ಶಿರಾಡಿ ಘಾಟಲ್ಲಿ ಡಬಲ್ ಡೆಕ್ಕರ್
Team Udayavani, Sep 21, 2017, 9:07 AM IST
ಹೊಸದಿಲ್ಲಿ: ದಶಕಗಳ ಹಿಂದೆ ಬೆಂಗಳೂರು ನಗರದಲ್ಲಿ ಡಬಲ್ ಡೆಕ್ಕರ್ ಬಸ್ ಸಂಚಾರ ವಿತ್ತು. ಅದೇ ಮಾದರಿಯ ಬಸ್ ಸಂಚಾರ ಮಂಗಳೂರಿನಿಂದ ಬೆಂಗಳೂರಿಗೆ ಶಿರಾಡಿ ಘಾಟ್ ಮೂಲಕ ಸಂಚರಿಸಿದರೆ ಹೇಗೆ ಇರುತ್ತದೆ? ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅದೇ ಮಾದರಿಯ ಐಷಾರಾಮಿ ಬಸ್ಗಳನ್ನು ಓಡಿಸಲು ಕೇಂದ್ರ ಚಿಂತನೆ ನಡೆಸುತ್ತಿದೆ. ಕರ್ನಾಟಕ ಸೇರಿದಂತೆ ಎಂಟಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂಥ ಸೇವೆ ಜಾರಿಯಾಗಲಿದೆ.
ಅತಿ ದೂರದ ಪ್ರಮುಖ ನಗರಗಳಿಗೆ ಈ ಸೇವೆ ಒದಗಿಸುವುದು ಇದರ ಉದ್ದೇಶ. ದೇಶದಲ್ಲಿ ಒಟ್ಟು 75 ಮಾರ್ಗಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಬೆಂಗಳೂರು- ಮಂಗಳೂರು, ದಿಲ್ಲಿ-ಆಗ್ರಾ, ದಿಲ್ಲಿ- ಜೈಪುರ, ಲಕ್ನೋ-ಗೋರಖ್ಪುರ, ವಡೋದರ- ಮುಂಬೈ, ಶ್ರೀನಗರ- ಜಲಂದರ್, ಕಲ್ಲಿಕೋಟೆ-ಕೊಚ್ಚಿ ಹಾಗೂ ವಿಶಾಖಪಟ್ಟಣ -ಭುವನೇಶ್ವರ ಮಹತ್ವದ್ದಾಗಿವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದ್ದಾರೆ. ಅಲ್ಲದೆ, ಈ ಯೋಜನೆಗಾಗಿ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಕೇಂದ್ರ ಹಣಕಾಸಿನ ನೆರವನ್ನೂ ನೀಡಲಿದೆ. ಮೂಲಗಳ ಪ್ರಕಾರ ಮೊದಲ ಮೂರು ವರ್ಷ ಪ್ರತಿ ಕಿಲೋಮೀಟರ್ಗೆ 10 ರೂ.ನಂತೆ ಟಿಕೆಟ್ ದರ ನಿಗದಿಪಡಿಸಲಿದೆ.
ಪ್ರಯಾಣಿಕರ ಪ್ರಮಾಣ ಕುಸಿತ: ರಾಷ್ಟ್ರೀಯ ಹೆದ್ದಾರಿಯಲ್ಲಿ 30,000 ಕಿಲೋಮೀಟರ್ನಲ್ಲಿ ನಡೆಸಲಾದ ಟ್ರಾಫಿಕ್ ಸರ್ವೆಯೊಂದರ ಪ್ರಕಾರ ಸರಕಾರಿ ಬಸ್ಗಳಲ್ಲಿ ಓಡಾಡುವವರ ಸಂಖ್ಯೆ ಕುಸಿತ ಕಂಡಿದೆ. 2016ರಲ್ಲಿ 45%ರಷ್ಟಿತ್ತು. 2017ರಲ್ಲಿ 40%ಕ್ಕೆ ಕುಸಿದಿದೆ. ಕಾರಿನಲ್ಲಿ ಓಡಾಡುವವರ ಸಂಖ್ಯೆ 55%ರಿಂದ 60%ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