ನಾಳೆಯಿಂದ ನವರಾತ್ರಿ ಉತ್ಸವ


Team Udayavani, Sep 19, 2017, 1:01 PM IST

hub4.jpg

ಹುಬ್ಬಳ್ಳಿ: ಶರನ್ನವರಾತ್ರಿ ನಿಮಿತ್ತ ರಾಮಕೃಷ್ಣ- ವಿವೇಕಾನಂದ ಆಶ್ರಮದಲ್ಲಿ ಸೆ.20ರಿಂದ 30ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು, ಆಶ್ರಮದ ವತಿಯಿಂದ 11ನೇ ವರ್ಷದ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ.

ಸೆ.20ರಂದು ಮಧ್ಯಾಹ್ನ 4ರಿಂದ ಮರಾಠಾ ಗಲ್ಲಿಯಿಂದ ಕಲ್ಯಾಣನಗರದ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸೆ.21ರಂದು ಬೆಳಗ್ಗೆ 9ಕ್ಕೆ ದುರ್ಗಾ ಪ್ರತಿಷ್ಠಾಪನೆ ನಡೆಯಲಿದ್ದು, ಬೆಳಗ್ಗೆ 10:30ಕ್ಕೆ ಗಣಹೋಮ, ನವಗ್ರಹ ಹೋಮ, ದುರ್ಗಾ ಹೋಮ ನಡೆಯಲಿದೆ.

ಸಂಜೆ 6:30ಕ್ಕೆ ಮೈಸೂರು ರಾಮಕೃಷ್ಣ ಆಶ್ರಮದ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್‌ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡುವರು ಎಂದು ತಿಳಿಸಿದರು. 22ರಂದು ಬೆಳಗ್ಗೆ 10ಕ್ಕೆ ಧನ್ವಂತರಿ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ವಿದುಷಿ ವೀಣಾ ಬಡಿಗೇರ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪ್ರಸ್ತುತಪಡಿಸುವರು.

ಸಂಜೆ 6:30ಕ್ಕೆ ಬೇಂದ್ರೆ ಭವನದ ಅಧ್ಯಕ್ಷ ಡಾ| ಶಾಮಸುಂದರ ಬಿದರಕುಂದಿ ವಿಶೇಷ ಪ್ರವಚನ ನೀಡುವರು. 23ರಂದು ಬೆಳಗ್ಗೆ 10ಕ್ಕೆ ಲಘುರುದ್ರ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ವಿಜಯಕುಮಾರ ಪಾಟೀಲ ಅವರಿಂದ ಭಕ್ತಿ ಸಂಗೀತ ಜರುಗಲಿದೆ. ಸಂಜೆ 6:30ಕ್ಕೆ ವೀಣಾ ಬನ್ನಂಜೆ ಪ್ರವಚನ ನೀಡುವರು.

ಸೆ.24ರಂದು ಬೆಳಗ್ಗೆ 10ಕ್ಕೆ ಲಕ್ಷ್ಮೀನಾರಾಯಣ ಹೃದಯ ಹೋಮ ನಡೆಯಲಿದೆ. ಬೆಳಗ್ಗೆ 11:30ಕ್ಕೆ ಆಶ್ರಮದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಶ್ರೀಕೃಷ್ಣ ಪಾರಿಜಾತ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು. 25ರಂದು ಬೆಳಗ್ಗೆ 10ಕ್ಕೆ ಶ್ರೀ ಲಲಿತಾ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ಧನುರ್ವಿದ್ಯೆ ಪ್ರದರ್ಶನ ನಡೆಯಲಿದೆ.

