂಡ ಬ್ಯಾಟಪ್ಪ ಬಂಗಾರಪೇಟೆಯವರು ಕಥೆ ಕೇಳಿ. 

ಬ್ಯಾಟಪ್ಪ ಬಂಗಾರುಪೇಟೆ ತಾಲೂಕಿನ ಸಿದ್ದರಹಳ್ಳಿಯವರು.   ಇವರು ಒಂದು ಎಕರೆಯಲ್ಲಿ ಬೆಳೆದಿರುವ ಇಪ್ಪತ್ತು ಸಾವಿರ ಬುಡಗಳು ಪ್ರತಿ ವರ್ಷ ಒಂದೂವರೆ ಲಕ್ಷ ರೂಪಾಯಿ ಆದಾಯವನ್ನು ನೀಡುತ್ತಿವೆ. ಇವರ ನಾಟಿ ವಿಧಾನ ಇತರರಿಗಿಂತ ಭಿನ್ನ. ಉಳುಮೆ ಮಾಡಿ ನಂತರ ಗದ್ದೆಗೆ ಸಾವಯವ ಗೊಬ್ಬರವನ್ನು ಬೆರೆಸುತ್ತಾರೆ. ಒಂದು ವಾರಗಳ ಕಾಲ ಭೂಮಿಗೆ ಹನಿ ನೀರಾವರಿಯನ್ನು ನೀಡಿ ಭೂಮಿಯಲ್ಲಿ ತೇವಾಂಶವನ್ನು ಉಳಿಸಿಕೊಳ್ಳುತ್ತಾರೆ. ನಂತರ, ಸಸಿಯೊಂದಕ್ಕೆ ಅರವತ್ತು ಪೈಸೆಯಂತೆ ನೀಡಿ ಪಕ್ಕದ ಬೆಳೆಗಾರನೋರ್ವ ಸೂಚಿಸಿದ ನರ್ಸರಿಯೊಂದರಿಂದ ಸ್ಥಳೀಯ ತಳಿಯ  ಖರೀದಿಸಿ ತಂದಿದ್ದಾರೆ. ಬೆಳಗ್ಗೆ ಬೇಗ ಎದ್ದು ಸೂರ್ಯನ ಕಿರಣ ಸೋಕುವ ಮುನ್ನ ಎರಡು ಅಡಿ ಅಂತರ ಬಿಟ್ಟು ಸಾಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಸಸಿಯಿಂದ ಸಸಿಗೆ ಒಂದು ಅಡಿ ಅಂತರ ಬಿಟ್ಟು ಜೂನ್‌ನಲ್ಲಿ ನಾಟಿ ಮಾಡಿದ್ದಾರೆ.

ಎರಡು ದಿನಕ್ಕೊಮ್ಮೆ ಎರಡು ಗಂಟೆಗಳ ಕಾಲ ಹನಿ ನೀರಾವರಿ ವಿಧಾನದ ಮೂಲಕ ಸಸಿಗಳಿಗೆ ನೀರುಣಿಸಿದ್ದಾರೆ. ತಿಂಗಳಿಗೆ ಒಂದು ಬಾರಿ ರಾಸಾಯನಿಕ ಗೊಬ್ಬರ  ನೀಡಿದರೆ, ವಾರದಲ್ಲೆರಡು ಬಾರಿ ಹನಿ ನೀರಾವರಿ ಪೈಪ್‌ ಮೂಲಕ ಸಾವಯವ ಗೊಬ್ಬರವನ್ನು ನೀಡಿದ್ದರಿಂದ ಪಕ್ಕದ ಗದ್ದೆಯಲ್ಲಿರುವ ಕೋಸಿಗಿಂತ ನಾಲ್ಕು ದಿನ ಮುಂಚಿತವಾಗಿಯೇ ಬೆಳೆ ಕೈಗೆ ಬಂದಿದೆ. ಹದಿನೈದು ದಿನದ ಕಾಯಿಯಿಂದ ಆರಂಭವಾಗಿ ಈ ಬೆಳೆ ಮಾರಾಟಕ್ಕೆ ಸಿದ್ಧವಾಗುವ ಎಪ್ಪತ್ತೆ„ದನೇ ದಿನದವರೆಗೂ ಕೋಸಿಗೆ ಕೀಟ, ಹುಳಗಳು ಬಾಧಿಸದಂತೆ ಜಾಗರೂಕತೆ ವಹಿಸಬೇಕಾದುದು ಇಲ್ಲಿ ಮುಖ್ಯ. ವಾರದಲ್ಲೊಂದು ಬಾರಿ ಕೀಟನಾಶಕ ಸಿಂಪಡಿಸುವ ಮೂಲಕ ಹಸಿರು ಹುಳದ ಬಾಧೆ  ಬೆಳೆಗೆ ತಾಗದಂತೆ ನೋಡಿಕೊಂಡಿದ್ದಾರೆ. ಎಲೆ ಮತ್ತು ಹೂವನ್ನು ಜೊತೆಗೇ ಕಟಾವು ಮಾಡಲಾಗುತ್ತದೆ. ಕಟಾವಾದ ನಂತರ ಹದಿನೈದು ದಿನಗಳವರೆಗೆ ಹೂವು ಹಾಳಾಗದಿರುವುದು ಇದರ ವಿಶೇಷ. ಒಂದು ಬುಡದಲ್ಲಿ ಒಂದೇ ಹೂವು ಬರುತ್ತದೆ.  ಒಂದೊಂದು ಕೋಸು ಒಂದರಿಂದ ಒಂದುವರೆ ಕೆ.ಜಿ. ತೂಗುತ್ತಿದ್ದು ಕೆ.ಜಿ.ಗೆ ಹದಿನೈದರಿಂದ ಇಪ್ಪತ್ತು ರೂ. ಬೆಲೆ ಇದೆ .  ಕೋಲಾರದ ವ್ಯಾಪಾರಿಗಳು ಗದ್ದೆಗೆ ಬಂದು ಖರೀದಿ ಮಾಡುತ್ತಾರೆ. ಒಂದು ಎಕರೆಯಲ್ಲಿ ನಾಟಿಗೆ ಎಲ್ಲಾ ಖರ್ಚು ಸೇರಿ ರೂ. 60 ಸಾವಿರ ಖರ್ಚು ತಗಲಿದರೆ ಇವರು ಅದರಿಂದ ಒಂದುವರೆ ಲಕ್ಷ ರೂ. ಆದಾಯವನ್ನು ಪಡೆಯುವ ಮೂಲಕ ಮಾದರಿ ಬೆಳೆಗಾರರೆನಿಸಿಕೊಂಡಿದ್ದಾರೆ. 

ಕೋಸು ತೆಗೆದ ನಂತರ ಕೊತ್ತಂಬರಿ, ಕ್ಯಾಬೇಜ್‌ ಹೀಗೆ ಋತುಗಳಿಗನುಗುಣವಾಗಿ ಬಹು ವಿಧದ ತರಕಾರಿಗಳನ್ನು ಬೆಳೆಯುವುದು ಇವರ ಜಾಣತನ. ಮಾಹಿತಿಗೆ- 8453649944. (ರಾತ್ರಿ 7ರಿಂದ 8 ಮಾತ್ರ) 

ಚಂದ್ರಹಾಸ ಚಾರ್ಮಾಡಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.