ಸಂಜೆ 6:30ಕ್ಕೆ ಶ್ರೀ ರಾಮದರ್ಶನ ಯಕ್ಷಗಾನ ಪ್ರಸಂಗ ನಡೆಯುವುದು. 26ರಂದು ಬೆಳಗ್ಗೆ 10ಕ್ಕೆ ವಿದ್ಯಾರ್ಥಿ ಹೋಮ ಆಯೋಜಿಸಲಾಗಿದೆ. ಸಂಜೆ 6:30ಕ್ಕೆ “ವಿಶ್ವಶಂಕರಾಕ್ಷರ ಯಕ್ಷ ನೃತ್ಯ ರೂಪಕ’ ಯಕ್ಷಗಾನ ಪ್ರಸಂಗ ಜರುಗುವುದು. 27ರಂದು ಬೆಳಗ್ಗೆ 10ಕ್ಕೆ ಸುಬ್ರಮಣ್ಯ ಹೋಮ ನಡೆಯಲಿದ್ದು, ಬೆಳಗ್ಗೆ 11:30ಕ್ಕೆ ಜಾನಪದ ಉತ್ಸವ ನಡೆಯಲಿದೆ.

ಸಂಜೆ 6:30ಕ್ಕೆ ಶಶಿಕಲಾ ದಾನಿ ಹಾಗೂ ಸುಜ್ಞಾನ ದಾನಿ ಅವರಿಂದ ಜಲತರಂಗ ಹಾಗೂ ಗಾಯನ ಜುಗಲ್‌ಬಂದಿ ನಡೆಯವುದು ಎಂದರು. 28ರಂದು ಬೆಳಗ್ಗೆ 10ಕ್ಕೆ ದುರ್ಗಾ ಹೋಮ ನಡೆಯಲಿದೆ. ಬೆಳಗ್ಗೆ 11:30ಕ್ಕೆ ಶ್ರೀನಿಧಿ ಕಾಮತ ಅವರಿಂದ ಭಕ್ತಿ ಸಂಗೀತ ಜರುಗಲಿದೆ. ಸಂಜೆ 6:30ಕ್ಕೆ ಇಮಾಮ್‌ಸಾಬ್‌ ವಲ್ಲೆಪ್ಪನವರ ಹಾಗೂ ಸಂಗಡಿಗರಿಂದ ಜಾನಪದ ಸಂಗೀತ ಕಾರ್ಯಕ್ರಮವಿದೆ.

ಸೆ.29ರಂದು ಬೆಳಗ್ಗೆ 10ಕ್ಕೆ ವಿಷ್ಣು ಸಹಸ್ರನಾಮ ಹೋಮವಿದ್ದು, ಬೆಳಗ್ಗೆ 11:15ಕ್ಕೆ ಪೂಜಾ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ವಿದ್ಯಾ ವೈದ್ಯ ಅವರಿಂದ ವೀಣಾವಾದನ ನಡೆಯಲಿದೆ. ಸಂಜೆ 6ಕ್ಕೆ ಭರತನಾಟ್ಯ ಪ್ರದರ್ಶನ, ಸಂಜೆ 7ಕ್ಕೆ “ಜಗತ್‌ ಜನನಿ ನೃತ್ಯ ರೂಪಕ’ ಪ್ರದರ್ಶನಗೊಳ್ಳಲಿದೆ.

ಸೆ.30ರಂದು ಬೆಳಗ್ಗೆ 10ಕ್ಕೆ ಗಾಯತ್ರಿ ಹೋಮ ನಡೆಯಲಿದ್ದು, ಸಂಜೆ 5:30ಕ್ಕೆ ದುರ್ಗಾದೇವಿ ಮೂರ್ತಿ ಮೆರವಣಿಗೆ ಹಾಗೂ ಡೊಳ್ಳು ಕುಣಿತದೊಂದಿಗೆ ಉಣಕಲ್ಲ ಕೆರೆಯಲ್ಲಿ ವಿಸರ್ಜನೆ ಮಾಡಲಾಗುವುದು ಎಂದರು. ಆಶ್ರಮದ ಟ್ರಸ್ಟಿ ಎಂ.ಎ. ಸುಬ್ರಮಣ್ಯ ಹಾಗೂ ವಿನಯ ಮಹಾರಾಜ್‌ ಇದ್ದರು. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.